NEWSನಮ್ಮರಾಜ್ಯ

ಸತತ ಮೂರು ದಿನಗಳ ರಜೆ ಹಿನ್ನೆಲೆ- ರಾಜ್ಯದ ಹಲವೆಡೆ ಬಿಎಂಟಿಸಿ ಬಸ್‌ಗಳ ಸಂಚಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಳೆಯಿಂದ ಅಂದರೆ ಜ.24ರ ಶನಿವಾರದಿಂದ ಸತತ ಮೂರು ದಿನಗಳ ರಜೆ ಇರುವ ಹಿನ್ನೆಲೆಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್‌ಗಳು ರಾಜ್ಯದ ವಿವಿಧ ಮಾರ್ಗಗಳಲ್ಲಿ ಸಂಚಾರ ಮಾಡಲಿವೆ.

ಬಿಎಂಟಿಸಿಯಿಂದ ಹೆಚ್ಚುವರಿ ಬಸ್‌ಗಳ ನಿಯೋಜನೆಯನ್ನು ಇಂದಿನಿಂದಲೇ ಮಾಡಲಾಗಿದ್ದು, ಇಂದು 260ಕ್ಕೂ ಹೆಚ್ಚು ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚಾರ ನಡಸುತ್ತಿದೆ.

ಹೌದು! ಜ.24 ನಾಲ್ಕನೇ ಶನಿವಾರ, ಜ.25 ಭಾನುವಾರ ಹಾಗೂ ಜ.26ರಂದು ಗಣರಾಜ್ಯೋತ್ಸವ ಇದೆ. ಈ ಸಾಲುಸಾಲು ರಜೆ ಇರುವ ಹಿನ್ನೆಲೆ ಬೆಂಗಳೂರು ನಗರದಿಂದ ಇತರೆ ಜಿಲ್ಲಾ ಕೇಂದ್ರಗಳು ಹಾಗೂ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ತೊಂದರೆ ಆಗದಂತೆ ಕೆಎಸ್‌ಆರ್‌ಟಿಸಿ ಬಸ್‌ಗಳ ಜತೆ ಬಿಎಂಟಿಸಿ ಬಸ್‌ಗಳು ಕೂಡ ಓಡಾಟ ನಡೆಸಲಿವೆ.

ರಾಜ್ಯದ ಹಲವು ಜಿಲ್ಲೆಗಳಿಗೆ ಬಿಎಂಟಿಸಿ ಬಸ್‌ಗಳು ಸಂಚರಿಸಲಿದ್ದು, ಈ ಮೊದಲೇ ಹೇಳಿದಂತೆ ಇಂದು 260ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳು ಓಡಾಡುತ್ತಿವೆ. ಇನ್ನು ನಾಳೆ ಅಂದರೆ ಶನಿವಾರ 500ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳ ಸಂಚಾರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ