CrimeNEWSನಮ್ಮಜಿಲ್ಲೆ

BMTC: ಡಿಪೋ 21ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕನ ಕುಟುಂಬ ಪರ ನಿಂತ ನೌಕರರ ವಿರುದ್ಧದ ಪ್ರಕರಣ- 8 ಮಂದಿಗೆ ಜಾಮೀನು ಮಂಜೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬಿಎಂಟಿಸಿ ಚಾಲಕನ ಕುಟುಂಬ ಪರನಿಂತ ಸಂಸ್ಥೆಯ ನೌಕರರು ಮತ್ತು ಎಎಪಿ ಮುಖಂಡರ ವಿರುದ್ಧ ದಾಖಲಾಗಿದ್ದ ಪೊಲೀಸ್‌ ಪ್ರಕರಣ ಸಂಬಂಧ ಇಂದು 8 ಮಂದಿಗೆ 46ನೇ ಎಸಿಎಂಎಂ ನ್ಯಾಯಾಲಯ ಕೆಲ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ.

ಮಂಗಳವಾರ ಎಸಿಎಂಎಂ 46ನೇ ಕೋರ್ಟ್‌ ಹಾಲ್‌ನಲ್ಲಿ ಪ್ರಕರಣ ಸಂಬಂಧ ಆರೋಪಿತರ ಪರ ಸುಪ್ರೀಂ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ. ಶಿವರಾಜು ಅವರು ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು 8 ಮಂದಿಗೆ ಮಧ್ಯಾಹ್ನ ಜಾಮೀನು ಮಂಜೂರು ಮಾಡಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಸಂಸ್ಥೆಯ ನೌಕರರಾದ ಎಚ್‌.ಡಿ.ನಾಗೇಂದ್ರ, ಎಚ್‌.ಆರ್‌.ಜಗದೀಶ್‌, ಪಿ.ಹರೀಶ್‌ಗೌಡ, ಎನ್‌.ಸುಧಾಕರರೆಡ್ಡಿ, ಲಕ್ಷ್ಮಣ ಮಗವೀರ್‌ ಸೇರಿದಂತೆ 8 ಮಂದಿಗೆ ಕೋರ್ಟ್‌ ಜಾಮೀನು ನೀಡಿದ್ದು,  ಹೈ ಕೋರ್ಟ್‌ನಲ್ಲಿ ಈ ಪ್ರಕರಣ ರದ್ದು ಕೋರಿ  ಅರ್ಜಿ ಹಾಕಲಾಗುವುದು ಎಂದು ವಕೀಲ ಶಿವರಾಜು ತಿಳಿಸಿದ್ದಾರೆ.

ನೌಕರರಿಂದ ಯಾವುದೆ ಫೀ ಪಡೆಯದೆ ಉಚಿತವಾಗಿ ವಕಾಲತ್ತು ವಹಿಸಿ ಇಂದು ಜಾಮೀನು ಮಂಜೂರು ಮಾಡಿಸಿಕೊಟ್ಟಿದ್ದು ವಕೀಲರಿಗೆ ನಾವು ಸದಾ ಅಭಾರಿಯಾಗಿದ್ದೇವೆ ಎಂದು ಸಂಸ್ಥೆ ಮಾಜಿ ನೌಕರ ಎಚ್‌.ಆರ್‌.ಜಗದೀಶ್‌ ತಿಳಿಸಿದ್ದಾರೆ.

ಚನ್ನಸಂದ್ರ ಬಿಎಂಟಿಸಿ ಡಿಪೋ ಬಳಿ ಮುಂಜಾನೆಯಿಂದ ನೌಕರರ ಧರಣಿ, ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲು ಆಗ್ರಹ

ಪ್ರಕರಣವೇನು?: ಬಿಎಂಟಿಸಿ ಘಟಕ -21ರಲ್ಲಿ ಮೇಲಧಿಕಾರಿಗಳ ಕಿರುಕುಳದಿಂದ ನೊಂದು ಚಾಲಕ ಹೊಳೆ ಬಸಪ್ಪ ಎಂಬುವರು 30 ಅಗಸ್ಟ್‌ 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಾಲಕನ ಆತ್ಮಹತ್ಯೆಗೆ ಕಾರಣವಾದ ಅಧಿಕಾರಿಗಳನ್ನು ವಜಾ ಮಾಡಬೇಕು ಹಾಗೂ ಮೃತರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಅಂದು ಹೋರಾಟ ಮಾಡಲಾಗಿತ್ತು.

ಚಾಲಕ ಹೊಳೆ ಬಸಪ್ಪ ಘಟಕದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಎಪಿ ಮುಖಂಡರು ಸೇರಿದಂತೆ ಅಂದು ರಾತ್ರಿ ವರೆಗೂ ಹೋರಾಟ ಮಾಡಿದ 19 ಮಂದಿ ವಿರುದ್ಧ ಬಿಎಂಟಿಸಿ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದರು.

ಸಚಿವರು ಸ್ಥಳಕ್ಕೆ ಬರಲೇ ಬೇಕು- ಬಿಎಂಟಿಸಿ ಡಿಪೋದಲ್ಲಿ ಶವವಿಟ್ಟುಕೊಂಡು ಅಹೋರಾತ್ರಿ ಧರಣಿ : ಘೋಷಣೆ ಮಾಡಿದ ಎಎಪಿ

ನ್ಯಾಯ ಕೇಳಲು ಬಂದಿದ್ದ ನೌಕರರು ಮತ್ತು ಎಎಪಿ ಮುಖಂಡರ ವಿರುದ್ಧವೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಅಂದು ಸಂಸ್ಥೆಯ ಅಧಿಕಾರಿಗಳು ತಪ್ಪು ಮಾಡಿದವರನ್ನು ಬಿಟ್ಟು ಅಮಾಯಕರ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಿಸಿದ್ದರಿಂದ ಇಂದುಯಾವುದೇ ತಪ್ಪು ಮಾಡದವರನ್ನು ಕೋರ್ಟ್‌ಗೆ ಅಲೆಯುವಂತೆ ಮಾಡಿದ್ದಾರೆ.

ಈ ಪ್ರಕರಣ ಸಂಬಂಧ ಇಂದು ಎಸಿಎಂಎಂ 46ನೇ ಕೋರ್ಟ್‌ ಹಾಲ್‌ನಲ್ಲಿ ಪ್ರಕರಣದ ವಿಚಾರಣೆ ನಡೆದು 8 ಮಂದಿಗೆ ಜಾಮೀನು ಸಿಕ್ಕಿದೆ. ಇನ್ನು ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ