NEWSನಮ್ಮಜಿಲ್ಲೆಬೆಂಗಳೂರು

BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್‌ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್‌ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ ಡ್ಯೂಟಿ ರೋಟಾ ಪದ್ಧತಿ ಹಾಗೂ ಇತ್ಯಾದಿ ವಿಷಯಗಳ ಸಂಬಂಧವಾಗಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಅಂದರೆ ಸಂಸ್ಥೆಯ ನಿರ್ವಾಹಕರಾಗಿರುವವರ ಮೂಲವೇತನ 24 ಸಾವಿರ ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರ ಮೂಲವೇತ 27 ಸಾವಿರ ರೂ. ಮೂಲವೇತನದವರೆಗೆ ನಿಗದಿಪಡಿಸುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.

ನಗರದ ಶಾಂತಿನಗರದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಇದೇ ಜೂನ್‌ 12ರಂದು ನಡೆದ ಸಭೆಯಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳು ಕೆಲ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಈ ಸಭೆಯಲ್ಲಿ ಸಂಶ್ಥೆಯ ಉತ್ತರ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಹೊರತುಪಡಿಸಿ ಉಳಿದ ಎಲ್ಲ ವಲಯಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿ (ಆ), ಎಲ್ಲ ವಲಯಗಳ ವಿಭಾಗೀಯ ಸಂಚಾರ ಅಧಿಕಾರಿಗಳು (ವಾಯುವ್ಯ ವಲಯ ಹೊರತುಪಡಿಸಿ) ಹಾಜರಿದ್ದರು.

ಈ ಹಿಂದೆ ಅಂದರೆ ಇದೇ ಜೂನ್‌ 5ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲ ಘಟಕಗಳಲ್ಲಿ ಈಗಾಗಲೇ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳ ಹಾಗೂ ಎಲ್ಲ ಚಾಲನಾ ಸಿಬ್ಬಂದಿಗಳ ಅಂಕಿ-ಅಂಶವನ್ನು ಅಭ್ಯಸಿಸಿ, ಸಾಮಾನ್ಯ ಪಾಳಿ ಅನುಸೂಚಿಗಳ ಕರ್ತವ್ಯ ನಿಯೋಜನೆ ಸಂಬಂಧ ನಿರ್ವಾಹಕರಿಗೆ 24,000 ರೂ. ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರಿಗೆ 27,000 ರೂ. ಮೂಲವೇತನ ಪಡೆಯುವವರನ್ನು ನಿಯೋನೆ ಮಾಡುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.

ಅಲ್ಲದೆ ಅಧಿಕ ಹೆಚ್ಚುವರಿ ಗಂಟೆ (Over time) ಇರುವ ಸಾಮಾನ್ಯ ಪಾಳಿ ಅನುಸೂಚಿಗಳನ್ನು ಪಾಳಿ ಮತ್ತು ರಾತ್ರಿ ವಸತಿ ಪಾಳಿಯಾಗಿ ಪರಿವರ್ತಿಸಲು ಪ್ರಸ್ತಾವನೆ ನೀಡುವಂತೆ ತಿಳಿಸಲಾಯಿತು.

Light Duty Committeeಯು ಮಾರ್ಗದ ಮೇಲೆ Light Duty ಕರ್ತವ್ಯಕ್ಕೆ ಶಿಫಾರಸು ಮಾಡಿದ ಚಾಲನಾ ಸಿಬ್ಬಂದಿಗಳಿಗಾಗಿ ಘಟಕಗಳಲ್ಲಿನ ಒಟ್ಟು ಶೇ.2 ಅನುಸೂಚಿಗಳನ್ನು ಮೀಸಲಿಡುವುದು.

ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರನ್ನು, ಚಾಲಕರ ಜೇಷ್ಠತಾ ಪಟ್ಟಿಗೆ ಸೇರಿಸಿಕೊಳ್ಳುವುದು. ಸಭೆಯಲ್ಲಿ ಚರ್ಚಿಸಿದಂತೆ ಅಗತ್ಯ ಕ್ರಮ ವಹಿಸಲು ತಿಳಿಸಿದ ಮುಖ್ಯ ಸಂಚಾರ ವ್ಯವಸ್ಥಾಪಕರು ಸಭೆಯನ್ನು ಪೂರ್ಣಗೊಳಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ