ಬೆಂಗಳೂರು: ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಚಾಲಕ ಆಕೆ ಮೇಲೆ ನುಗ್ಗಿಸಲು ಯತ್ನಿಸಿದ ಘಟನೆ ಹೊಸ ತಿರುವು ಪಡೆದಿದ್ದು, ಚಾಲಕನನ್ನು ಅಮಾನತು ಮಾಡಲಾಗಿದೆ. ಮೇ 23ರಂದು ನಡೆದ ಘಟನೆ ಸಂಬಂಧ ಇಂದು ಚಾಲಕನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಈ ಘಟನೆಯ ಸಂಪೂರ್ಣ ದೃಶ್ಯಗಳು ಕಾರಿನ ಡ್ಯಾಶ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಯುವತಿ ಬಸ್ಗೆ ಅಡ್ಡವಾಗಿ ನಿಲ್ಲುವುದಕ್ಕೆ ಮುಂಚೆ ನಡೆದಿದ್ದೇನು ಅನ್ನೋ ತನಿಖೆ ಸಹ ಮುಂದುವರಿದಿದೆ. ಮೇ 23ರಜೆ 5.40ಕ್ಕೆ ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ಈ ಘಟನೆ ನಡೆದಿತ್ತು.
ಈ ವೇಳೆ ಯುವತಿ ಜಸ್ಟ್ ಮಿಸ್ ಆದ ದೃಶ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು ಯುವತಿ ಮೇಲೆ ಬಸ್ ನುಗ್ಗಿಸಲು ಚಾಲಕ ಮುಂದಾಗಿದ್ದು, ಸ್ವಲ್ಪ ಯಾಮಾರಿದ್ರು ಯುವತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನಿಸಿದ ವೇಳೆ ಬಸ್ ನಿಲ್ಲಿಸಲು ಕಾರು ಚಾಲಕ ಹೇಳಿದರೂ ನಿಲ್ಲಿಸದೇ ಚಾಲನೆ ಮಾಡಿದ್ದಾನೆ. ಅಲ್ಲದೆ ಅತಿವೇಗ ಹಾಗೂ ಅಜಾಗರೂಕತೆಯ ಅಪರಾಧ ಮಾಡಿದ್ದಕ್ಕೆ ಬಿಎಂಟಿಸಿ ಚಾಲಕ ಪ್ರಶಾಂತ್ ಎಂಬುವರನ್ನು ಅಮಾನತು ಮಾಡಲಾಗಿದೆ.
ನಿಜವಾಗಿ ಅಂದು ನಡೆದಿದ್ದೇನು?: ಮೇ 23ರಂದು ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಕಿರಿಕ್ ಆಗಿತ್ತು. ರೊಚ್ಚಿಗೆದ್ದ ಯುವತಿ ಬಸ್ ಚಾಲಕನ ಪ್ರಶ್ನೆ ಮಾಡಲು ಬಸ್ ಅಡ್ಡಗಟ್ಟಿದ್ದರು. ಆದರೆ ಡ್ರೈವರ್ ಯುವತಿಯನ್ನು ಲೆಕ್ಕಿಸದೇ ಬಸ್ ನುಗ್ಗಿಸಿದ್ದ. ಚಾಲಕನ ಈ ಕೃತ್ಯ ನೋಡಿದ ಜನ ಬೆಚ್ಚಿಬಿದ್ದಿದ್ದರು.
ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನ ಪ್ರಶ್ನೆ ಮಾಡಿದ್ದರು. ಈ ಘಟನೆಗೂ ಮುಂಚೆ ಯುವತಿ ಮತ್ತು ಬಸ್ ಡ್ರೈವರ್ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಬಸ್ ಚಾಲಕ ಹೇಳೋದೇನು?: ಬಿಎಂಟಿಸಿ ಚಾಲಕ ಪ್ರಶಾಂತ್ ಮಾಧ್ಯಮಗಳೊಂದಿಗೆ ಮಾತನಾಡಿ, ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ನಡೆದಿದ್ದು. ಅದಕ್ಕೂ ಮುಂಚೆ ಹಡ್ಸನ್ ಸಿಗ್ನಲ್ನಲ್ಲಿ ಟ್ಯಾಂಕರ್ ಹಾಗೂ ಬಿಎಂಟಿಸಿ ಬಸ್ ಮುಂದೆ ಲೇಡಿ ಕಾರು ಓಡಿಸಿಕೊಂಡು ಬಂದರು. ಆಗ ಲೇಡಿಗೆ ಟ್ಯಾಂಕರ್ ಚಾಲಕ ಬೈದಿದ್ದರು.
ನಂತರ ಕಾರ್ಪೋರೇಷನ್ ಸಿಗ್ನಲ್ನಲ್ಲಿ ಜನ ಹತ್ತಿಸಿಕೊಳ್ಳುವಾಗ ನಾನು ನಿಮ್ಮ ಜಗಳದಲ್ಲಿ ನಮಗೆ ಒಂದು ಸಿಗ್ನಲ್ ಹೋಯ್ತು ಅಂತಾ ನಾನು ಬೈದೆ. ಅಷ್ಟಕ್ಕೆ ಬಿಎಂಟಿಸಿ ಬಸ್ ಮುಂದೆ ಯುವತಿ ಕಾರನ್ನು ಬಸ್ ಮುಂದಕ್ಕೆ ಹೋಗದ ಹಾಗೆ ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಹೋದರು.
ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ಬಸ್ ನಿಲ್ಲಿಸಿದಾಗ ನನಗೆ ಅವಾಚ್ಯ ಶಬ್ದದಿಂದ ಬೈದು ನನ್ನ ಮೇಲೆ ಹಲ್ಲೆ ಮಾಡಲು ಮುಂದಾದ್ರು. ಬಸ್ನಿಂದ ಕೆಳಗೆ ಇಳಿ ಅಂತಾ ಅವಾಜ್ ಕೂಡ ಹಾಕಿದ್ರು. ನನ್ನ ತಪ್ಪು ಇಲ್ಲದೇ ನಾನು ಯಾಕೆ ಕೆಳಗೆ ಇಳಿಯಬೇಕು ಅಂತ ನಾನು ಇಳಿದಿಲ್ಲ. ಯುವತಿಯ ಎಡಭಾಗಕ್ಕೆ ಬಸ್ ಚಲಾಯಿಸಿದೇ ಹೊರತು ನಾನು ಯುವತಿ ಮೇಲೆ ನುಗ್ಗಿಸಲು ಪ್ರಯತ್ನಿಸಿಲ್ಲ. ಕಬ್ಬನ್ ಪೇಟೆ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ಎಎಫ್ಆರ್ ಆಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಬಿಎಂಟಿಸಿ ಕೂಡ ಸ್ಪಷ್ಟನೆ ನೀಡಿದೆ. ಜೆ.ಜೆ.ನಗರದಿಂದ ನಾಗವಾರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಬಸ್ನ ಹಿಂಬದಿ ಬಲಭಾಗವು, ಹಿಂದಿನಿಂದ ಬರುತ್ತಿದ್ದ ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಅಪಘಾತದ ನಂತರ, ಕಾರು ಚಲಾಯಿಸುತ್ತಿದ್ದ ಮಹಿಳೆ ತನ್ನ ವಾಹನದಿಂದ ಇಳಿದು ಬಸ್ನ ಮುಂದೆ ನಿಂತು ಅಡ್ಡಗಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಚಾಲಕನನ್ನು ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಇಲಾಖಾ ಮಟ್ಟದ ಹೆಚ್ಚಿನ ವಿಚಾರಣೆ ಮುಂದುವರೆದಿದೆ. ತನಿಖೆಯ ಫಲಿತಾಂಶದ ಆಧಾರದಲ್ಲಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...