Crimeನಮ್ಮಜಿಲ್ಲೆಬೆಂಗಳೂರು

BMTC: ರಾತ್ರಿ ಏಕಾಏಕಿ ಕೆಂಪಾಪುರ ಸರ್ವೀಸ್ ರಸ್ತೆಯಲ್ಲಿ ಧಗಧಗಿಸಿದ ಎಲೆಕ್ಟ್ರಿಕ್‌ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೆಬ್ಬಾಳ ಬಳಿಯ ಕೆಂಪಾಪುರ ಸರ್ವೀಸ್ ರೋಡ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್‌ ಧಗಧಗಿಸಿ ಉರಿದು ಭಸ್ಮವಾದ ಘಟನೆ ನಿನ್ನೆ (ಸೋಮವಾರ) ರಾತ್ರಿ 11:30 ಸುಮಾರು ಸಮಯದಲ್ಲಿ ಸಂಭವಿಸಿದೆ.

ಇತ್ತೀಚಿನ ದಿನಗಳಲ್ಲಿ ಸಂಸ್ಥೆಯ ಎಲೆಕ್ಷ್ರಾನಿಕ್‌ ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿಯುತ್ತಿರುವುದು ಸಾಮಾನ್ಯ ಎಂಬಂತಾಗಿದ್ದು ಬಿಡದ ಡಿಪೋನಲ್ಲಿ ಬಸ್‌ ಉರಿದ ಘಟನೆ ಮಾಸುವ ಮುನ್ನವೇ ಅದೇ ರೀತಿ ಸೋಮವಾರ ರಾತ್ರಿ ಕೆಂಪಾಪುರ ಸರ್ವಿಸ್ ರಸ್ತೆಯಲ್ಲಿ ಬಿಎಂಟಿಸಿ ಇ.ವಿ.ಬಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಭಸ್ಮವಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಸುತ್ತಲೂ ಮಂಜಿನಂತೆ ದಟ್ಟ ಹೊಗೆ ಆವರಿಸಿದೆ. ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲೇ ಇಳಿಸಿದ್ದರಿಂದ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ರಾತ್ರಿ 11.30ರವೇಳೆಗೆ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಬ್ಯಾಟರಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ತಕ್ಷಣ ಎಚ್ಚೆತ್ತುಕೊಂಡು ಬಸ್‌ನಿಂದ ಇಳಿದಿದ್ದಾರೆ.

ಇನ್ನು ಈ ದೃಶ್ಯ ಕಂಡು ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬೆಂಗಳೂರಿನ ಜೀನನಾಡಿ ಸಾರಿಗೆಯಲ್ಲೊಂದಾದ ಬಿಎಂಟಿಸಿ ಬಸ್‌ಗಳು ದಿನದ ಬೆಳ್ಳಗೆಯಿಂದಲೂ ಸಂಜೆವರೆಗೂ ಯಾವುದೇ ತಾಪವನ್ನು ಲೆಕ್ಕಿಸದೇ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಹೊತ್ತೊಯ್ಯುತ್ತಲೇ ಇರುತ್ತವೆ.

ಈ ಸಾರಿಗೆಗಳಲ್ಲಿ ಕೆಸಲ ಮಾಡುವ ಚಾಲಕ ಮತ್ತು ನಿರ್ವಾಹಕರ ಪಾಡಂತೂ ಹೇಳತೀರದಾಗಿದೆ. ಯಾವಾಗ ವಿಶ್ರಾಂತಿಗೆ ನೆಲ ಸಿಗುತ್ತದೆಯೋ ಎನ್ನುವ ಪರಿಸ್ಥಿತಿಯಲ್ಲಿರುತ್ತಾರೆ. ಈ ನಡುವೆ ಈರೀತಿ ಬಸ್‌ ಏಕಾಏಕಿ ಹೊತ್ತಿಉರಿದರೆ ಚಾಲನಾ ಸಿಬ್ಬಂದಿಯ ಪಾಡೇನು. ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳು ಇತ್ತೀಚೇಗೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಅದೇ ರೀತಿ ನಿನ್ನೆ ರಾತ್ರಿ 10.30ರ ಸುಮಾರಿಗೆ ಈ ಬಸ್‌ ಕೆಟ್ಟು ನಿಂತಿದೆ. ಹೀಗಾಗಿ ಬಸ್‌ ರಿಪೇರಿ ಮಾಡಲು ತಾಂತ್ರಿಕ ಸಿಬ್ಬಂದಿ ಬಂದಿರಬೇಕು. ಈ ವೇಳೆ ಈ ಅವಘಡ ಸಂಭವಿಸಿರಬಹುದು ಎಂದು ಕೂಡ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ.

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌