NEWSನಮ್ಮಜಿಲ್ಲೆನಮ್ಮರಾಜ್ಯ

ಕೇಸ್‌ ದಾಖಲಾಗಿರುವ ಸಾರಿಗೆ ನೌಕರರು FIR ಪ್ರತಿ ಕಳಿಸಿ – ಹೈ ಕೋರ್ಟ್‌ಗೆ ಅರ್ಜಿ..

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ಮಾಡಿದ ಮುಷ್ಕರದ ಸಮಯದಲ್ಲಿ  ನೌಕರರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳ FIRಕಾಪಿಗಳನ್ನು ತುರ್ತಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘಕ್ಕೆ ಕೊಡಬೇಕು ಎಂದು ಮತ್ತೊಮ್ಮೆ ಸಂಘದ ಖಜಾಂಚಿ ಯೋಗೇಶ್‌ ಮನವಿ ಮಾಡಿದ್ದಾರೆ.

ಮುಷ್ಕರದ ಸಮಯದಲ್ಲಿ ಬಿಎಂಟಿಸಿಯ  ಸುಮಾರು 83 ನೌಕರರು ಮತ್ತು ನೌಕರರ ಕುಟುಂಬದವರ ವಿರುದ್ಧ FIRಗಳನ್ನು ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲು ಮಾಡಲಾಗಿದೆ.

ಈಗ ಮತ್ತೆ ಅವರನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳುವುದಕ್ಕೆ ಇದು ಅಡ್ಡಿಯಾಗುತ್ತಿದೆ. ಹೀಗಾಗಿ ಈ ಎಲ್ಲ ಪ್ರಕರಣಗಳನ್ನು ಕೈ ಬಿಡುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುತ್ತಿದೆ. ಅವರು ಎಲ್ಲ ಪ್ರಕರಣಗಳನ್ನು ರದ್ದು ಪಡಿಸಿದರೆ ನೌಕರರಿಗೆ ಅನುಕೂಲವಾಗಲಿದೆ.

ಈ ಹಿನ್ನೆಲೆಯಲ್ಲಿ ಯಾರಾರ ವಿರುದ್ಧ FIR ಆಗಿದೆಯೋ ಅವರೆಲ್ಲ ಕೂಡಲೇ ಮೊ.ನಂ: 9845822996ಗೆ FIR ಕಾಪಿಗಳನ್ನು ವಾಟ್ಸ್‌ಆಪ್‌ ಮಾಡಬೇಕು ಎಂದು ತಿಳಿಸಿದ್ದಾರೆ.

ಇದಿಷ್ಟೇ ಅಲ್ಲದೆ ಒಂದು ವೇಳೆ FIR ರದ್ದು ಪಡಿಸಲು ಗೃಹ ಸಚಿವರು ವಿಳಂಬ ಮಾಡಿದರೆ ನೌಕರರ ಸಂಘವು ಹೈ ಕೋರ್ಟ್‌ನಲ್ಲಿ FIR ರದ್ದು ಕೋರಿ ಅರ್ಜಿಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಯಾರು ಪೊಲೀಸ್‌ ಪ್ರಕರಣ ಎದುರಿಸುತ್ತಿದ್ದೀರೋ ಅವರೆಲ್ಲರೂ ತಮ್ಮ ತಮ್ಮ FIR ಕಾಪಿಗಳನ್ನು ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

 

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...