ಬೆಂಗಳೂರು: ಬ್ಯಾಂಕ್ ಆಫ್ ಬರೋಡದೊಂದಿಗೆ ವೇತನ ಖಾತೆ ಹೊಂದಿರುವ ನೌಕರರಿಗೆ 1.25 ಕೋಟಿ ರೂ. ಅಪಘಾತ ವಿಮೆ ನೀಡಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕಾರ್ಮಿಕ ಮತ್ತು ಕಲ್ಯಾಣ ಇಲಾಖೆ ತಿಳಿಸಿದೆ.
ಈ ಸಂಬಂಧ ಇಂದು ಸುತ್ತೋಲೆ ಹೊರಡಿಸಿದ್ದು, ಇದೇ ತಿಂಗಳ 23ರಂದು State Government Salary Package (SGSP) ಯೋಜನೆಯಡಿ ಸಂಸ್ಥೆ ಹಾಗೂ ಬ್ಯಾಂಕ್ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಜು.23ರ 2025ರಿಂದ ಜಾರಿಗೆ ಬರುವಂತೆ ಬ್ಯಾಂಕ್ ಆಫ್ ಬರೋಡ (Bank of Baroda) ದೊಂದಿಗೆ ಐದು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಂಡಿದೆ. ಅದರಂತೆ, ಈ ಬ್ಯಾಂಕಿನಲ್ಲಿ ವೇತನ ಖಾತೆ ಹೊಂದಿರುವ ಅಧಿಕಾರಿ/ ನೌಕರರಿಗೆ SGSP ಯೋಜನೆಯಡಿ ಈ ಸಮಗ್ರ ಸೌಲಭ್ಯಗಳನ್ನು Insurance Regulatory and Development Authority of India (IRDAI) ಅವರ ನಿಯಮಗಳು ಮತ್ತು ಷರತ್ತುಗಳನ್ವಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
1. ವೈಯಕ್ತಿಕ ಅಪಘಾತ ವಿಮೆ: ಬ್ಯಾಂಕ್ ಆಫ್ ಬರೋಡದಲ್ಲಿ ವೇತನಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ನಾಮನಿರ್ದೇಶಿತರಿಗೆ 1 ಕೋಟಿ ರೂ. ವಿಮಾ ಪರಿಹಾರ. ಒಂದು ವೇಳೆ ಕರ್ತವ್ಯ ನಿರತ ವೇಳೆ ಅಪಘಾತದಿಂದ ಮೃತಪಟ್ಟಲ್ಲಿ 1.25 ರೂ. ಕೋಟಿ ವಿಮಾ ಪರಿಹಾರ ನೀಡಲಾಗುವುದು.
3. ವಾಯು ಅಪಘಾತದಲ್ಲಿ ಮೃತಪಟ್ಟಲ್ಲಿ 1 ರೂ. ಕೋಟಿ ವಿಮಾ ಪರಿಹಾರ. ಉಚಿತ ಜೀವ ವಿಮೆ ಪರಿಹಾರ ಮೊತ್ತ 10 ಲಕ್ಷ ರೂ. ಅಪಘಾತದಿಂದ ಶಾಶ್ವತ ಪೂರ್ಣ ಅಂಗವಿಕಲತೆ ಉಂಟಾದಲ್ಲಿ 1 ಕೋಟಿ ರೂ ವಿಮಾ ಪರಿಹಾರ. ಒಂದು ವೇಳೆ ಅಪಘಾತದಿಂದ ಶಾಶ್ವತ ಭಾಗಶಃ ಅಂಗವಿಕಲತೆ ಉಂಟಾದಲ್ಲಿ 75 ಲಕ್ಷ ರೂ ವಿಮಾ ಪರಿಹಾರ. ಅಲ್ಲದೆ ಆಸ್ಪತ್ರೆ ನಗದು ಸೌಲಭ್ಯ 30 ಸಾವಿರ ರೂ ಕೊಡಲಾಗುವುದು.
ಇದಲ್ಲದೆ ಹೆಚ್ಚುವರಿ ಸೌಲಭ್ಯಗಳು: 1. ಹೆಣ್ಣು ಮಕ್ಕಳ ಮದುವೆಗಾಗಿ : 18 ರಿಂದ 25 ವರ್ಷಗಳ ವಯೋಮಿತಿಯೊಳಗಿನ ಹೆಣ್ಣು ಮಕ್ಕಳ ಮದುವೆಗೆ ಮೂಲ ವೈಯಕ್ತಿಕ ಅಪಘಾತ ವಿಮಾ ಮೊತ್ತದ ಶೇಕಡ 10 ರಷ್ಟು (ರೂ 10 ಲಕ್ಷಗಳು). 2. ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ : ಮೂಲ ವೈಯಕ್ತಿಕ ಅಪಘಾತ ವಿಮಾ ಮೊತ್ತದ ಶೇಕಡ 10
ರಷ್ಟು (ರೂ 10 ಲಕ್ಷಗಳು) (10+2 ನಂತರ ತರಗತಿ).

ಯೋಜನೆಯಡಿ ವಿಧಿಸಿರುವ ಷರತ್ತುಗಳು: 1. ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರು ಬ್ಯಾಂಕ್ ಆಫ್ ಬರೋಡದಲ್ಲಿ SGSP ಯೋಜನೆಯಡಿ ವೇತನ ಖಾತೆ ಹೊಂದಿರುವವರು ಒಟ್ಟು ವೇತನದ ಆಧಾರದ ಮೇರೆಗೆ ಈ ಸೌಲಭ್ಯಗಳನ್ನು ಪಡೆಯಲು ಅರ್ಹರಿರುತ್ತಾರೆ.
2. ಈ ಸೌಲಭ್ಯಗಳನ್ನು ಪಡೆಯಲು ಬ್ಯಾಂಕ್ ಆಫ್ ಬರೋಡದಲ್ಲಿ ವೇತನ ಖಾತೆ ತೆರೆದು. ಒಂದು ಮಾಹೆಯ ವೇತನ ಆ ಖಾತೆಗೆ ಕಡ್ಡಾಯವಾಗಿ ಜಮೆ ಆಗಿರತಕ್ಕದ್ದು. 3. ಅಪಘಾತದಿಂದ ಅಧಿಕಾರಿ/ನೌಕರರು ಮೃತಪಟ್ಟಲ್ಲಿ ಬ್ಯಾಂಕ್ಗೆ 90 ದಿನಗಳ ಒಳಗೆ ಅಪಘಾತದ ಮಾಹಿತಿಯನ್ನು ನೀಡುವುದು ಮತ್ತು ಕೇಮ್ಸ್ ದಾಖಲಾತಿಗಳನ್ನು 180 ದಿನಗಳ ಒಳಗೆ ಸಲ್ಲಿಸುವುದು.
4. ಪ್ರತಿ ತಿಂಗಳ 15 ನೇ ತಾರೀಖಿನಂದು ಹೊಸದಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ವೇತನ ಖಾತೆ ತೆರೆಯುವ ಅಧಿಕಾರಿ/ನೌಕರರ ಮಾಹಿತಿಯನ್ನು (ಹೆಸರು, ಹುಟ್ಟಿದ ದಿನಾಂಕ, ಬ್ಯಾಂಕ್ ಆಫ್ ಬರೋಡ ಶಾಖೆ ಮತ್ತು ಒಟ್ಟು ವೇತನ ಬ್ಯಾಂಕ್ ಆಫ್ ಬರೋಡದ ಇಮೇಲ್ ವಿಳಾಸಗಳಾದ rbdm.blrcentral@ bankofbaroda.com ಮತ್ತು
planning.blrcentral@ bankofbaroda.com ಇವುಗಳಿಗೆ ಇ-ಮೇಲ್ ಮುಖಾಂತರ ಗಣಕ ಇಲಾಖೆ, ಬೆಂಮಸಾಸಂಸ್ಥೆ ರವರಿಂದ ಕಡ್ಡಾಯವಾಗಿ ಕಳುಹಿಸುವುದು.
5. ಶಿಸ್ತು ಪ್ರಾಧಿಕಾರ ಹೊಂದಿರುವ ಇಲಾಖಾ ಮುಖ್ಯಸ್ಥರು/ವಿಭಾಗೀಯ ನಿಯಂತ್ರಣಾಧಿಕಾರಿಗಳು ನೌಕರರ ವಜಾ ರಾಜೀನಾಮೆ ಹಾಗೂ ಅಮಾನತು ಇತ್ಯಾದಿ ಕಾರಣಗಳಿಂದ ವೇತನ ಖಾತೆಗೆ ಸಂಬಳ ಜಮಾ ಆಗುವುದು ನಿಂತ ಪಕ್ಷದಲ್ಲಿ ಬ್ಯಾಂಕ್ ಆಫ್ ಬರೋಡದ ಇ-ಮೇಲ್ ವಿಳಾಸಗಳಾದ rbdm.blrcentral@ bankofbaroda.com ಮತ್ತು planning.blrcentral@bankofbaroda.com ಇವುಗಳಿಗೆ ಇ-ಮೇಲ್ ಮುಖಾಂತರ ಮಾಹಿತಿಯನ್ನು ಕಡ್ಡಾಯವಾಗಿ ಕಳುಹಿಸಲು ಕ್ರಮಕೈಗೊಳ್ಳುವುದು ಹಾಗೂ ಮಾಹಿತಿ ನೀಡಿರುವ ಬಗ್ಗೆ ದಾಖಲೆಗಳನ್ನು ನಿರ್ವಹಿಸುವುದು.
6. ಬ್ಯಾಂಕ್ ಆಫ್ ಬರೋಡದಲ್ಲಿ ವೇತನಖಾತೆ ಹೊಂದಿರುವ ಅಧಿಕಾರಿ/ನೌಕರರು ಬೇರೆ ಸಂಸ್ಥೆ/ಘಟಕಗಳಿಗೆ ವರ್ಗಾವಣೆಗೊಂಡಲ್ಲಿ ಅದರ ಬಗ್ಗೆ ಬ್ಯಾಂಕಿಗೆ ಮಾಹಿತಿ ನೀಡುವುದು ಅವರ ವೈಯಕ್ತಿಕ ಜವಾಬ್ದಾರಿಯಾಗಿರುತ್ತದೆ. ಸ್ವಯಂವೇದ್ಯವಾಗಿರುವ ಅನುಬಂಧದ (Annexure : 1-A, I-B, 11, 111-A. IV-1 & IV-2) ಪ್ರತಿಗಳನ್ನು ಅಡಕಗೊಳಿಸಿದೆ.
ಅದರಂತೆ ಬ್ಯಾಂಕ್ ಆಫ್ ಬರೋಡದಲ್ಲಿ ವೇತನಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತದಿಂದ ಮೃತಪಟ್ಟಲ್ಲಿ ಅಥವಾ ಶಾಶ್ವತ/ಭಾಗಶಃ ಅಂಗವೈಕಲ್ಯಕ್ಕೆ ಒಳಗಾದಲ್ಲಿ ನಾಮನಿರ್ದೇಶಿತರು ಅರ್ಹ ವಿಮಾ ಮೊತ್ತ ಪಡೆಯಲು ಸಲ್ಲಿಸುವ ಕ್ಲೈಮ್ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡುವುದರ ಮೂಲಕ ಕ್ಲೈಮ್ ದಾಖಲಾತಿಗಳನ್ನು ಮೃತ ಅಧಿಕಾರಿ/ ನೌಕರರ ಕುಟುಂಬದ ಅವಲಂಬಿತರಿಂದ ಪಡೆದುಕೊಂಡು ಇಲಾಖಾ/ಕಾರ್ಯಸ್ಥಾನ ಮುಖ್ಯಸ್ಥರ ಇ-ಮೇಲ್ ಮುಖಾಂತರ ಸಂಬಂಧಪಟ್ಟ ವಿಮಾ ಕಂಪನಿಗೆ ಕಳುಹಿಸುವುದು ಹಾಗೂ ಕ್ಲೈಮ್ಗಳ ಎಲ್ಲ ಮೂಲ ದಾಖಲಾತಿಗಳನ್ನು ಕೇಂದ್ರ ಕಛೇರಿಯ ಕಾರ್ಮಿಕ ಇಲಾಖೆಗೆ ಕಡ್ಡಾಯವಾಗಿ ಕಳುಹಿಸಲು ಸೂಚಿಸಲಾಗಿದೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...