ಬೆಂಗಳೂರು: ಈಗ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆ ರಾಜ್ಯದಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆ ಲಭ್ಯವಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಬಿಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆಗೆ ಇದೇ ಜೂನ್ 20ರಂದು ಚಾಲನೆ ನೀಡಿದ್ದು, ಇದೀಗ ಈ ಬಸ್ಗಳಿಗೆ ಹತ್ತುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಹೌದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವತಿಯಿಂದ ನಗರದ ಪ್ರಮುಖ ಮಾರ್ಗಗಳ ಸಂಚಾರಕ್ಕಾಗಿ 5 ವೇಗಧೂತ ಎಕ್ಸ್ಪ್ರೆಸ್ ಬಸ್ಗಳನ್ನು ಬಿಡುಗಡೆ ಮಾಡಸಲಾಗಿದೆ. ಇದರಿಂದ ಪ್ರಯಾಣಿಕರ ಸಮಯ ಉಳಿತಾಯವಾಗುತ್ತಿದೆ. ಎಲ್ಲ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್ನಿಂದಲೇ ಹೊರಡುವುದಿಲ್ಲ. ಬದಲಾಗಿ ಬೇರೆ ಬೇರೆ ನಿಲ್ದಾಣಗಳಿಂದ ಉದ್ದೇಶಿತ ಸ್ಥಳಕ್ಕೆ ಜನರನ್ನು ತಲುಪಿಸುತ್ತಿವೆ.
ಉದಾಹರಣೆಗೆ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ (Ex 285c) ಬಸ್ ಬಿಡಲಾಗಿದೆ. ಇದರಲ್ಲಿ ನೀವು ಈ ಬಸ್ ಏರಿದರೆ ಕೇವಲ ಐದು ಸ್ಟಾಪ್ಗಳನ್ನು ಮಾತ್ರವೇ ನೀಡುತ್ತದೆ. ಮಲ್ಲೇಶ್ವರಂ ಸೆಂಟ್ರಲ್, 18ನೇ ಕ್ರಾಸ್, ಗೋವರ್ಧನ್ ಟಾಕೀಸ್, ಗೊರಗುಂಟೆ ಪಾಳ್ಯ ಮತ್ತು ಅರಿಶಿಣಕುಂಟೆ ಟೋಲ್ ಹೀಗೆ ಅತೀ ಕಡಿಮೆ ನಿಲುಗಡೆ ಮೂಲಕ ವೇಗದ ಸಾರಿಗೆ ಸೇವೆ ಜನರಿಗೆ ಲಭ್ಯವಾಗಿದೆ. ಇದರಿಂದ ಜನರಿಗೆ ಸಮಯ ಉಳಿತಾಯವಾಗುತ್ತದೆ.
ಟಿಕೆಟ್, ಮಾಸಿಕ ಪಾಸ್ಗೆ ಎಷ್ಟು?: ನಿಗದಿತ ನಿಲುಗಡೆಯಿಂದ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಒಂದು ಕಡೆ ಹತ್ತಿದರೆ ಗಮ್ಯಸ್ಥಾನ ಕೆಲವೇ ನಿಮಿಷಗಳಲ್ಲಿ ಬಂದು ಬಿಡುತ್ತದೆ. ಟಿಕೆಟ್ ದರ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ ಒಬ್ಬರಿಗೆ 46 ರೂಪಾಯಿ ಟಿಕೆಟ್ ಶುಲ್ಕ ಇದೆ. ಇದೇ ರೀತಿ ಇನ್ನುಳಿದ ಬಸ್ಗಳಿಗೂ ಟಿಕೆಟ್ ಶುಲ್ಕ ವಿಧಿಸಲಾಗಿದೆ. ನೀವು ಮಾಸಿಕ ಪಾಸ್ ಬೇಕಾದಲ್ಲಿ ನೀವು 1500 ರೂಪಾಯಿ ಭರಿಸಬೇಕಿದೆ. ಟೋಲ್ ಮಾರ್ಗಗಳಲ್ಲಿ ಅನ್ವಯಿಸುವ ದರವನ್ನು ಪಾವತಿಸುವುದು ಕಡ್ಡಾಯ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬನಶಂಕರಿ-ಅತ್ತಿಬೆಲೆ ( ಬಸ್ ಸಂಖ್ಯೆ Ex 600F), ಬನಶಂಕರಿ ಟಿಟಿಎಂಸಿ-ಹೆರೋಹಳ್ಳಿ (Ex 213v), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ಅತ್ತಿಬೆಲೆ (Ex KBS 3!), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ದೇವನಹಳ್ಳಿವರೆಗೆ (Ex 298M) ವೇಗಧೂತ ಎಕ್ಸ್ಪ್ರೆಸ್ ಬಸ್ಗಳ ಕಾರ್ಯಾಚರಣೆ ಆರಂಭವಾಗಿದೆ.
ಈ ಮೊದಲು ಮೆಜೆಸ್ಟಿಕ್ ಅಥವಾ ಬೆಂಗಳೂರು ಹೃದಯಭಾಗದಿಂದ ದೂರದ ಗಮ್ಯ ಸ್ಥಾನಗಳಿಗೆ ಹೋಗಬೇಕಾದರೆ ಪ್ರಯಾಣಿಕರಿಗೆ ಹೆಚ್ಚಿನ ಸಮಯ ಹಿಡಿಯುತ್ತಿತ್ತು. ಅಲ್ಲದೇ ಹೆಚ್ಚಿನ ನಿಲ್ದಾಣ ನಿಲುಗಡೆಗೆ ಜನ ಹೈರಾಣಾಗುತ್ತಿದ್ದರು. ಆದರೆ ಈಗ ವಿಶೇಷ ಬಸ್ ಬಿಡುಗಡೆಯಿಂದಾಗಿ ಕಡಿಮೆ ಸಮಯದಲ್ಲಿ ಒಂದೇ ಬಸ್ನಲ್ಲಿ ಗಮ್ಯಸ್ಥಳ ತಲುಪುತ್ತಿದ್ದಾರೆ. ಹೀಗಾಗಿ ಈ ಬಿಎಂಟಿಸಿ ವೇಗಧೂತ ಎಕ್ಸ್ಪ್ರೆಸ್ ಬಸ್ಗಳಿಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...