ಬೆಂಗಳೂರು: ಈಗ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆ ರಾಜ್ಯದಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆ ಲಭ್ಯವಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಬಿಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆಗೆ ಇದೇ ಜೂನ್ 20ರಂದು ಚಾಲನೆ ನೀಡಿದ್ದು, ಇದೀಗ ಈ ಬಸ್ಗಳಿಗೆ ಹತ್ತುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಹೌದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವತಿಯಿಂದ ನಗರದ ಪ್ರಮುಖ ಮಾರ್ಗಗಳ ಸಂಚಾರಕ್ಕಾಗಿ 5 ವೇಗಧೂತ ಎಕ್ಸ್ಪ್ರೆಸ್ ಬಸ್ಗಳನ್ನು ಬಿಡುಗಡೆ ಮಾಡಸಲಾಗಿದೆ. ಇದರಿಂದ ಪ್ರಯಾಣಿಕರ ಸಮಯ ಉಳಿತಾಯವಾಗುತ್ತಿದೆ. ಎಲ್ಲ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್ನಿಂದಲೇ ಹೊರಡುವುದಿಲ್ಲ. ಬದಲಾಗಿ ಬೇರೆ ಬೇರೆ ನಿಲ್ದಾಣಗಳಿಂದ ಉದ್ದೇಶಿತ ಸ್ಥಳಕ್ಕೆ ಜನರನ್ನು ತಲುಪಿಸುತ್ತಿವೆ.
ಉದಾಹರಣೆಗೆ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ (Ex 285c) ಬಸ್ ಬಿಡಲಾಗಿದೆ. ಇದರಲ್ಲಿ ನೀವು ಈ ಬಸ್ ಏರಿದರೆ ಕೇವಲ ಐದು ಸ್ಟಾಪ್ಗಳನ್ನು ಮಾತ್ರವೇ ನೀಡುತ್ತದೆ. ಮಲ್ಲೇಶ್ವರಂ ಸೆಂಟ್ರಲ್, 18ನೇ ಕ್ರಾಸ್, ಗೋವರ್ಧನ್ ಟಾಕೀಸ್, ಗೊರಗುಂಟೆ ಪಾಳ್ಯ ಮತ್ತು ಅರಿಶಿಣಕುಂಟೆ ಟೋಲ್ ಹೀಗೆ ಅತೀ ಕಡಿಮೆ ನಿಲುಗಡೆ ಮೂಲಕ ವೇಗದ ಸಾರಿಗೆ ಸೇವೆ ಜನರಿಗೆ ಲಭ್ಯವಾಗಿದೆ. ಇದರಿಂದ ಜನರಿಗೆ ಸಮಯ ಉಳಿತಾಯವಾಗುತ್ತದೆ.
ಟಿಕೆಟ್, ಮಾಸಿಕ ಪಾಸ್ಗೆ ಎಷ್ಟು?: ನಿಗದಿತ ನಿಲುಗಡೆಯಿಂದ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಒಂದು ಕಡೆ ಹತ್ತಿದರೆ ಗಮ್ಯಸ್ಥಾನ ಕೆಲವೇ ನಿಮಿಷಗಳಲ್ಲಿ ಬಂದು ಬಿಡುತ್ತದೆ. ಟಿಕೆಟ್ ದರ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ ಒಬ್ಬರಿಗೆ 46 ರೂಪಾಯಿ ಟಿಕೆಟ್ ಶುಲ್ಕ ಇದೆ. ಇದೇ ರೀತಿ ಇನ್ನುಳಿದ ಬಸ್ಗಳಿಗೂ ಟಿಕೆಟ್ ಶುಲ್ಕ ವಿಧಿಸಲಾಗಿದೆ. ನೀವು ಮಾಸಿಕ ಪಾಸ್ ಬೇಕಾದಲ್ಲಿ ನೀವು 1500 ರೂಪಾಯಿ ಭರಿಸಬೇಕಿದೆ. ಟೋಲ್ ಮಾರ್ಗಗಳಲ್ಲಿ ಅನ್ವಯಿಸುವ ದರವನ್ನು ಪಾವತಿಸುವುದು ಕಡ್ಡಾಯ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬನಶಂಕರಿ-ಅತ್ತಿಬೆಲೆ ( ಬಸ್ ಸಂಖ್ಯೆ Ex 600F), ಬನಶಂಕರಿ ಟಿಟಿಎಂಸಿ-ಹೆರೋಹಳ್ಳಿ (Ex 213v), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ಅತ್ತಿಬೆಲೆ (Ex KBS 3!), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ದೇವನಹಳ್ಳಿವರೆಗೆ (Ex 298M) ವೇಗಧೂತ ಎಕ್ಸ್ಪ್ರೆಸ್ ಬಸ್ಗಳ ಕಾರ್ಯಾಚರಣೆ ಆರಂಭವಾಗಿದೆ.
ಈ ಮೊದಲು ಮೆಜೆಸ್ಟಿಕ್ ಅಥವಾ ಬೆಂಗಳೂರು ಹೃದಯಭಾಗದಿಂದ ದೂರದ ಗಮ್ಯ ಸ್ಥಾನಗಳಿಗೆ ಹೋಗಬೇಕಾದರೆ ಪ್ರಯಾಣಿಕರಿಗೆ ಹೆಚ್ಚಿನ ಸಮಯ ಹಿಡಿಯುತ್ತಿತ್ತು. ಅಲ್ಲದೇ ಹೆಚ್ಚಿನ ನಿಲ್ದಾಣ ನಿಲುಗಡೆಗೆ ಜನ ಹೈರಾಣಾಗುತ್ತಿದ್ದರು. ಆದರೆ ಈಗ ವಿಶೇಷ ಬಸ್ ಬಿಡುಗಡೆಯಿಂದಾಗಿ ಕಡಿಮೆ ಸಮಯದಲ್ಲಿ ಒಂದೇ ಬಸ್ನಲ್ಲಿ ಗಮ್ಯಸ್ಥಳ ತಲುಪುತ್ತಿದ್ದಾರೆ. ಹೀಗಾಗಿ ಈ ಬಿಎಂಟಿಸಿ ವೇಗಧೂತ ಎಕ್ಸ್ಪ್ರೆಸ್ ಬಸ್ಗಳಿಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...