ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2285 ನಿರ್ವಾಹಕರು ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು 2025ರ ಜನವರಿ 20 ರಂದು ಬಿಡುಗಡೆ ಮಾಡಲಾಗಿತ್ತು.
ಆ ಆಯ್ಕೆಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (ಕಟ್ ಆಫ್) ಅಂಕಗಳ ವಿವರಗಳನ್ನು ಬಿಡುಗಡೆ ಮಾಡಿ, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸ್ವೀಕೃತ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ, ನಿನ್ನೆ (ಮೇ 05, 2025 ) ಅಂತಿಮ ಆಯ್ಕೆಪಟ್ಟಿಯನ್ನು ಹಾಗೂ ಮೀಸಲಾತಿವಾರು ಕೊನೆ ಅಭ್ಯರ್ಥಿಗಳ ಕಟ್ಆಫ್ ಅಂಕಗಳನ್ನು, ಹುಟ್ಟಿದ ದಿನಾಂಕದ ವಿವರ ಸಹಿತ ಬಿಡುಗಡೆ ಮಾಡಲಾಗಿದೆ.
ನಿರ್ವಾಹಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಈ ಕೆಳಕಂಡ ಕೆಲವು ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಪ್ರಕಟಿಸಲಾಗಿದೆ. 1) ಅಂತಿಮ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಮಾತ್ರಕ್ಕೆ ಅಭ್ಯರ್ಥಿಯು ಆಯ್ಕೆ / ನೇಮಕಾತಿಗೆ ಯಾವುದೇ ವಿಧವಾದ ಹಕ್ಕು ಹೊಂದಿರುವುದಿಲ್ಲ.
2) ದಿನಾಂಕ 01-09-2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಶೇಕಡ.75 ರಷ್ಟು ಮತ್ತು ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿನ ಶೇಕಡ.25 ರಷ್ಟು ಅಂಕಗಳನ್ನು ಸೇರಿಸಿ ಒಟ್ಟು ಶೇ. ಅಂಕಗಳ ಅರ್ಹತೆ ಮತ್ತು ಮೀಸಲಾತಿ ನಿಯಮಾನುಸಾರ ಈ ಅಂತಿಮ ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.
3) ಅಭ್ಯರ್ಥಿಗಳು ಸಲ್ಲಿಸಿರುವ ದಾಖಲಾತಿಗಳು ಅಂದರೆ, ಶೈಕ್ಷಣಿಕ ವಿದ್ಯಾರ್ಹತೆ, ಮೀಸಲಾತಿ ಮತ್ತು ಇನ್ನಿತರೆ ದಾಖಲಾತಿಗಳು ಸಂಬಂಧಿಸಿದ ಪ್ರಾಧಿಕಾರಿಗಳಿಂದ ಪರಿಶೀಲನಾ ವರದಿ ಮತ್ತು ಪೂರ್ವೋತ್ತರ ನಡೆತೆಯ ತನಿಖಾ ವರದಿಗೆ ಒಳಪಟ್ಟಿರುತ್ತದೆ.
4) ಆಯ್ಕೆಯಾದ ಅಭ್ಯರ್ಥಿಗಳು ಕರಾರಸಾಸಂ (ಪದವೃಂದ ಮತ್ತು ನೇಮಕಾತಿ) ನಿಯಮಾವಳಿ 1992ರ ಷೆಡ್ಯೂಲ್ ‘ಬಿ’ ಮತ್ತು ಅನುಬಂಧ ‘ಬಿ’ ರಲ್ಲಿ ತಿಳಿಸಿರುವಂತೆ ಕಣ್ಣು ಪರೀಕ್ಷೆ ಹಾಗೂ ಇತರೆ ವೈದ್ಯಕೀಯ ಪರೀಕ್ಷೆಗಳನ್ನು ಜಿಲ್ಲಾ ವೈದ್ಯಾಧಿಕಾರಿ ಹಾಗೂ ಸೂಕ್ತ ವೈದ್ಯಕೀಯ ಪ್ರಾಧಿಕಾರದಿಂದ ವೈದ್ಯಕೀಯ ಪ್ರಮಾಣಪತ್ರವನ್ನು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವ ಸಮಯದಲ್ಲಿ ಸಲ್ಲಿಸತಕ್ಕದ್ದು.
5) ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳಲ್ಲಿ ಎಸ್ಎಸ್ಎಲ್ಸಿ / ಪಿಯುಸಿ / ತತ್ಸಮಾನ ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಸಿಸದವರು ನೇಮಕಾತಿ ಪೂರ್ವದಲ್ಲಿ ನೇಮಕ ನಿಯಮಾವಳಿ 4 (8) ರ ಅನ್ವಯ ಸಂಸ್ಥೆಯ ವತಿಯಿಂದ ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಒಂದೇ ಬಾರಿಗೆ ಉತ್ತೀರ್ಣರಾಗುವುದು. ತಪ್ಪಿದ್ದಲ್ಲಿ ಅವರ ಆಯ್ಕೆಯ ಹಕ್ಕನ್ನು ಕಳೆದುಕೊಳ್ಳಲಿರುವರು.
6) ಆಯ್ಕೆಗೊಂಡ ಹುದ್ದೆಯಲ್ಲಿ ಅಭ್ಯರ್ಥಿಗಳು ಒಂದು (1) ವರ್ಷಕಾಲ ವೃತ್ತಿ ತರಬೇತಿಗೆ ಒಳಪಡುವುದು. ಆಯ್ಕೆ / ನೇಮಕಾತಿಗೆ ಸಂಬಂಧಿಸಿದಂತೆ ಸಂಸ್ಥೆಯು ತೆಗೆದುಕೊಳ್ಳುವ ನಿರ್ಧಾರಗಳು ಅಂತಿಮವಾಗಿರುತ್ತವೆ ಎಂದು ಸಂಸ್ಥೆಯ ಆಯ್ಕೆ ಸಮಿತಿ ಅಧ್ಯಕ್ಷರಾದ ನಿರ್ದೇಶಕರು (ಭದ್ರತಾ ಮತ್ತು ಜಾಗೃತ) ತಿಳಿಸಿದ್ದಾರೆ.
ಇನ್ನು ಬಿಎಂಟಿಸಿ ನಿರ್ವಾಹಕರ ಅಂತಿಮ ಆಯ್ಕೆಪಟ್ಟಿ, ಕಟ್ಆಫ್ ಅಂಕ ಚೆಕ್ ಮಾಡಲು…:
– ವೆಬ್ ವಿಳಾಸ https://mybmtc.karnataka.gov.in/ ಗೆ ಭೇಟಿ ನೀಡಿ.
– ಹೋಮ್ಪೇಜ್ ಓಪನ್ ಆಗುತ್ತದೆ. ಇಲ್ಲಿ ‘Recruitment’ ಮೆನು ಮೇಲೆ ಕ್ಲಿಕ್ ಮಾಡಿ.
– ನಂತರ ತೆರೆಯುವ ವೆಬ್ಪೇಜ್ನಲ್ಲಿ ‘ಕಂಡಕ್ಟರ್ (ಆರ್ಪಿಸಿ)’ ಹುದ್ದೆಗಳ ನೇಮಕಾತಿ ಸಂಬಂಧ ಮೊದಲೆರಡು ಲಿಂಕ್ಗಳನ್ನು ಕ್ಲಿಕ್ ಮಾಡಿ.
– ಅಂತಿಮ ಆಯ್ಕೆಪಟ್ಟಿ, ಕಟ್ಆಫ್ ಅಂಕಗಳ ಪಿಡಿಎಫ್ ಪೇಜ್ ಓಪನ್ ಆಗುತ್ತದೆ.
– ನಿಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.
ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪಿಡಿಎಫ್ ಪೇಜ್ ಓಪನ್ ಆಗುತ್ತದೆ: bmtc conductor_to_upload1746443716
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...