NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಬಸ್ಸಿಗೆ ಅಡ್ಡ ಬಂದ ಚಿರತೆಗಳು – ಚಾಲಕನ ಮೇಲೆ ದಾಳಿ – ಅಮ್ಮ ಓಡಿತು, ಮರಿ ಚಿರತೆ ಸಿಕ್ಕಿತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಮ್ಮ ಚಿರತೆ ಮತ್ತು ಮರಿ ಚಿರತೆ ಹಾಡುಹಗಲೇ ರಸ್ತೆಗೆ ಬಂದಿದ್ದು, ಬಿಎಂಟಿಸಿ ಬಸ್‌ ಚಾಲಕನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.

ಈ ಎರಡು ಚಿರತೆಗಳು ತುರಹಳ್ಳಿ ಫಾರೆಸ್ಟ್​ನಿಂದ ತಪ್ಪಿಸಿಕೊಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಕೆಂಗೇರಿ- ಬನಶಂಕರಿ ಮಾರ್ಗದಲ್ಲಿ ಸಂಚಾರಿಸುವ ಬಿಎಂಟಿಸಿ ಬಸ್​​ನ ಕೆಳಗೆ ಚಿರತೆಗಳು ಕಾಣಿಸಿಕೊಂಡಿವೆ.

ಇನ್ನು ಚಿರತೆಗಳು ಕಂಡ ಕೂಡಲೇ ಬಿಎಂಟಿಸಿ ಚಾಲಕ ಬಸ್​ ನಿಲ್ಲಿಸಿದ್ದಾರೆ. ತಾಯಿ ಚಿರತೆ ತಪ್ಪಿಸಿಕೊಂಡಿದ್ದು, ಆ ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು. ಬಳಿಕ ಆ ಮರಿಗೆ ನೀರು ಕುಡಿಸಲು ಮುಂದಾಗಿದ್ದ ಚಾಲಕನ ಮೇಲೆ ಮರಿ ಚಿರತೆ ಅಟ್ಯಾಕ್ ಮಾಡಲು ಮುಂದಾಗಿತ್ತು.

ಕೂಡಲೇ ಎಚ್ಚೆತುಕೊಂಡ ಚಾಲಕ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಸೂಚನೆ ನೀಡಿದರೂ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿ ರಕ್ಷಣೆ ಮಾಡಿದ್ದಾರೆ.

ಇನ್ನು ತಪ್ಪಿಸಿಕೊಂಡ ತಾಯಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಹೀಗಾಗಿ ಕೆಂಗೇರಿ – ಬನಶಂಕರಿ ಮಾರ್ಗವಾಗಿ ಓಡಾಡುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ