ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ಅಧಿಕಾರಿಗಳು/ನೌಕರರಿಗೆ ಫೆಬ್ರವರಿ ತಿಂಗಳ ವೇತನ ಮಾ.1ನೇ ತಾರೀಖಿಗೆ ಕೊಡಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಫೆ.19ರಂದು ಆದೇಶ ಹೊರಡಿಸಿದ್ದರು.
ಆದರೆ, ಇಂದು ಸಂಜೆವರೆಗೂ ಕಾದು ನೋಡಿದ ನೌಕರರಿಗೆ ವೇತನ ಆಗಿಲ್ಲ. ಇದಕ್ಕೆ ಬಿಎಂಟಿಸಿ ಸಂಸ್ಥೆಯ ನೌಕರರಿಗೆ ವೇತನ ಹಾಕುತ್ತೇವೆ ಎಂದು ಕಲ್ಲರ್ ಕಲರ್ ಕಾಗೆ ಹಾರಿಸಿದ್ದಾರೆ… ಇಲ್ಲಿಯವರೆಗೆ ವೇತನ ಹಾಕಿಲ್ಲ… ಚಾತಕ ಪಕ್ಷಿಯಂತೆ ವೇತನಕ್ಕಾಗಿ ಕಾಯುತ್ತಿರುವ ಸಂಸ್ಥೆಯ ನೌಕರರು…
ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ನೌಕರರು ಹೇಳಿಕೆ ನೀಡುತ್ತಿದ್ದು, ಅಲ್ಲದೆ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಮಾಡಿದ ಆದೇಶವನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ಪಾಲಿಸಿದ್ದಾರೆ ನೋಡಿ. ಅದೇ ನಾವು ಇಂಥ ತಪ್ಪು ಮಾಡಿದರೆ ಕೂಡಲೇ ಅಮಾನತು ಮಾಡಿ ಬಳಿಕ ಕಾರಣ ಎಂದು ನಮ್ಮನ್ನು ಅಮಾನತು ಮಾಡಿ ಬಿಡುತ್ತಿದ್ದರು ಕಿಡಿಕಾರಿದ್ದಾರೆ.
ಇನ್ನು ವ್ಯವಸ್ಥಾಪಕ ನಿರ್ದೇಶಕರು ಅಷ್ಟೇ ಅಲ್ಲ ಸಂಸ್ಥೆಯ ಆರ್ಥಿಕ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಕೂಡ ಫೆ.24ರಂದು ಕೂಡಲೇ ರಜೆ ಮಂಜೂರು ಮಾಡಿಸಿಕೊಂಡು ವೇತನ ಬಿಲ್ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರು. ಆದರೆ ಎಂಡಿ ಆದೇಶ ಹಾಗೂ ಮುಖ್ಯ ಲೆಕ್ಕಾಧಿಕಾರಿಯ ಸೂಚನೆಯನ್ನು ಬದಿಗೆ ಸರಿಸಿದ ಅಧಿಕಾರಿಗಳು ವೇತನ ಬಿಲ್ ಸಿದ್ಧಪಡಿಸುವುದಕ್ಕೆ ವಿಳಂಬ ಮಾಡಿದ್ದಾರೆ.
ಈ ಪರಿಣಾಮ ಸಂಸ್ಥೆಯ ನೌಕರರಿಗೆ ಮಾ.1ರಂದು ಆಗಬೇಕಿದ್ದ ವೇತನ ಮೂರು ದಿನಗಳ ಕಾಲ ಮುಂದಕ್ಕೆ ಹೋಗಿದೆ. ಅಲ್ಲದೆ ಸಂಸ್ಥೆಯಲ್ಲಿ ಮೇಲಧಿಕಾರಿಗಳ ಆದೇಶಕ್ಕೂ ಕಿಮ್ಮತ್ತಿಲ್ಲ ಎಂಬುವುದಕ್ಕೆ ಇದೇ ಸಾಕ್ಷಿ ಎಂದು ನೌಕರರು ಆರೋಪಿಸಿದ್ದಾರೆ.
ಇನ್ನು ಎಂಡಿ ಅವರು ಫೆ.19ರಂದು ಆದೇಶ ಹೊರಡಿಸಿದ್ದರೂ ವೇತನ ಬಿಲ್ ಸಿದ್ಧ ಮಾಡಿಕೊಳ್ಳದೆ ವಿಳಂಬ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿದ್ದರೆ ಸಂಸ್ಥೆಯ ಮಾನ ಇಂದು ಹರಾಜಾಗುತ್ತಿರಲಿಲ್ಲ. ಜತೆಗೆ ಎಂಡಿ ಅವರಿಗೆ ಅವಮಾನವಾಗುತ್ತಿರಲಿಲ್ಲ ಎಂದು ನೌಕರರು ಹೇಳಿದ್ದಾರೆ.
ಅಲ್ಲದೆ ಸಂಸ್ಥೆಯಲ್ಲಿ ಈ ರೀತಿ ನಡೆದುಕೊಳ್ಳುವುದು ಅಧಿಕಾರಿ ವರ್ಗದವರಿಗೆ ಮಾಮೂಲಿಯಾಗಿದ್ದು ಹೇಳುವವರು ಇಲ್ಲ ಕೇಳುವವರು ಇಲ್ಲ ಎಂಬುದಕ್ಕೆ ಇದೇ ನಿದರ್ಶನ. ಆದರೆ ನೌಕರರಾದ ನಾವು ಮಾಡಿದಿರುವ ತಪ್ಪಿಗೂ ಕೂಡಲೇ ಶಿಕ್ಷೆ ಕೊಡುತ್ತಾರೆ. ಇದು ಸಂಸ್ಥೆಯಲ್ಲಿ ಇರುವ ಅವ್ಯವಸ್ಥೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಈ ರೀತಿ ವೇತನ ಪಾವತಿಗೆ ವಿಳಂಬ ಮಾಡಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕ್ರಮ ಕೈಗೊಂಡು ಮುಂದೆ ಈ ರೀತಿ ಅಸಡ್ಡೆ ತೋರಿದವರಿಗೆ ಏನಾಗುತ್ತದೆ ಎಂದುವುದನ್ನು ತೋರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲ ಘಟಕಗಳಲ್ಲಿ ಲೆಕ್ಕ ಪತ್ರ ಅಧಿಕಾರಿಗಳು ಫೆ. 28ರ ಒಳಗೆ ನೌಕರರ ಹಾಜರಾತಿಗಳನ್ನು ಮತ್ತು ಹಣಕಾಸುಗಳ ವಿವರಗಳನ್ನು ನಮೂದಿಸಲು ಆಗದ ಕಾರಣ ಇಂದು ಆಗಬೇಕಿದ್ದ ಸಂಬಳವು ಮಾ.4ಕ್ಕೆ ಹೋಗಿದೆ. ಇನ್ನು ಈ ರೀತಿ ವಿಳಂಬ ಮಾಡಿರುವವರ ವಿರುದ್ಧ ಕ್ರಮಕ್ಕೆ ನಾವು ಸಚಿವರ ಗಮನಕ್ಕೆ ತರುತ್ತೇವೆ ಎಮದು ಕೇಂದ್ರ ಕಚೇರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Related

You Might Also Like
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಅತ್ತಹಳ್ಳಿಯ ಎ.ಸಿ.ಲಿಂಗೇಗೌಡರ ಪುತ್ರ ರಾಘವ ಲಿಂಗೇಗೌಡ ನಿಧನ
ಮೈಸೂರು: ನಗರದ ತಿ.ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸಿ ಲಂಡನ್ನಲ್ಲಿ ಕೆಲಸದಲ್ಲಿದ್ದ ರಾಘವ ಲಿಂಗೇಗೌಡ (49) ಬುಧವಾರ ಸಂಜೆ ನಿಧನರಾದರು. ಮೂಲತಃ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಅತ್ತಹಳ್ಳಿ...
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....