ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಏಪ್ರಿಲ್ ತಿಂಗಳ ವೇತನದೊಂದಿಗೆ ಮಾರ್ಚ್ 2023ರ ಬಾಕಿ 1 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ಸೂಕ್ತಾಧಿಕಾರಿಗಳು ಇಂದು ಆದೇಶ ಹೊರಡಿಸಿದ್ದಾರೆ.
ತುಟ್ಟಿಭತ್ಯೆ ಹಿಂಬಾಕಿ ಮೊತ್ತವನ್ನು ಪಾವತಿಸುವ ಕುರಿತು ಆದೇಶ ಹೊರಡಿಸಿರುವ ನಿಗಮದ ಮುಖ್ಯಲೆಕ್ಕಾಧಿಕಾರಿಗಳು, ತುಟ್ಟಿಭತ್ಯೆ ಹಿಂಬಾಕಿ ಪಾವತಿಯನ್ನು ಮುಂದಿನ ದಿನಗಳಲ್ಲಿ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆದೇಶಿಸಿ ಕಾಯ್ದಿರಿಸಲಾಗಿತ್ತು.
ಅದರಂತೆ ಇಂದು ಅಂದರೆ ಮೇ 2ರಂದು ಸಮಸ್ತ ಸಿಬ್ಬಂದಿಗಳ ಹಿತದೃಷ್ಠಿಯಿಂದ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಚ್-2023ರ ಮಾಹೆಯ ಒಂದು ತಿಂಗಳ ಶೇ.4 ತುಟ್ಟಿಭತ್ಯ ಹಿಂಬಾಕಿ ಮೊತ್ತ ಏಪ್ರಿಲ್ -2025ರ ವೇತನದೊಂದಿಗೆ ಸೇರಿಸಿ ಪಾವತಿಸಲಯ ಸೂಕ್ತಾಧಿಕಾರಿಗಳು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಈ ಹಿಂದೆ ಅಂದರೆ ಕಳೆದ 2024ರ ಡಿಸೆಂಬರ್ 24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿಯನ್ನು ಪಾವತಿಸಲಾಗಿತ್ತು. ಅಂದು ಜುಲೈ-2022 ರಿಂದ ನವೆಂಬರ್-2022 ನೇ ಮಾಹೆಯವರೆಗಿನ 05 ತಿಂಗಳಿನ 3.75% ತುಟ್ಟಿಭತ್ಯೆ ಹಿಂಬಾಕಿ ಮೊತ್ತ ಹಾಗೂ ಜನವರಿ- 2023 ರಿಂದ ಜುಲೈ-2023 ರ ವರೆಗಿನ 07 ತಿಂಗಳು ತುಟ್ಟಿಭತ್ಯೆ ಹಿಂಬಾಕಿಯಲ್ಲಿ ಜನವರಿ-2023 ಹಾಗೂ ಫೆಬ್ರವರಿ- 2023ರ ಎರಡು ತಿಂಗಳಿನ 4% ತುಟ್ಟಿಭತ್ಯೆ ಹಿಂಬಾಕಿ ಮಾತ್ರ (ಒಟ್ಟಾರೆ 07 ತಿಂಗಳಿನ ತುಟ್ಟಿಭತ್ಯೆ ಹಿಂಬಾಕಿ ಮಾತ್ರ) 24.12.2024 ರಂದು ಇ.ಸಿ.ಎಸ್ ಮೂಲಕ ಪಾವತಿಸಲಾಗಿತ್ತು.
ಇನ್ನು ಜನವರಿ- 2023 ರಿಂದ ಜೂನ್ -2023 ರ ವರೆಗಿನ 06 ತಿಂಗಳ ಶೇ.4 ತುಟ್ಟಿಭತ್ಯೆ ಹಿಂಬಾಕಿಯಲ್ಲಿ ಜನವರಿ-2023 ಹಾಗೂ ಫೆಬ್ರವರಿ- 2023ರ ಎರಡು ತಿಂಗಳಿನ ಹಿಂಬಾಕಿ ಮಾತ್ರ ಪಾವತಿಸಲು ಆದೇಶ ಹೊರಡಿಸಿದ್ದರು. ಉಳಿದ 4 ತಿಂಗಳ ಹಿಂಬಾಕಿ ಪಾವತಿ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.
ಇನ್ನು ಈಗ ಏಪ್ರಿಲ್ ತಿಂಗಳಿನ ವೇತನದೊಂದಿಗೆ 2023ರ ಮಾರ್ಚ್ ತಿಂಗಳ ಹಿಂಬಾಕಿಯನ್ನಷ್ಟೇ ಪಾವತಿಸಲು ಆದೇಶ ಹೊರಡಿಸಿದ್ದು ಉಳಿದ ಏಪ್ರಿಲ್, ಮೇ ಹಾಗೂ ಜೂನ್ -2023ರ ತುಟ್ಟಿಭತ್ಯ ಹಿಂಬಾಕಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಆದರೆ ಏಪ್ರಿಲ್ ತಿಂಗಳ ವೇತನದೊಂದಿಗೆ 2023ರ ಮಾರ್ಚ್ ತಿಂಗಳ ಡಿಎ ಪಾವತಿ ಮಾಡಲು ಆದೇಶಿಸಿದ್ದು, ಈ ಸಂಬಂಧ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ನಿಲ್ದಾಣಾಧಿಕಾರಿಗಳು, ಹಿರಿಯ/ ಘಟಕ ವ್ಯವಸ್ಥಾಪಕರು. ಆಪ್ತ ಕಾರ್ಯದರ್ಶಿ, ನಿರ್ದೇಶಕರು, ಆಪ್ತ ಕಾರ್ಯದರ್ಶಿ, ನಿರ್ದೇಶಕರು(ಭ&ಜಾ), ಎಲ್ಲ ಇಲಾಖಾ ಮುಖ್ಯಸ್ಥರಿಗೆ ಮಾಹಿತಿಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...