BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ ವಿರುದ್ಧ ತನಿಖಾ ಸಿಬ್ಬಂದಿಗಳು ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ನಿನ್ನೆ (ಆ.26) ಮಂಗಳವಾರ ಆದೇಶ ಹೊರಡಿಸಿರುವ ಎಂಡಿ ಮೊಬೈಲ್ ಪ್ರಕರಣಗಳ ವರ್ಗೀಕರಣವನ್ನು ಪರಿಷ್ಕರಿಸಿ ಭದ್ರತಾ ಮತ್ತು ಜಾಗೃತಾ ಶಾಖೆಯಿಂದ ಜಾರಿ ಮಾಡಲಾಗಿದ್ದು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಾಕೀತು ಮಾಡಿದ್ದಾರೆ.
ಸಂಸ್ಥೆಯಲ್ಲಿ ತನಿಖಾ ಸಿಬ್ಬಂದಿಗಳು ದಾಖಲಿಸುವ ಸಾಮಾನ್ಯ, ಕೆಂಪು ಗುರುತಿನ ಪ್ರಕರಣ ಮತ್ತು ಗಂಭೀರ ಕೆಂಪು ಗುರುತಿನ ಪ್ರಕರಣಗಳನ್ನು ಮಾರ್ಪಡಿಸಿ ವರ್ಗೀಕರಿಸಲಾಗಿತ್ತು.
ಕರ್ತವ್ಯ ನಿರ್ವಹಿಸುವ ಚಾಲನಾ ಸಿಬ್ಬಂದಿಗಳು ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸುವುದನ್ನು ಹಾಗೂ ಮೊಬೈಲ್ನಲ್ಲಿ ಮಾತನಾಡುವುದು, ಸಂಗೀತ, ಆಡಿಯೋ ಆಲಿಸುವುದು, ಚಾಟಿಂಗ್ (Chatting) ಮಾಡುತ್ತಿರುವುದನ್ನು ನಿಷೇಧಿಸಿ ಅವುಗಳನ್ನು ಬಳಸಿದ್ದಲ್ಲಿ, ಕೆಂಪು ಗುರುತಿನ ಪ್ರಕರಣದ (RMC) ಅಡಿಯಲ್ಲಿ ಪ್ರಕರಣ ದಾಖಲಿಸಿ, ಕ್ರಮ ವಹಿಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಸಂಸ್ಥೆಯ ವಾಹನಗಳಿಂದ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿ, ಪ್ರಾಣ ಹಾನಿ ಉಂಟಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಅಪಘಾತಗಳು ಸಂಸ್ಥೆಯ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿವೆ. ಈ ಅಪಘಾತಗಳ ಕಾರಣಗಳನ್ನು ಆಳವಾಗಿ ವಿಶ್ಲೇಷಿಸಿದಾಗ, ಕರ್ತವ್ಯ ವೇಳೆಯಲ್ಲಿ ಚಾಲಕರು ಮೊಬೈಲ್ ಬಳಕೆ ಮಾಡುತ್ತಿರುವುದು ಸಹ ಒಂದು ಕಾರಣವಾಗಿರುವ ಸಾಧ್ಯತೆ ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ, ಚಾಲನಾ ಸಿಬ್ಬಂದಿಗಳು ಕರ್ತವ್ಯದ ಮೇಲೆ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone), ಇತ್ಯಾದಿಗಳನ್ನು ಬಳಸುವುದನ್ನು ಹಾಗೂ ಮೊಬೈಲ್ನಲ್ಲಿ ಮಾತನಾಡುವುದು ಇತ್ಯಾದಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪ್ರಕರಣಗಳು ದಾಖಲಾದಲ್ಲಿ ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಪ್ರಕರಣಗಳನ್ನು ಗಂಭೀರ ಕೆಂಪು ಗುರುತಿನ ಪ್ರಕರಣಗಳಾಗಿ (ORMC) ಪರಿಗಣಿಸಬೇಕು ಎಂದು ಆದೇಶಿಸಿದ್ದಾರೆ.

ಚಾಲಕರ ಮೊಬೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖಾ ಸಿಬ್ಬಂದಿಗಳು, ಡಿಎಂಗಳು, ಡಿಸಿಗಳು ಕೂಡ ಗಂಭೀರ ಕೆಂಪು ಗುರುತಿನ ಪ್ರಕರಣ ಎಂದು ಪರಿಗಣಿಸಿ ಅದನ್ನು ತಪ್ಪದೆ ಪಾಲಿಸಬೇಕು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ನೋಡಿ : BMTC ORMC 26 Aug 2025
Related


You Might Also Like
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ
ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ...
KKRTC ನೌಕರ ನಿಧನ ಪ್ರಕರಣ: ಸಹೋದರನಿಗೆ ಅನುಕಂಪದ ಉದ್ಯೋಗ ಪಡೆಯುವ ಹಕ್ಕಿದೆ- ಹೈಕೋರ್ಟ್ ತೀರ್ಪು
ಬೆಂಗಳೂರು: ಸರ್ಕಾರಿ ನೌಕರನ ಪತ್ನಿ, ಪತಿಗಿಂತ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿರಲಿಲ್ಲದಿದ್ದಾಗ ಹಾಗೂ ಆನಂತರದಲ್ಲಿ ಸರ್ಕಾರಿ ನೌಕರನೂ ನಿಧನರಾದಾಗ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರರಿಗೆ ಅನುಕಂಪದ ಆಧಾರದಲ್ಲಿ...
ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ ನಾಗಣ್ಣಗೌಡ ಭೇಟಿ
ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ...
NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ
ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ...
ಗಣಪನ ವಿಸರ್ಜನೆಗೆ 41 ಕಲ್ಯಾಣಿಗಳು, 489 ಸಂಚಾರಿ ವಾಹನಗಳು ಸಜ್ಜು
ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು ಹಾಗೂ...
ರಸ್ತೆ ಅಗೆದೆಡೆ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ಕೊಡಿ: ಆಡಳಿತಗಾರ ತುಷಾರ್ ಗಿರಿನಾಥ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್...
ಆ.28ರಂದು ಕನಿಷ್ಠ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಮುಸ್ಸಂಜೆಯ ಇಳಿವಯಸ್ಸಿನಲ್ಲಿರುವ ಪ್ರಬುದ್ಧ ಇಪಿಎಸ್-95 ನಿವೃತ್ತರು ಕಳೆದೊಂದು ದಶಕದಿಂದ ದೇಶಾದ್ಯಂತ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಕೊಡದೆ ಉದ್ಧಟತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಸಮಸ್ತ ನಿವೃತ್ತರು...
ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು
ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್ನಲ್ಲಿ ಸಮಾವೇಶಗೊಂಡಿತು. ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು...