NEWSನಮ್ಮಜಿಲ್ಲೆನಮ್ಮರಾಜ್ಯ

BMTC: 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಪೋದಿಂದ ಬಸ್‌ ಹೊರ ತೆಗೆಯದೆ ಎಲೆಕ್ಟ್ರಿಕ್‌ ಬಸ್‌ ಚಾಲಕರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಭಾನುವಾರ ಬಸ್‌ಗಳನ್ನು ಡಿಪೋದಿಂದ ಹೊರಕ್ಕೆ ತೆಗೆಯದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ 6 ತಿಂಗಳ ಹಿಂದೆ ನೋವೋ ಬಸ್ ಟ್ರಾನ್ಸಿಟ್ ಸಿಸ್ಟಮ್‌ ಪ್ರೈವೇಟ್ ಲಿಮಿಟೆಡ್ ಮತ್ತು SWITCH ಕಂಪೆನಿಯಿಂದ ಯಲಹಂಕದಲ್ಲಿರುವ ಪುಟ್ಟೇನಹಳ್ಳಿಯ ಬೆಂಮಸಾಸಂ ಘಟಕ -30ರಲ್ಲಿ ಕೆಲಸ ಮಾಡುತ್ತಿದ್ದೇವೆ.

ಆದರೆ ನಮಗೆ ಸರಿಯಾದ ಸೌಲಭ್ಯಗಳನ್ನು ನೀಡುವಲ್ಲಿ ಕಂಪನಿ ಮತ್ತು ಸಂಸ್ಥೆ ವಿಫಲವಾಗಿದೆ ಎಂದು ಆರೋಪಿಸಿ ಜಮಾಯಿಸಿರುವ ಚಾಲಕರು ನಮಗೆ ವೇತನ ಸಾಲುತ್ತಿಲ್ಲ, ಮೆಡಿಕಲ್‌ ಸೌಲಭ್ಯವನ್ನೂ ಒದಗಿಸಬೇಕು ಎಂಬುವುದು ಸೇರಿ ಸುಮಾರು 10 ವಿವಿಧ ಬೇಡಿಕೆಗಳನ್ನು ಡಿಪೋ ವ್ಯವಸ್ಥಾಪಕರ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ನೋವೋ ಬಸ್ ಟ್ರಾನ್ಸಿಟ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು SWITCH ಎಂಬ ಕಂಪೆನಿಯಲ್ಲಿ ಸುಮಾರು 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದೇವೆ, ನಮ್ಮಲ್ಲಿರುವ ಕೆಲ ಸಮಸ್ಯೆಗಳನ್ನು ಹೇಳಿಕೊಂಡರು ತಾವು ಇನ್ನು ಸ್ಪಂದಿಸಿಲ್ಲ ಹೀಗಾಗಿ ನಮ್ಮ ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪಟ್ಟು ಹಿಡಿದು ಒಂದೇ ಒಂದು ಬಸ್‌ಅನ್ನು ಘಟಕದಿಂದ ಹೊರಗೆ ತೆಗೆಯದೇ ಹೋರಾಟ ಮಾಡುತ್ತಿದ್ದಾರೆ.

ಚಾಲಕರ ಬೇಡಿಕೆಗಳು ಏನೇನು?: 1) ಸಂಬಳದ ಚೀಟಿ’ (SALARY SLIP) ಕೊಡಬೇಕು. 2) ಕೆಲಸಕ್ಕೆ ಸೇರಿರುವ ನೇಮಕಾತಿ ಆದೇಶ ಪತ್ರ (APPOINTMENT LETTER) ಕೊಡಬೇಕು.

3) ಚಾಲಕರಿಗೆ ಕ್ಯಾಂಟೀನ್ ವ್ಯವಸ್ಥೆ ಅಥವಾ ಡ್ರೈವರ್ ಬಾಟ – 4) ಮಾಸಿಕ ಪಾಸು (KSRTC BMTC) ಸೌಲಭ್ಯ ಒದಗಿಸಿಕೊಡಬೇಕು. 5) ಪ್ರತಿ ತಿಂಗಳು 5 ರಿಂದ 8 ನೇ ತಾರೀಖಿನ ಒಳಗೆ ಸಂಬಳವನ್ನು ನಮ್ಮ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು.

6) ಸಂಬಳವನ್ನು ಈಗಿರುವ ₹25000 ದಿಂದ ₹30000ಕ್ಕೆ ಹೆಚ್ಚಿಸಬೇಕು. 7) ಉತ್ತಮ ಗುಣಮಟ್ಟದ ಸಮವಸ್ತ್ರ ಹಾಗೂ ಶೂ ನೀಡಬೇಕು. 8) ಚಾಲಕರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವುದು.

9) ಚಾಲಕರಿಗೆ ಮಾಸಿಕ CL, EL ನೀಡಬೇಕು ಮತ್ತು 10) ಚಾಲಕರಿಗೆ ಅಪಘಾತ ವಿಮೆ ಸೌಲಭ್ಯವನ್ನು ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ