ಬೆಂಗಳೂರು: ಸಾರಿಗೆ ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿಯನ್ನು ನೀಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಎಲ್ಲ ವಲಯಗಳು, ಕೇಂದ್ರ ಕಚೇರಿ ಅಧಿಕಾರಿಗಳಿಗೂ ಸೂಚನೆ ನೀಡಿರುವ ಅವರು, ಬೆಂಗಳೂರು ಮಹಾನಗರವು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಾ ಇದ್ದು ಅದರಂತೆ ಸಂಸ್ಥೆಯ ಕಾರ್ಯಚರಣೆ ವ್ಯಾಪ್ತಿಯು ವಿಸ್ತಾರಗೊಂಡು ಪ್ರತಿ ತಿಂಗಳೂ ಸರಿ ಸುಮಾರು 18 ಲಕ್ಷ ಸುತ್ತುವಳಿಗಳನ್ನು ಕಾರ್ಯಚರಣೆಗೊಳಿಸುತ್ತಿದೆ.
ಆದರೆ, ಮಾಹೆವಾರು ಶೇ 1.1 ರಷ್ಟು ಮಾತ್ರ ವಾಹನಗಳು ತನಿಖೆಗೊಳಪಡುತ್ತಿದ್ದು ಹೆಚ್ಚಿನ ಮಟ್ಟದಲ್ಲಿ ವಾಹನಗಳನ್ನು ತನಿಖೆಗೊಳಪಡಿಸಲು ಕಷ್ಟ ಸಾದ್ಯವಾಗುತ್ತಿದೆ. ಆದುದರಿಂದ ಸಾರಿಗೆ ಆದಾಯ ಸೋರಿಕೆಯನ್ನು ತಡೆಗಟ್ಟಲು ಘಟಕಗಳಲ್ಲಿ ಮಾರ್ಗದ ಮೇಲೆ ಸಂಸ್ಥೆಯ ಸಾರಿಗೆ ಆದಾಯವನ್ನು ಸೋರಿಕೆ ಮಾಡುವ ನಿರ್ವಾಹಕರನ್ನು ಗುರುತಿಸಿ ಪ್ರತಿ ತಿಂಗಳೂ ಘಟಕದಿಂದ ಐವರು ನಿರ್ವಾಹಕರ ಪಟ್ಟಿಯನ್ನು ಅನಿರಿಕ್ಷಿತವಾಗಿ ತನಿಖೆ ಮಾಡಲು ಗೌಪ್ಯವಾಗಿ ಕಳುಹಿಸಿಕೊಡಿ ಎಂದು ಸೂಚನೆ ನೀಡಿದ್ದಾರೆ.
ಬಿಎಂಟಿಸಿ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಅವರು ಏ.17ರಂದು ಈ ಸೂಚನೆ ನೀಡಿದ್ದು, ಇದಕ್ಕೆ ಕೆಲ ನೌಕರರು ನಿರ್ವಾಹಕರನ್ನು ಕಳ್ಳರಂತೆ ಬಿಂಬಿಸಲು ಹೊರಟಿದ್ದಾರೆ. ಆದರೆ ನಿಜವಾದ ಕಳ್ಳರು ಇರುವುದು ಕಚೇರಿಯಲ್ಲೇ ಮೊದಲು ಆ ಕಳ್ಳರನ್ನು ಹಿಡಿದರೆ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಈ ಸೂಚನೆ ನೀಡಿರುವ ಜಾಗೃತಾಧಿಕಾರಿ ಅವರು ಎಲ್ಲ ಘಟಕ ವ್ಯವಸ್ಥಾಪಕರಿಗೂ ಮಾಹಿತಿಗಾಗಿ ಹಾಗೂ ಅಗತ್ಯ ಕ್ರಮಕ್ಕಾಗಿ ಪ್ರತಿಯನ್ನು ಕಳಿಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳುವುದಕ್ಕಿಂತ ಮೊದಲು ಭ್ರಷ್ಟ ಅಧಿಕಾರಿಗಳ ಪಟ್ಟಿ ಇವರತ್ರ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಜತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವ ನಿರ್ವಾಹಕರ ಪಟ್ಟಿ ಕೇಳುತ್ತಾರೆ ಆದಾಯ ಸೋರಿಕೆ ಆಗುತ್ತಿರುವುದು ಭ್ರಷ್ಟಾಧಿಕಾರಿಗಳಿಂದ ಅವರ ಪಟ್ಟಿಯನ್ನು ಮೊದಲು ತರಿಸಿಕೊಳ್ಳಿ, ನೌಕರರಿಗೆ ನೀಡುತ್ತಿರುವ ಕಿರುಕುಳ ಲಂಚ ವಸೂಲಿತನ ತಪ್ಪಿಸಿದರೆ ಆದಾಯ ಸೋರಿಕೆ ತಾನಾಗಿಯೇ ನಿಲ್ಲುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಕೆಲ ನೌಕರರು ಈ ರೀತಿ ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿ ನೀಡುವಂತೆ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಕೇಳಿದರೆ ಘಟಕಗಳಲ್ಲಿ ಲಂಚ ಕೊಡದ ನೌಕರರ ಪಟ್ಟಿಯನ್ನು ಬಹುತೇಕ ಅಧಿಕಾರಿಗಳು ನಿಮಗೆ ಕಳಿಸಿಕೊಡುವ ಮೂಲಕ ಅವರನ್ನು ಟಾರ್ಗೆಟ್ ಮಾಡುತ್ತಾರೆ. ಈ ಬಗ್ಗೆ ತಾವು ಎಚ್ಚರಿಕೆ ವಹಿಸಿದರೆ ಒಳ್ಳೆಯದು ಎಂದು ಮನವಿ ಮಾಡಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...