ಬೆಂಗಳೂರು: ಸಾರಿಗೆ ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿಯನ್ನು ನೀಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಎಲ್ಲ ವಲಯಗಳು, ಕೇಂದ್ರ ಕಚೇರಿ ಅಧಿಕಾರಿಗಳಿಗೂ ಸೂಚನೆ ನೀಡಿರುವ ಅವರು, ಬೆಂಗಳೂರು ಮಹಾನಗರವು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಾ ಇದ್ದು ಅದರಂತೆ ಸಂಸ್ಥೆಯ ಕಾರ್ಯಚರಣೆ ವ್ಯಾಪ್ತಿಯು ವಿಸ್ತಾರಗೊಂಡು ಪ್ರತಿ ತಿಂಗಳೂ ಸರಿ ಸುಮಾರು 18 ಲಕ್ಷ ಸುತ್ತುವಳಿಗಳನ್ನು ಕಾರ್ಯಚರಣೆಗೊಳಿಸುತ್ತಿದೆ.
ಆದರೆ, ಮಾಹೆವಾರು ಶೇ 1.1 ರಷ್ಟು ಮಾತ್ರ ವಾಹನಗಳು ತನಿಖೆಗೊಳಪಡುತ್ತಿದ್ದು ಹೆಚ್ಚಿನ ಮಟ್ಟದಲ್ಲಿ ವಾಹನಗಳನ್ನು ತನಿಖೆಗೊಳಪಡಿಸಲು ಕಷ್ಟ ಸಾದ್ಯವಾಗುತ್ತಿದೆ. ಆದುದರಿಂದ ಸಾರಿಗೆ ಆದಾಯ ಸೋರಿಕೆಯನ್ನು ತಡೆಗಟ್ಟಲು ಘಟಕಗಳಲ್ಲಿ ಮಾರ್ಗದ ಮೇಲೆ ಸಂಸ್ಥೆಯ ಸಾರಿಗೆ ಆದಾಯವನ್ನು ಸೋರಿಕೆ ಮಾಡುವ ನಿರ್ವಾಹಕರನ್ನು ಗುರುತಿಸಿ ಪ್ರತಿ ತಿಂಗಳೂ ಘಟಕದಿಂದ ಐವರು ನಿರ್ವಾಹಕರ ಪಟ್ಟಿಯನ್ನು ಅನಿರಿಕ್ಷಿತವಾಗಿ ತನಿಖೆ ಮಾಡಲು ಗೌಪ್ಯವಾಗಿ ಕಳುಹಿಸಿಕೊಡಿ ಎಂದು ಸೂಚನೆ ನೀಡಿದ್ದಾರೆ.
ಬಿಎಂಟಿಸಿ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಅವರು ಏ.17ರಂದು ಈ ಸೂಚನೆ ನೀಡಿದ್ದು, ಇದಕ್ಕೆ ಕೆಲ ನೌಕರರು ನಿರ್ವಾಹಕರನ್ನು ಕಳ್ಳರಂತೆ ಬಿಂಬಿಸಲು ಹೊರಟಿದ್ದಾರೆ. ಆದರೆ ನಿಜವಾದ ಕಳ್ಳರು ಇರುವುದು ಕಚೇರಿಯಲ್ಲೇ ಮೊದಲು ಆ ಕಳ್ಳರನ್ನು ಹಿಡಿದರೆ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಈ ಸೂಚನೆ ನೀಡಿರುವ ಜಾಗೃತಾಧಿಕಾರಿ ಅವರು ಎಲ್ಲ ಘಟಕ ವ್ಯವಸ್ಥಾಪಕರಿಗೂ ಮಾಹಿತಿಗಾಗಿ ಹಾಗೂ ಅಗತ್ಯ ಕ್ರಮಕ್ಕಾಗಿ ಪ್ರತಿಯನ್ನು ಕಳಿಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳುವುದಕ್ಕಿಂತ ಮೊದಲು ಭ್ರಷ್ಟ ಅಧಿಕಾರಿಗಳ ಪಟ್ಟಿ ಇವರತ್ರ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಜತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವ ನಿರ್ವಾಹಕರ ಪಟ್ಟಿ ಕೇಳುತ್ತಾರೆ ಆದಾಯ ಸೋರಿಕೆ ಆಗುತ್ತಿರುವುದು ಭ್ರಷ್ಟಾಧಿಕಾರಿಗಳಿಂದ ಅವರ ಪಟ್ಟಿಯನ್ನು ಮೊದಲು ತರಿಸಿಕೊಳ್ಳಿ, ನೌಕರರಿಗೆ ನೀಡುತ್ತಿರುವ ಕಿರುಕುಳ ಲಂಚ ವಸೂಲಿತನ ತಪ್ಪಿಸಿದರೆ ಆದಾಯ ಸೋರಿಕೆ ತಾನಾಗಿಯೇ ನಿಲ್ಲುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಕೆಲ ನೌಕರರು ಈ ರೀತಿ ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿ ನೀಡುವಂತೆ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಕೇಳಿದರೆ ಘಟಕಗಳಲ್ಲಿ ಲಂಚ ಕೊಡದ ನೌಕರರ ಪಟ್ಟಿಯನ್ನು ಬಹುತೇಕ ಅಧಿಕಾರಿಗಳು ನಿಮಗೆ ಕಳಿಸಿಕೊಡುವ ಮೂಲಕ ಅವರನ್ನು ಟಾರ್ಗೆಟ್ ಮಾಡುತ್ತಾರೆ. ಈ ಬಗ್ಗೆ ತಾವು ಎಚ್ಚರಿಕೆ ವಹಿಸಿದರೆ ಒಳ್ಳೆಯದು ಎಂದು ಮನವಿ ಮಾಡಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...