CrimeNEWSನಮ್ಮಜಿಲ್ಲೆನಮ್ಮರಾಜ್ಯ

BMTC: ಷರತ್ತುಗಳ ಒಪ್ಪಿದರೆ FIR ಪ್ರಕರಣ ಇರುವ ವಜಾಗೊಂಡ ನೌಕರರ ಮರು ನೇಮಕ- ಎಂಡಿ ರಾಮಚಂದ್ರನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 2021ರ ಏಪ್ರಿಲ್‌ನಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ FIR ಪ್ರಕರಣಗಳು ದಾಖಲಾಗಿರುವ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರು ಒಪ್ಪಿದರೆ ಜಂಟಿ ಮೆಮೋದೊಂದಿಗೆ ಸಂಸ್ಥೆಯ ಸೇವೆಗೆ ಮರುನೇಮಕ ಮಾಡಿಕೊಳ್ಳಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ತಿಳಿಸಿದ್ದಾರೆ.

ಈ ಬಗ್ಗೆ ನಿಗಮದ ಮುಖ್ಯ ಕಾನೂನು ಅಧಿಕಾರಿ ಮೂರು ಷರತ್ತುಗಳನ್ನು ವಿಧಿಸಿರುವ ಮೆಮೋವನ್ನಿ ಇಂದು ಬಿಡುಗಡೆ ಮಾಡಿದ್ದು ಈ ಷರತ್ತುಗಳಿಗೆ ಒಪ್ಪಿದರೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ಎಂಡಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿರುವ ನೌಕರರನ್ನು ಸಂಸ್ಥೆಯ ಸೇವೆಯಿಂದ ವಜಾಗೊಳಿಸಲಾಗಿದ್ದು, ಕೆಲವು ನೌಕರರ ಮೇಲೆ FIR ದಾಖಲಾಗಿದೆ. ಈ FIR ದಾಖಲಾಗಿರುವ ನೌಕರರನ್ನು ಸಂಸ್ಥೆಯ ಸೇವೆಗೆ ಮರುನೇಮಕ ಮಾಡಿಕೊಳ್ಳುವಂತೆ ನೌಕರರ ಸಂಘಗಳಿಂದ ಮನವಿಗಳು ಬಂದಿದ್ದು, ಆ ಮನವಿಗಳು ಹಾಗೂ ಪ್ರಕರಣಗಳನ್ನು ವ್ಯವಸ್ಥಾಪಕ ನಿರ್ದೇಶಕರು ಪರಿಶೀಲಿಸಿ ಕಾರ್ಮಿಕ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೂರು ಷರತ್ತುಗಳನ್ವಯ ಸಂಸ್ಥೆಯ ಸೇವೆಗೆ ಮರುನೇಮಕ ಮಾಡಿಕೊಳ್ಳಲು ಅನುಮೋದನೆ ನೀಡಿದ್ದಾರೆ ಎಂದು ಮುಖ್ಯ ಕಾನೂನು ಅಧಿಕಾರಿ ತಿಳಿಸಿದ್ದಾರೆ.

ಜಂಟಿ ಮೆಮೋದ ನಿಬಂಧನೆಗಳು: I. ವಜಾಗೊಳಿಸುವ ಅವಧಿಯಲ್ಲಿ ಅಂದರೆ, ವಜಾಗೊಳಿಸಿದ ದಿನಾಂಕದಿಂದ ಮರು ನೇಮಕವಾಗುವ ದಿನಾಂಕದವರೆಗೆ ಯಾವುದೇ ಸೌಲಭ್ಯಗಳನ್ನು ಕೇಳದೆ ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಈ ಅವಧಿಯ ವೇತನವನ್ನೂ ಕೇಳದೆ ಸೇವೆಯ ನಿರಂತರತೆಯೊಂದಿಗೆ ಮರು ನೇಮಕ ಮಾಡಿಕೊಳ್ಳಲಾಗುವುದು.

II. ನೌಕರರು ಸಂಸ್ಥೆಗೆ ಮರು ನೇಮಕಗೊಂಡ ದಿನದಿಂದ 3 ವರ್ಷಗಳ ಅವಧಿಗೆ ಸಂಚಿತ ಪರಿಣಾಮವಿಲ್ಲದೆ 1 ವಾರ್ಷಿಕ ಇನ್ಕ್ರಿಮೆಂಟ್ ಅನ್ನು ಮುಂದೂಡಲು ಒಪ್ಪಿಕೊಳ್ಳಬೇಕು.

III. ಇನ್ನು ಭವಿಷ್ಯದಲ್ಲಿ ನಡೆಯುವ ಸಾರಿಗೆ ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಅಥವಾ ಇತರ ನಿಷ್ಠಾವಂತ ಉದ್ಯೋಗಿಗಳನ್ನು ಮುಷ್ಕರಕ್ಕೆ ಹೋಗುವಂತೆ ಪ್ರೇರೇಪಿಸುವುದಿಲ್ಲ ಮತ್ತು ಮುಷ್ಕರದ ಅವಧಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗುವುದಿಲ್ಲ ಎಂಬ ಷರತ್ತಿಗೆ ಒಪ್ಪಿಕೊಳ್ಳಬೇಕು.

ಈ ಮೂರು ಷರತ್ತುಗಳನ್ನು ಒಪ್ಪುವುದಾದರೆ ವಜಾಗೊಂಡು ಎಫ್‌ಐಆರ್‌ ಆಗಿರುವ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗುವುದು ಎಂದು ಇಂದು ಮೇಮೊ ಹೊರಡಿಸಿದ್ದಾರೆ. ಈ ಬಗ್ಗೆ ನೌಕರರು ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾರೋ ಎಂಬುವುದು ಇನ್ನಷ್ಟೇ ತಿಳಿಯಬೇಕಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...