“ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ MD ಅನ್ಬುಕುಮಾರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು ಇದೇ ಜ.6ರಂದು ಚಾಲನೆ ನೀಡಿದ್ದಾರೆ.
ಇನ್ನು ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸಂತಸ ವ್ಯಕ್ತಪಡಿಸಿ ನೌಕರರಿಗೆ ಪತ್ರ ಬರೆದಿದ್ದಾರೆ.
ಆ ಪತ್ರದಲ್ಲಿ … ಆತ್ಮೀಯ ನೌಕರ ಬಾಂಧವರೇ,
ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು 06.01.2025 ರಂದು ಚಾಲನೆ ನೀಡಿದ್ದಾರೆ. ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿರುತ್ತದೆ.
ಜನವರಿ 11ರವರೆಗೂ 41 ಮಂದಿ ಒಳರೋಗಿಗಳಾಗಿ ಹಾಗೂ 124 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯ ಕಾರ್ಡ್ ಇಲ್ಲದೆಯೂ ನೌಕರರು ತಮ್ಮ PF Number ಹೇಳಿ ಚಿಕಿತ್ಸೆ ವಡೆಯಬಹುದಾಗಿದೆ.
ನಿಗಮದಲ್ಲಿ 33,288 ಅಧಿಕಾರಿ/ಸಿಬ್ಬಂದಿಗಳ ಪೈಕಿ 23,342 ಸಿಬ್ಬಂದಿಗಳಿಗೆ ಈಗಾಗಲೇ ಆರೋಗ್ಯ ಕಾರ್ಡ್ ವಿತರಿಸಲಾಗಿದ್ದು, ಉಳಿದ 9,946 ಸಿಬ್ಬಂದಿಗಳಿಗೆ ನಾಳೆ 12.01.2025 ರೊಳಗಾಗಿ ವಿತರಿಸಲಾಗುವುದು.
ಚಿಕಿತ್ಸಾ ವೆಚ್ಚವನ್ನು 30 ದಿನದೊಳಗಾಗಿ ಆಸ್ಪತ್ರೆಗಳಿಗೆ ಪಾವತಿಸಲಾಗುವುದೆಂದು ತಿಳಿಸಲಾಗಿತ್ತು. ಆದರೆ, ಎಲ್ಲ ಬಿಲ್ಲು/ ದಾಖಲೆಗಳು ಸರಿಯಾಗಿ ನಿಗದಿತ ಸಮಯದಲ್ಲಿ ಒದಗಿಸಿದ್ದಲ್ಲಿ 48 ಗಂಟೆಯೊಳಗೆ ಪಾವತಿಸಲು ಕ್ರಮ ವಹಿಸಲಾಗುವುದು. ಅದರಂತೆ ಈಗಾಗಲೇ 8 ಪ್ರಕರಣಗಳಿಗೆ 48 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಪಾವತಿಸಲಾಗಿದೆ.
ಮುಂದುವರಿದು, ಈ ಯೋಜನೆಯಲ್ಲಿ ಚಿಕಿತ್ಸಾ ವೆಚ್ಚವನ್ನು CGHS ದರದಂತೆ ಪಾವತಿಸಲಾಗುವುದೆಂದು ತಿಳಿಸಿದ್ದು, CGHS ದರಪಟ್ಟಿಯಲ್ಲಿ ಇಲ್ಲದ ವಸ್ತುಗಳಾದ Consumables/ Non Admissible items ಗಳಿಗೆ ನೌಕರರೇ ಪಾವತಿಸುವಂತೆ ಈ ಮೊದಲು ತಿಳಿಸಲಾಗಿತ್ತು.
ಆದರೆ ಕೆಲವೊಂದು ವಸ್ತುಗಳು ಚಿಕಿತ್ಸೆಯ ಭಾಗವಾಗಿದ್ದು ಅವುಗಳನ್ನು ಹಾಗೂ ಅಲಂಕಾರಿಕ ವಸ್ತುಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ವಸ್ತುಗಳಿಗೆ CGHS ದರ ಪಟ್ಟಿಯಲ್ಲಿ ಒಳಗೊಂಡಿಲ್ಲವಾದರೂ ಸಹ (Consumables/ Non Admissible ವಸ್ತುಗಳ ಪ್ರತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದೆ) ನೌಕರರಿಗೆ ಆರ್ಥಿಕ ಹೊರೆಯಾಗಬಾರದೆಂಬ ಆಶಯದಿಂದ ನಿಗಮದ ವತಿಯಿಂದ ಪಾವತಿಸಲು ತೀರ್ಮಾನಿಸಲಾಗಿದೆ.
ಶುಭಾಶಯಗಳೊಂದಿಗೆ
(ವಿ. ಅನ್ನುಕುಮಾರ್ ಭಾಆಸೇ..)
ವ್ಯವಸ್ಥಾಪಕ ನಿರ್ದೇಶಕರು ಎಂದು ಪತ್ರ ಬರೆಯುವ ಮೂಲಕ ಎಲ್ಲ ನೌಕರರೊಂದಿಗೂ ಖುಷಿಯನ್ನು ಶೇರ್ ಮಾಡಿಕೊಂಡಿದ್ದಾರೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...