CrimeNEWSನಮ್ಮಜಿಲ್ಲೆ

BMTC: ಕೇಂದ್ರ ಕಚೇರಿಯ ರೆಕಾರ್ಡ್‌ ರೂಮ್‌ನಲ್ಲಿ ಸಿಬ್ಬಂದಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರು ಕೇಂದ್ರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೆಂಗೇರಿಯ ಬಿಎಂಟಿಸಿ ಘಟಕ -12ರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗಷ್ಟೆ ಮುಂಬಡ್ತಿ ಮೇರೆಗೆ ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದ ಮಹೇಶ್‌ ಎಂಬುವರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ.

ಮಹೇಶ್‌ ಅವರು ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದು, ಬಳಿಕ ಮನೆಗೆ ಹೋಗದೆ ರೆಕಾರ್ಡ್‌ ರೂಮ್‌ನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇವರ ಆತ್ಮಹತ್ಯೆಗೆ ಏನು ಕಾರಣ ಎಂದು ತಿಳಿದು ಬಂದಿಲ್ಲ.

ಮಹೇಶ್‌ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕೊಠಡಿಗೆ ನಿನ್ನೆ ಬೀಗಹಾಕಲಾಗಿತ್ತು. ಮತ್ತು ಇಂದು ಬೆಳಗ್ಗೆ ಬಂದು ರೂಮ್‌ನ ಬೀಗ ತೆಗೆದಾಗ ವಿಷಯ ಗೊತ್ತಾಗಿದೆ. ಈ ನಡುವೆ ನಿನ್ನೆ ರೂಮ್‌ಗೆ ಬೀಗ ಹಾಕಿಕೊಂಡು ಹೋದ ಸಿಬ್ಬಂದಿ ಮಹೇಶ್‌ ಕೊಠಡಿಯಲ್ಲಿ ಇರುವುದರ ಬಗ್ಗೆ ಗಮನಿಸದಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಇನ್ನು ಮೃತದೇಹವನ್ನು ಕುಣಿಕೆಯಿಂದ ಕೆಳಗೆ ಇಳಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಮಹೇಶ್‌ ಮನೆಯವರು ಬರುವ ತನಕ ಕುಣಿಕೆಯಿಂದ ಇಳಿಸಬಾರದು ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

ಒಟ್ಟಾರೆ ಸಾರಿಗೆ ನಿಗಮದಲ್ಲಿ ನೌಕರರಿಗೆ ಅಧಿಕಾರಿಗಳ ಕಿರುಕುಳ ಹೆಚ್ಚಾಗಿರುವುದು ತಿಳಿದ ವಿಷಯವಾಗಿದೆ. ಆದರೆ ಮಹೇಶ್‌ ಆತ್ಮಹತ್ಯೆಗೆ ಏನು ಕಾರಣ ಎಂಬುವುದು ಅವರ ಕುಟುಂಬದವರು ಬಂದ ಮೇಲಷ್ಟೇ ಗೊತ್ತಾಗಲಿದೆ ಎಂದು ಸ್ಥಳದಲ್ಲಿರುವ ನೌಕರರು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ