BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ

ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ ಹೊಡೆದ ಘಟನೆ ಸಂಬಂಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾನುವಾರ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಇದೇ ರೀತಿಯ ಘಟನೆಗಳು ನಮ್ಮ ಸಾರಿಗೆ ಸಿಬ್ಬಂದಿ ಮೇಲೆ ಆಗಾಗ ಮರುಕಳಿಸುತ್ತಲೇ ಇವೆ. ಜನರಿಗಾಗಿ ಸೇವೆ ನೀಡುವ ನಮ್ಮ ನೌಕರರ ಮೇಲಿನ ಹಲ್ಲೆ ತಡೆಗೆ ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿ ಮೇಲೆ ಹಲ್ಲೆ, ಅವಮಾನ ಮಾಡಿದ ಬೆನ್ನಲ್ಲೆ ರಾಮಲಿಂಗಾ ರೆಡ್ಡಿ ಅವರು ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ನಾನು ಪೊಲೀಸ್ ಆಯುಕ್ತರು ಬೆಂಗಳೂರು ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿದ್ದೇನೆ. ಈ ಎಲ್ಲ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಇನ್ನು ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿ ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ಮಾಡಿದ್ದಾರೆ. ಈ ಹಿಂದೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಾಲ್ಕೂ ನಿಗಮಗಳ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.
ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸುವಂತೆ ಗೃಹ ಸಿಚುವರು ಹಾಗೂ ಪೊಲೀಸ್ ಆಯಕ್ತರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...