NEWSನಮ್ಮಜಿಲ್ಲೆನಮ್ಮರಾಜ್ಯ

BMTC- ಗುಳ್ಳೆನರಿ ಬುದ್ಧಿ ತೋರಿಸುವ ಸರ್ಕಾರ ಎಂದ ಬಿಜೆಪಿ- ಲಾಭಕ್ಕೂ ಆದಾಯಕ್ಕೂ ವ್ಯತ್ಯಾಸ ತಿಳಿಯದ ಮೂಢರು ಎಂದ ಸಾರಿಗೆ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಕರ್ನಾಟಕ ಸಾರಿಗೆ ಸಂಸ್ಥೆಯ ಭಾಗವಾಗಿರುವ ಬಿಎಂಟಿಸಿ ಲಾಭದಲ್ಲಿದೆ ಎನ್ನುವ ಸಾರಿಗೆ ಸಚಿವರ ಎಕ್ಸ್‌ಗೆ, ಬಿಜೆಪಿಯ ಐಟಿ ಸೆಲ್ ಎಕ್ಸ್‌ ಮಾಡಿ, ಗುಳ್ಳೆನರಿ ಬುದ್ದಿ ತೋರಿಸಬೇಡಿ ಎಂದು ವ್ಯಂಗ್ಯವಾಡಿತ್ತು.

ಅದಕ್ಕೆ ಪ್ರತಿಕ್ರಿಯಿಸಿರುವ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ, ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತವೆನಿಸಿದರೂ, ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ ಎಂಬುದಕ್ಕಾಗಿ ಈ ಪ್ರತಿಕ್ರಿಯೆ ನೀಡುತ್ತಿದ್ದೇವೆ ಎಂದು ಅದೇ ದಾಟಿಯಲ್ಲಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಮಾಡಿದ ಟ್ವೀಟ್: ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಪತನಗೊಳ್ಳಲು ಸಿದ್ಧವಾಗಿರುವ @INCKarnataka ಬಿಎಂಟಿಸಿ ಲಾಭದಲ್ಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ತೇಪೆ ಹಚ್ಚಿಕೊಳ್ಳಲು ಯತ್ನಿಸುತ್ತಿದೆ. ಕಾಂಗ್ರೆಸ್‌ ಸುಳ್ಳು ಸುದ್ದಿಯ ಕೀಳುಮಟ್ಟದ ರಾಜಕೀಯ ಪ್ರಚಾರ ನೋಡಿ ಜನರು ಸಾಮಾಜಿಕ ಜಾಲತಾಣದಲ್ಲಿ ನಗಾಡುತ್ತಿದ್ದಾರೆ.

ಸಾರಿಗೆ ಇಲಾಖೆಗಳು ನಿಜಕ್ಕೂ ಲಾಭದಲ್ಲೇ ಇದ್ದರೆ, ಮಿನಿಸ್ಟರ್‌ @RLR_BTM ಅವರೇ, ಜನ ಸಾಮಾನ್ಯರ ಮೇಲೆ ಬಸ್‌ ಪ್ರಯಾಣ ದರ ಏರಿಕೆ ಏಕೆ? ಸಾಮಾನ್ಯ ಬಸ್‌ಗಳಿಂದಲೇ ಇಷ್ಟೊಂದು ಲಾಭ ಬರುತ್ತಿದೆ ಎಂದಾದರೆ, ಎಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸೌಲಭ್ಯ ಕೊಡುಬಹುದು ಅಲ್ಲವೇ?

ರಾಜ್ಯದಲ್ಲಿರುವ ಪುರಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಿ. ಸಾರಿಗೆ ನಿಗಮಗಳೆಲ್ಲವೂ ಭರಪೂರ ಲಾಭಗಳಿಸಲಿ. ಶಾಲಾ ಕಾಲೇಜು ಮಕ್ಕಳು ಓಡಾಡುವುದಕ್ಕೆ ಸರಿಯಾದ ಬಸ್‌ ಬಿಡುವ ಯೋಗ್ಯತೆ ಇಲ್ಲದ ಭ್ರಷ್ಟ @siddaramaiah ಸರ್ಕಾರ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಗುಳ್ಳೆ ನರಿ ಬುದ್ಧಿ ತೋರಿಸುತ್ತಿದೆ” ಎಂದು ಬಿಜೆಪಿಯ ಐಟಿ ಸೆಲ್ ಟ್ವೀಟ್ ಮಾಡಿತ್ತು.

ಅದಕ್ಕೆ ಸಾರಿಗೆ ಸಚಿವರು ಎಕ್ಸ್‌ ಮಾಡಿರುವುದು: ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ???

ಸಾರಿಗೆ ಸಂಸ್ಥೆಗಳ‌ ಅಭಿವೃದ್ಧಿಯ ಎರಡು ಪ್ರಮುಖ ಅಂಗಗಳು ಕಾರ್ಮಿಕರು ಹಾಗೂ ಬಸ್ಸುಗಳು.

ದುರಾದೃಷ್ಟವೆಂದರೆ, ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು ನೇಮಕಾತಿ ಆಗಿಲ್ಲ. ನಮ್ಮ ಸರ್ಕಾರ ಸಾರಿಗೆ ಸಂಸ್ಥೆಗಳಲ್ಲಿ 8900 ಖಾಯಂ ನೇಮಕಾತಿಗೆ ಚಾಲನೆ ನೀಡಿ,‌ಈಗಾಗಲೇ 1883 ಚಾಲಕ/ ನಿರ್ವಾಹಕ/ತಾಂತ್ರಿಕ ಸಿಬ್ಬಂದಿಗಳ‌ ಹುದ್ದೆ ಭರ್ತಿ ಮಾಡಿದೆ.

ಸಂಸ್ಥೆಗಳಿಗೆ ಡಕೋಟಾ ಬಸ್ಸುಗಳನ್ನು ಕಲ್ಪಿಸಿದ ಕೀರ್ತಿ ಬಿ.ಜೆ.ಪಿ ಅವರಿಗೆ ಸಲ್ಲಬೇಕು‌. ಕಳೆದ 5 ವರ್ಷಗಳಲ್ಲಿ ಬಿ.ಎಂ.ಟಿ ಸಿ‌ ಹೊರತುಪಡಿಸಿ ಬೇರೆಲ್ಲೂ ಬಸ್‌ಗಳ ಸೇರ್ಪಡೆ ಆಗಿಲ್ಲ, ಕಳೆಪ ಸ್ಥಿತಿಯ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡುವುದು ಪ್ರಯಾಣಿಕರ ಹಿತದೃಷ್ಟಿಯಿಂದ ಸಾಧುವಲ್ಲದ ಕಾರಣ, ನಿಷ್ಕ್ರಿಯಗೊಳಿಸುವ ಕಾರ್ಯ ಒಂದೆಡೆಯಾದರೆ, 1300 ಬಸ್ಸುಗಳನ್ನು ಪುನಶ್ಚೇತನಗೊಳಿಸುವ ಕಾರ್ಯ ಕೂಡ ನಡೆದಿದೆ.

ಸಾರಿಗೆ ಸಂಸ್ಥೆಗಳಲ್ಲಿ 5900 ಹೊಸ ಬಸ್ಸುಗಳ ಸೇರ್ಪಡೆಗೊಳಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ . ಕಳೆದ 1 ವರ್ಷದಲ್ಲಿ ನಾಲ್ಕು‌ ನಿಗಮಗಳಲ್ಲಿ 3000 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.

ಡೀಸೆಲ್ ತೈಲದ ಬೆಲೆ ಹೆಚ್ಚಳದಿಂದ ಕಾರ್ಯಾಚರಣೆ ವೆಚ್ಚದಲ್ಲಿ ವರ್ಷಕ್ಕೆ ₹473.28 ಕೋಟಿ ಮತ್ತು ಸಿಬ್ಬಂದಿ ವೆಚ್ಚದಲ್ಲಿ ಹೆಚ್ಚಳ ₹556.59 ಕೋಟಿ ಸೇರಿ ಒಟ್ಟಾರೆ ಕಾರ್ಯಾಚರಣೆ ವೆಚ್ಚದಲ್ಲಿ ವರ್ಷಕ್ಕೆ ಹೆಚ್ಚಳವಾಗಿರುವ ಅಂದಾಜು ಮೊತ್ತ ರೂ.1029.87 ಕೋಟಿಗಳಾಗುತ್ತದೆ.

ತೈಲದ ಪ್ರತಿ ಲೀಟರ್‌ಗೆ ಸರಾಸರಿ ₹62.44 ರಷ್ಟು ಇದ್ದಾಗ 2020 ರಲ್ಲಿ ಬಸ್ ದರ ಏರಿಕೆಯಾಗಿತ್ತು. ಹಾಲಿ ಕರಾರಸಾ ನಿಗಮಕ್ಕೆ ₹ 85.80 ಡೀಸೆಲ್ ದರವಿದೆ. ಬಿ.ಎಂ.ಟಿ.ಸಿಯಲ್ಲಿ 2015 ರಲ್ಲಿ ಬಸ್ ದರ ಏರಿಕೆಯಾಗಿದ್ದಾಗ ಡೀಸೆಲ್ ದರ ₹53.35 ಆಗಿತ್ತು. ಡೀಸೆಲ್ ದರ ಏರಿಸಿದ ಕೀರ್ತಿ‌ ಕೂಡ ಬಿ.ಜೆ.ಪಿ ಅವರಿಗೆ ಸಲ್ಲಬೇಕು.

2023 ರಲ್ಲಿ ಸಿಬ್ಬಂದಿಗಳ ವೇತನ ಪರಿಷ್ಕರಣೆ ಮಾಡಿದ ಬಿ.ಜೆ.ಪಿ ಸರ್ಕಾರ ವೇತನ ಹೆಚ್ಚಳ ಪಾವತಿಗಾಗಿ ಅಥವಾ ಬಾಕಿ ವೇತನ ಪಾವತಿಸಲು ಯಾವುದೇ ಅನುದಾನವನ್ನು ನೀಡದೆ ಸಿಬ್ಬಂದಿಗಳನ್ನು ಅಡಕತ್ತರಿಯಲ್ಲಿ ಸಿಲುಕಿಸಿ ಹೋಗಿದ್ದಾರೆ. ವೇತನ ಪಾವತಿಗೂ ಹಣವಿಲ್ಲದೆ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ.

ನಾವು ಎಂದು ಸಾರಿಗೆ ಸಂಸ್ಥೆಗಳು ಲಾಭದಲ್ಲಿವೆ ಎಂದು ಹೇಳಿಲ್ಲ, ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದಷ್ಟೇ ಹೇಳಿರುವುದು.

ಕೆ‌ ಎಸ್ ಆರ್ ಟಿ ಸಿ ಆದಾಯ:
2020 – ₹1569 Cr
2021 – ₹2037 Cr
2022 – ₹3349 Cr
2023 – ₹3930 Cr

ಲಾಭಕ್ಕೂ ಆದಾಯಗಳಿಕೆಗೂ ವ್ಯತ್ಯಾಸವೇ ತಿಳಿಯದ ಅಧಮರು ಇವರು.

ಸಾರಿಗೆ ಸಂಸ್ಥೆಗಳನ್ನು ₹5900 ಕೋಟಿ ನಷ್ಟದಲ್ಲಿಟ್ಟು ಹೋಗಿರುವ ಇವರಿಗೆ, ಸಾರಿಗೆ ಸಂಸ್ಥೆಗಳ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂಬುದೇ ತಿಳಿಯದಾಗಿದೆ. ಇವರಿಗೆ ಆತ್ಮ ಸಾಕ್ಷಿಯೇ ಇಲ್ಲವೇ ಎಂದು ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

1 Comment

  • ಆ ಬೇವರ್ಸಿ ಎಡಿಯೂರ, ಆ ಕಂತ್ರಿ ಅಶೋಕ ಇರೋ ಪಕ್ಷಕ್ಕೆ ಸಾರಿಗೆ ನೌಕರರು, ಹಾಗು ಸಂಸ್ಥೆ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ. ಸಂಸ್ಥೆಯ ಲಾಭ ನಷ್ಟದ ಬಗ್ಗೆ ವಿಮರ್ಶೆ ಮಾಡೋ ಯೋಗ್ಯತೆ ಎಲ್ಲಿದೆ, ನೌಕರರಿಗೆ ಕೊಡಬಾರದ ಕಷ್ಟಗಳನ್ನು ಕೊಟ್ಟು ಅವರು ತಿನ್ನುವ ಅನ್ನ ಕಿತ್ತುಕೊಂಡ ಅಯೋಗ್ಯರು. ಅದಕ್ಕೇ ಸಾರಿಗೆ ನೌಕರರು ಇವರನ್ನೂ ಮನೆಗೆ ಕಳಿಸಿದ್ದು, ಈ ಕಾಂಗ್ರೆಸ್ಸಿಗರು ಅಷ್ಟೇ ಕೊಟ್ಟ ಮಾತಿನಂತೆ ಸರಿಸಮಾನ ವೇತನ ಕೊಡದಿದ್ದರೆ ಮನೆಗೆ ಹೋಗೋದಂತೂ ಗ್ಯಾರೆಂಟಿ

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌