- ಈಗಲೇ ನಿರ್ವಾಹಕರ ಹೆದರಿಸಿ ಬಲವಂತದಿಂದ ಶೇ.50ರಿಂದ 60ರಷ್ಟು ಸುಳ್ಳು ಕೇಸ್ ಹಾಕುವ ಅಧಿಕಾರಿಗಳು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಆದಾಯ ಸೋರಿಕೆ ಆಗುತ್ತಿದ್ದು ಸೋರಿಕೆ ಮಾಡುವ ನಿರ್ವಾಹಕ ಹೆಸರನ್ನು ಕೊಡಿ ಎಂದು ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಗಳು ಹೊರಡಿಸಿರುವ ಆದೇಶ ಪತ್ರ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಒತ್ತಾಯಿಸಿದೆ.
ಇದೇ ಏ.17ರಂದು ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದ್ದು. ಈ ಆದೇಶ ಪತ್ರದಲ್ಲಿ ನಿರ್ವಾಹಕರಿಂದಲ್ಲೇ ಸಾರಿಗೆ ಆದಾಯ ಸೋರಿಕೆ ಆಗುತ್ತಿದ್ದು, ಈ ಸೋರಿಕೆಯನ್ನು ತಡೆಯಲು ಪ್ರತಿ ತಿಂಗಳು ಘಟಕಗಳಲ್ಲಿ ಸಾರಿಗೆ ಆದಾಯ ಸೋರಿಕೆ ಮಾಡುವ 5 ನಿರ್ವಾಹಕರನ್ನು ಗುರುತಿಸಿ, ಕೇಂದ್ರ ಕಚೇರಿಗೆ ಮಾಹಿತಿ ನೀಡಬೇಕೆಂದು, ಅವರ ಮೇಲೆ ಅನಿರಿಕ್ಷಿತವಾಗಿ ತನಿಖೆ ಮಾಡುವ ಬಗ್ಗೆ ತಿಳಿಸಿದ್ದೀರಿ.
ಸಾರಿಗೆ ಆದಾಯ ಕೇವಲ ನಿರ್ವಾಹಕರಿಂದ ಮಾತ್ರ ಸೋರಿಕೆ ಆಗುತ್ತಿಲ್ಲವೆಂದು ಸಂಸ್ಥೆಯ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೂ ತಿಳಿದಿದ್ದು, ನಿಜವಾಗಿ ಸಾರಿಗೆ ಆದಾಯ ಸೋರಿಕೆ ಮಾಡುತ್ತಿರುವ ಕೆಲವು ಸಿಬ್ಬಂದಿಗಳನ್ನು ಘಟಕ, ವಿಭಾಗ ಮತ್ತು ಕೇಂದ್ರ ಕಚೇರಿಗಳಲ್ಲಿ ಇಟ್ಟುಕೊಂಡು, ಅಮಾಯಕ ನಿರ್ವಾಹಕರ ಮೇಲೆ ಗದಪ್ರಹಾರ ಮಾಡುವ ಈ ರೀತಿಯ ಕ್ರಮಗಳು ಎಷ್ಟು ಸರಿ? ಈಗ ಕೇಲವು ತನಿಖಾಧಿಕಾರಿಗಳು ಬರೆಯುತ್ತಿರುವ ಕೇಸುಗಳಲ್ಲಿ 50% ರಿಂದ 60% ರಷ್ಟು ಕೇಸುಗಳು ಬಲವಂತದಿಂದ, ನಿರ್ವಾಹಕರನ್ನು ಹೆದರಿಸಿ ಬರೆಯುತ್ತಿರುವ ಸುಳ್ಳು ಕೇಸುಗಳೆಂದು ತಮಗೆ ತಿಳಿಯದ ವಿಚಾರವಲ್ಲ.
ಈ ಮಧ್ಯ ತಾವು ಈ ರೀತಿಯ ಆದೇಶಗಳನ್ನು ಹೊರಡಿಸುವುದರಿಂದ ಘಟಕ ಮಟ್ಟದಲ್ಲಿ ಕೆಲವು ಅಧಿಕಾರಿಗಳು ಈ ಆದೇಶವನ್ನು ದುರುಪಯೋಗ ಪಡಿಸಿಕೊಂಡು, ಅವರು ಮಾಡುತ್ತಿರುವ ಭ್ರಷ್ಟಾಚಾರ ಕೆಲಸಗಳಿಗೆ ಘಟಕಗಳಲ್ಲಿ ವಿರೋಧ ವ್ಯಕ್ತಪಡಿಸುವ ಹಾಗೂ ಸಂಸ್ಥೆಯ ಕಾನೂನು ಮತ್ತು ನಿಯಮಗಳ ಅನುಸಾರವಾಗಿ ಕರ್ತವ್ಯ ನಿರ್ವಹಿಸುವ ನಿರ್ವಾಹಕರನ್ನು ಗುರಿಯಾಗಿಸಿ, ಘಟಕ ಮಟ್ಟದಿಂದ ಕೇಂದ್ರ ಕಚೇರಿಗೆ ಹೆಸರುಗಳನ್ನು ನೀಡಬಹುದು.
ಉದಾ: ಇತ್ತೀಚೆಗೆ ಒಂದು ಘಟಕದಲ್ಲಿ ಚಾಲನಾ ಸಿಬ್ಬಂದಿ ಮೇಲೆ ವೈಯಕ್ತಿಕ ದ್ವೇಷದ ಕಾರಣ ಅಧಿಕಾರಿಗಳೇ ಬಸ್ಸಿನ ಗೌಪ್ಯ ಸ್ಥಳದಲ್ಲಿ ಹಣವಿಟ್ಟು, ತನಿಖಾಧಿಕಾರಿಗಳಿಗೆ ಆ ಗೌಪ್ಯ ಸ್ಥಳದ ಮಾಹಿತಿ ನೀಡಿ, ಆ ಚಾಲನಾ ಸಿಬ್ಬಂದಿ ಮೇಲೆ ಕೇಸು ಬರೆದು, ಬಸ್ಸಿನ ಸಿ.ಸಿ ಕ್ಯಾಮರ ಪರಿಶೀಲಿಸಿದಾಗ ಸತ್ಯಾಂಶ ಹೊರಬಂದಿತ್ತು.
ಈಗ ಆ ಎಲ್ಲ ಆಧಿಕಾರಿಗಳು ಈ ಪ್ರಕರಣದಲ್ಲಿ ಸಿಕ್ಕಿ ಅವರ ವಿರುದ್ಧ ತನಿಖೆ ನಡೆಯುತ್ತಿದೆ ಹಾಗೂ 2021 ರ ಸಾರಿಗೆ ಮುಷ್ಕರದ ಸಮಯದಲ್ಲಿ ಸಹಾ ಇದೆ ರೀತಿ ಮುಷ್ಕರದಲ್ಲಿ ಭಾಗವಹಿಸದ ಎಷ್ಟೋ ಅಮಾಯಕ ಸಿಬ್ಬಂದಿಗಳನ್ನು ಕೆಲ ಆಧಿಕಾರಿಗಳು ತಮ್ಮ ವೈಯಕ್ತಿಕ ದ್ವೇಷದ ಕಾರಣ ಕೇಂದ್ರ ಕಚೇರಿಗೆ ಅವರ ಹೆಸರುಗಳನ್ನು ನೀಡಿ ಆಮಾನತು, ವರ್ಗಾವಣೆ ಮತ್ತು ವಜಾ ಆಗುವಂತೆ ಮಾಡಿದ್ದರು. ಇದನ್ನೂ ಓದಿ: BMTC- ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿಕೊಡಿ: ಜಾಗೃತಾಧಿಕಾರಿ
ಸಂಸ್ಥೆಯ ಎಲ್ಲ ಬಸ್ಸುಗಳಲ್ಲಿ ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದು, ಚಾಲನಾ ಸಿಬ್ಬಂದಿಗಳ ಪ್ರತಿಯೊಂದು ಚಲನವಲನಗಳನ್ನು ಗಮನಿಸುತ್ತಿದ್ದು, ಇತ್ತೀಚೆಗೆ ಸಂಸ್ಥೆಯಲ್ಲಿ ಬಳಸುತ್ತಿರುವ ಇಟಿಎಂ ಟಿಕೆಟ್ ಯಂತ್ರಗಳು ಜಿಪಿಎಸ್ ತಂತ್ರಾಂಶ ಒಳಗೊಂಡ ಅತ್ಯಾಧುನಿಕ ಯಂತ್ರಗಳಿದ್ದು, ಈ ಎರಡು ತಂತ್ರಾಂಶಗಳನ್ನು ಬಳಸಿಕೊಂಡು ಸಿಸಿ ಕ್ಯಾಮರಾದ ಮೂಲಕ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಮತ್ತು ಇಟಿಎಂ ಟಿಕೆಟ್ ಯಂತ್ರಗಳಲ್ಲಿ ನಿರ್ವಾಹಕರು ವಿತರಣೆ ಮಾಡಿರುವ ಟಿಕೆಟ್ಗಳನ್ನು ತಾಳೆ ಮಾಡಿ ಕೂತ ಜಾಗದಿಂದಲೇ ನೈಜವಾಗಿ ಯಾವ ನಿರ್ವಾಹಕರು ಆದಾಯ ಸೋರಿಕೆ ಮಾಡುತ್ತಿದ್ದಾರೆ ಎಂದು ಪರಿಶೀಲಿಸಬಹುದು.
ಅಲ್ಲದೆ ಇದರಿಂದ ತನಿಖೆ ಮಾಡಲು ತಾವುಗಳು ಸಂಸ್ಥೆ ವತಿಯಿಂದ ವಾರ್ಷಿಕವಾಗಿ ಖರ್ಚು ಮಾಡುತ್ತಿರುವ ಕೋಟ್ಯಂತರ ರೂಪಾಯಿಗಳನ್ನು ಉಳಿಸಬಹುದು. ಜತೆಗೆ ಎನ್ಐಎನ್ಸಿ ಪದ್ಧತಿ ಜಾರಿಗೆ ತರುವುದರಿಂದ ಪ್ರತಿಯೊಬ್ಬ ಪ್ರಯಾಣಿಕರಿಗೂ ತಾವೂ ಟಿಕೆಟ್ ಪಡೆದಿಲ್ಲವೆಂದರೆ ತಾವೇ ದಂಡ ಕಟ್ಟಬೇಕೆಂದು ಅರಿತಾಗ ನಿರ್ವಾಹಕರು ಟಿಕೆಟ್ ನೀಡಲಿಲ್ಲವೆಂದರೆ ಪ್ರಯಾಣಿಕರೆ ಟಿಕೆಟ್ ಕೇಳಿ ಪಡೆಯುತ್ತಾರೆ.
ಶಕ್ತಿ ಯೋಜನೆ ಜಾರಿಯಿಂದ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದೇ ಕಷ್ಟವಾಗಿರುವ ಈ ಸಂದರ್ಭದಲ್ಲಿ ಈ ರೀತಿಯ ಆದೇಶಗಳಿಂದ ತನಿಖಾಧಿಕಾರಿಗಳು ನಿರ್ವಾಹಕರನ್ನು ಸುಖಸುಮ್ಮನೆ ಶೋಷಣೆ ಮಾಡುವುದರಿಂದ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದು ಕಷ್ಟವಾಗುವ ಜೊತೆಗೆ ಅವರ ಮಾನಸಿಕ ಹಾಗೂ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುವ ಸಂಭವವಿದೆ. ಹೀಗಾಗಿ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಕೂಟದ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್ ಆಗ್ರಹಿಸಿದ್ದಾರೆ.
Related

You Might Also Like
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...