BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ ಆದ್ದರಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ತಾವು ಪ್ರತಿಭಾ ಪುರಸ್ಕಾರ ನೀಡುವುದಕ್ಕೆ ಮರು ಚಾಲನೆ ನೀಡಬೇಕು ಎಂದು ರಾಮಚಂದ್ರನ್ ಅವರಲ್ಲಿ ನೌಕರ ಶ್ರೀನಿವಾಸ್ ಮನವಿ ಮಾಡಿದ್ದಾರೆ.
ಈ ಸಂಬಂಧ BMTC ವಾಯುವ್ಯ ವಲಯ ಘಟಕ-22ರ ಸಂಚಾರ ನಿಯಂತ್ರಕ ಎನ್.ಶ್ರೀನಿವಾಸ ಎಂಡಿಗಳಿಗೆ ಪತ್ರ ಬರೆದಿದ್ದು ಅದರಲ್ಲಿ ವಿವರಿಸಿರುವಂತೆ ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ / ಕನ್ನಡ ರಾಜ್ಯೋತ್ಸವ ದಿನದಂದು ಸಂಸ್ಥೆಯ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ 10ನೇ ತರಗತಿಯಿಂದ ಪದವೀದರ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಸಂಸ್ಥೆಯು ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸಂಸ್ಥೆಯು ನೌಕರರ ಮಕ್ಕಳಿಗೆ ಈ ಪ್ರತಿಭಾ ಪುರಸ್ಕಾರ ನೀಡುವುದನ್ನು ನಿಲ್ಲಿಸಿದೆ.
ಈ ಹಿಂದೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಉಪೇಂದ್ರ ತ್ರಿಪಾಠಿಯವರ ಕಾಲದಿಂದ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು ಹಾಗೂ ಕನ್ನಡದ ಸಾಹಿತಿಗಳಿಗೆ ಸಂಸ್ಥೆಯ ವತಿಯಿಂದ “ನೃಪತುಂತ” ಪ್ರಶಸ್ತಿ ನೀಡುವ ಸಲುವಾಗಿ 2 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಈ ಹಣವನ್ನು ಬ್ಯಾಂಕ್ನಲ್ಲಿ ಕಾಯಂ ಠೇವಣಿಯಾಗಿ ಇಟ್ಟು ಅದರಿಂದ ಬರುತ್ತಿರುವ ಬಡ್ಡಿಯ ಹಣದಿಂದ ನೃಪತುಂಗ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿತ್ತು.
ಆದರೆ ಇತ್ತೀಚಿನ ವರ್ಷಗಳಲ್ಲಿ ಸಂಸ್ಥೆಯ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದನ್ನು ನಿಲ್ಲಿಸಲಾಗಿದೆ. ಸಂಸ್ಥೆಯು ತನ್ನ ಸಿಬ್ಬಂದಿಗಳ/ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ನೀಡದಷ್ಟು ಬಡವಾಗಿಲ್ಲ. ಸಂಸ್ಥೆಯು ಬೆಂಗಳೂರು ನಗರದ ಸುತ್ತಮುತ್ತ ಸಾವಿರಾರು ಎಕರೆ ಭೂಮಿ, ಕಟ್ಟಡಗಳು, ಡಿಪೋಗಳು, ಕಚೇರಿಗಳನ್ನು ಹೊಂದಿದೆ, ಸಂಸ್ಥೆಗೆ ಮಾಹೆಯಾನ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿದೆ.
ಆದುದರಿಂದ ಸಂಸ್ಥೆಯ ಅತ್ಯುನ್ನತ ಹುದ್ದೆಯಲ್ಲಿರುವ ತಾವು ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದನ್ನು ಮತ್ತೆ ನವೆಂಬರ್-2025ರಿಂದ ಪುನಾರಂರಭಿ ಸಂಸ್ಥೆಯ ಸಿಬ್ಬಂದಿಗಳ/ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಶ್ರಮವಹಿಸಿ ದುಡಿಯುತ್ತಿರುವ ಸಂಸ್ಥೆಯ ನೌಕರರ ಕುಟುಂಬಗಳನ್ನು ಹಾಗೂ ವಿದ್ಯಾರ್ಥಿಗಳನ್ನು ಗೌರವಿಸಬೇಕೆಂದು ತಮ್ಮಲ್ಲಿ ವಿನಮ್ರತೆಯಿಂದ ಕೋರುತ್ತೇನೆ ಎಂದು ಶ್ರೀನಿವಾಸ ಪತ್ರ ಬರೆದು ವಿನಂತಿಸಿದ್ದಾರೆ.
ಮಾರ್ಗ ಮಧ್ಯೆ ಕೆಟ್ಟು ಹೋಗುತ್ತಿರುವ ಇಟಿಎಂಗಳು: ಬಹುತೇಕ ಘಟಕಗಳಲ್ಲಿ ಸಂಸ್ಥೆಯ ಇಟಿಎಂ ಯಂತ್ರಗಳು ಸರಿಯಾಗಿ ಕೆಲಸ ಮಾಡದೆ ಮಾರ್ಗ ಮಧ್ಯೆ ಕೆಟ್ಟು ಹೋಗುತ್ತಿವೆ ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರಿಗೆ ನಿರೀಕ್ಷೆಯ ಮಟ್ಟದಲ್ಲಿ ಸೇವೆ ದೊರೆಯುತ್ತಿಲ್ಲ ಹಾಗೂ ಸಂಸ್ಥೆಯ ದೈನಂದಿನ ಸಾರಿಗೆ ಆದಾಯ ಗಣನೀಯವಾಗಿ ಇಳಿಕೆಯಾಗಲು ಕಾರಣವಾಗಿದೆ.

ಇಟಿಎಂ ಯಂತ್ರಗಳನ್ನು ಬದಲಾಯಿಸಿಕೊಳ್ಳಲು / ಬ್ಯಾಟರಿ ಬದಲಾಯಿಸಿಕೊಳ್ಳಲು ನಿರ್ವಾಹಕರು ಸುತ್ತುಗಳನ್ನು ಮೊಟಕುಗೊಳಿಸಿ ಘಟಕಕ್ಕೆ ಬರುತ್ತಿರುವುದರಿಂದ ಸುತ್ತುಗಳು ರದ್ದಾಗುವುದಲ್ಲದೆ ಸಾರಿಗೆ ಆದಾಯ ಸಹ ಕುಂಠಿತವಾಗುತ್ತಿದೆ. ಹೀಗಾಗಿ ತಾವು ಗುಣ ಮಟ್ಟದ ಇಟಿಎಂ ಯಂತ್ರಗಳನ್ನು ಸಂಸ್ಥೆಗೆ ಖರೀದಿ ಮಾಡಿ ನಿರ್ವಾಹಕರಿಗೆ ಆಗುತ್ತಿರುವ ತೊಂದರೆ, ಪ್ರಯಾಣಿಕರಿಗೆ ಸೇವೆಯಲ್ಲಿ ವ್ಯತ್ಯಯ ಸಂಸ್ಥೆಯ ಸಾರಿಗೆ ಆದಾಯಕ್ಕೆ ಧಕ್ಕೆ ಉಂಟಾಗುತ್ತಿದೆ ಆದ್ದರಿಂದ ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. Letter to Managing Director, BMTC-Prathibha Puraskara
Related


You Might Also Like
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...
ಜಿಬಿಎ: ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಐದು ನಗರ ಪಾಲಿಕೆಗಳ ಆಯುಕ್ತರು
ಬೆಂಗಳೂರು: ಐದು ನಗರ ಪಾಲಿಕೆಗಳ ಆಯುಕ್ತರಿಂದ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಇತ್ತ ಕೇಂದ್ರ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಭೆ...