BMTC: ಮುಷ್ಕರ ವೇಳೆ ವಜಾಗೊಂಡ ಬಳಿಕ ಮರಳಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರಿಗೆ ವರ್ಗಾವಣೆ ಭಾಗ್ಯ

ಬೆಂಗಳೂರು: 2021ರ ಮುಷ್ಕರ ಅವಧಿಯಲ್ಲಿ ವಜಾಗೊಂಡು ನ್ಯಾಯಾಲಯದ ಆದೇಶದನ್ವಯ “ಮಧ್ಯಂತರ ಆದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರಿಗೆ ಒಂದು ಬಾರಿ ವರ್ಗಾವಣೆಗೊಳಿಸುವ ಅವಕಾಶ ನೀಡಿದ್ದು ಇದೇ ಜೂನ್ 9ರಿಂದ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 2021ರ ಮುಷ್ಕರ ಅವಧಿಯಲ್ಲಿ ವಜಾಗೊಂಡು ಮಾನ್ಯ ನ್ಯಾಯಾಲಯದ ಆದೇಶದಂತೆ “ಮಧ್ಯಂತರ ಆದೇಶ”ದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸಿಬ್ಬಂದಿಗಳಿಗೆ ಒಂದು ಬಾರಿ ಅವಕಾಶ ನೀಡಿ ವರ್ಗಾವಣೆಗೊಳಿಸುವ ಸಂಬಂಧ ಖಾಲಿ ಸ್ಥಾನಗಳ ಲಭ್ಯತೆ ಹಾಗೂ ಸಂಸ್ಥೆಯ ಅವಶ್ಯಕತೆಗನುಗುಣವಾಗಿ ಪಾರದರ್ಶಕವಾಗಿ ಆನ್-ಲೈನ್ ಮೂಲಕ ವರ್ಗಾವಣೆಗೊಳಿಸುವ ಸಂಬಂಧ ಈ ಕೆಳಕಂಡ ಮಾರ್ಗಸೂಚಿಗಳನ್ನು ನೀಡಲಾಗಿದೆ.
I. ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸಿಬ್ಬಂದಿಗಳು ಮಾತ್ರ. ವರ್ಗಾವಣೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 2. ಪ್ರಸ್ತುತ ಕಾರ್ಯ ಸ್ಥಳದಲ್ಲಿ ವರದಿ ಮಾಡಿಕೊಂಡ ದಿನಾಂಕದಿಂದ ಕನಿಷ್ಠ 01 ವರ್ಷ ಸೇವೆ ಸಲ್ಲಿಸಿರಬೇಕು. 3. ಒಂದು ವರ್ಷದ ಅವಧಿಯಲ್ಲಿ ಕನಿಷ್ಠ 200 ದಿನಗಳ ವಾಸ್ತವಿಕ ಹಾಜರಾತಿ ಹೊಂದಿರಬೇಕು.
4. ಒಂದು ವರ್ಷದ ಅವದಿಯಲ್ಲಿ ಆರ್.ಎಂ.ಸಿ(RMC)/ఓ.ಆರ್.ಎಂ.ಸಿ(ORMC)/ ಇತರೆ ಗಂಭೀರ. ಅಪರಾದ ಪ್ರಕರಕಣಗಳಲ್ಲಿ ಭಾಗಿಯಾಗಿರಬಾರದು 5. ಸದರಿ ಅವಧಿಯಲ್ಲಿ ಯಾವುದೇ ಮಾರಣಾಂತಿಕ ಅಪಘಾತಗಳನ್ನು ಎಸಗಿರಬಾರದು. 6. ನಿಯಮ-23ರಡಿ ಆರೋಪಣಾ ಪತ್ರ ಜಾರಿಯಾಗಿದ್ದಲ್ಲಿ/ಕ್ರಿಮಿನಲ್ ಪ್ರಕರಣ ಎದರಿಸುತ್ತಿರುವ/ ಭಾಗಿಯಾಗಿರುವ ನೌಕರರು ಅರ್ಹರಿರುವುದಿಲ್ಲ.
II. ಸಾಮಾನ್ಯ ಮಾರ್ಗಸೂಚಿಗಳು: 1. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು “https://ems.mybmtc.com/BMTC/login.php” ಲಿಂಕ್ನ್ನು ಬಳಿಸಿಕೊಂಡು ತಮ್ಮ ಇಎಂಎಸ್ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಮೂಲಕ ಲಾಗಿನ್ ಆಗುವುದು. 2. ವರ್ಗಾವಣೆ ಅರ್ಜಿ ಸಲ್ಲಿಸಲು 9-06-2025 ರಿಂದ 19-06-2025ರ 17 ಗಂಟೆಯವರೆಗೆ ತಂತ್ರಾಂಶವು ತೆರೆದಿದ್ದು, ತಂತ್ರಾಂಶದಲ್ಲಿ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
3. ಲಾಗಿನ್ ಆದ ನಂತರ “ಮಧ್ಯಂತರ ಆದೇಶದಲ್ಲಿನ ಸಿಬ್ಬಂದಿಗಳ ವರ್ಗಾವಣೆ ಅರ್ಜಿ” ಎಂಬ ಲಿಂಕ್ನ್ನು ಬಳಿಸಿಕೊಂಡು ಮಂಜೂರಾತಿಯಿರುವ ಎಲ್ಲ ಕಾರ್ಯಸ್ಥಳಗಳನ್ನು ಆದ್ಯತೆಯನ್ವಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 4. ಸಂಬಂಧಿಸಿದ ನೌಕರರು ವರ್ಗಾವಣೆ ಅರ್ಜಿ ಸಲ್ಲಿಸುವಾಗ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಘಟಕ ಹೊರತುಪಡಿಸಿ ಈ ಹಿಂದಿನ ವಲಯದಲ್ಲಿನ ಇಚ್ಚೆಯುಳ್ಳ ಮೂರು ಘಟಕಗಳ ಆದ್ಯತೆಗಳನ್ನು ನಮೂದಿಸುವುದು.
ಒಂದು ವೇಳೆ ನೌಕರರು ಒಂದೇ ಸ್ಥಳಕ್ಕೆ ವರ್ಗಾವಣೆ ಬಯಸಿದ್ದಲ್ಲಿ ಒಂದೇ ಸ್ಥಳವನ್ನು ಮೂರು ಆದ್ಯತೆಗಳ ಕಾಲಂಗಳಲ್ಲಿಯು ನಮೂದಿಸತಕ್ಕದ್ದು. (ವರ್ಗಾವಣೆ ಸ್ಥಳಗಳನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕ ನಿರ್ವಹಿಸುತ್ತಿರುವುದರಿಂದ ಉದ್ಧವಿಸಬಹುದಾದ ಖಾಲಿ ಸ್ಥಾನಗಳನ್ನು ಪರಿಗಣಿಸುವುದರಿಂದ ಮೂರು ಆದ್ಯತೆಗಳನ್ನು ಕಡ್ಡಾಯಗೊಳಿಸಿದೆ.)
5. ಒಮ್ಮೆ ವರ್ಗಾವಣೆ ಅರ್ಜಿಯಲ್ಲಿ ಆಧ್ಯತಾ ಕಾರ್ಯ ಸ್ಥಳಗಳನ್ನು ಆಯ್ಕೆ ಮಾಡಿಕೊಂಡ ನಂತರ ಯಾವುದೇ ಹಂತದಲ್ಲೂ ಬದಲಾವಣೆ ಅಥವಾ ಹಿಂಪಡೆಯಲು ಅವಕಾಶವಿರುವುದಿಲ್ಲ. 6. ಮಧ್ಯಂತರ ಆದೇಶದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ವರ್ಗಾವಣೆ ಅರ್ಜಿ ಸಲ್ಲಿಸಲು ವಿಫಲರಾದಲ್ಲಿ ವರ್ಗಾವಣೆಯ ಅವಕಾಶವನ್ನು ಕಳೆದುಕೊಳ್ಳುವರು. 7. ಮಧ್ಯಂತರ ಆದೇಶದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರ ಆಯಾ ಹುದ್ದೆಯ ಪರೀಕ್ಷಾಣಾರ್ಥಿ ದಿನಾಂಕ ಮತ್ತು ಪದೋನ್ನತಿ ಹೊಂದಿದ ದಿನಾಂಕದ ಆಧಾರದ ಮೇರೆಗೆ ಸೇವಾ ಜೇಷ್ಠತೆಯನ್ನು ಪರಿಗಣಿಸಲಾಗುವುದು.
8. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ನಂತರ ವರ್ಗಾವಣೆ ಅರ್ಜಿಯನ್ನು ಮುದ್ರಿಸಿಕೊಂಡು ಸಹಿ ಮಾಡಿ ಸಂಬಂಧಪಟ್ಟ ಘಟಕ/ಕಛೇರಿಯ ಆಡಳಿತ ಶಾಖೆಯಲ್ಲಿ 20-06-2025ರೊಳಗಾಗಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯುವುದು. 9. ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾನದಂಡಗಳನ್ನು ಹಾಗೂ ಅರ್ಜಿ
ಸಲ್ಲಿಸುವ ವಿಧಾನವನ್ನು ಮನವರಿಕೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ವರ್ಗಾವಣೆ ಅರ್ಜಿಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಲು ಅವಕಾಶವಿರುವುದಿಲ್ಲ.
III. ಕರ್ತವ್ಯ ಮತ್ತು ಜವಾಬ್ದಾರಿಗಳು: 1) ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು: ಹುದ್ದೆವಾರು ಸಮಾಲೋಚನೆಗೆ ಒಳಪಡುವ ಸಿಬ್ಬಂದಿಗಳ ಪಟ್ಟಿಯನ್ನು ಆಡಳಿತ ಇಲಾಖೆಯಿಂದ ಘಟಕಗಳಿಗೆ ನೀಡುವುದು.
ಸಿಬ್ಬಂದಿಗಳು ವರ್ಗಾವಣೆಗಾಗಿ ಅರ್ಜಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಿ, ಸ್ವೀಕೃತಿಯನ್ನು ನೀಡುವುದು. ಘಟಕ ವ್ಯವಸ್ಥಾಪಕರು ತಮ್ಮ ಅಧೀನದಲ್ಲಿ ಕಾರ್ಯ ನಿರ್ವಹಿಸತ್ತಿರುವ ಸಿಬ್ಬಂದಿ ಅಧೀಕ್ಷಕ/ ಮೇಲ್ವಿಚಾರಕರಿಂದ ಸದರಿ ಅರ್ಜಿಗಳಲ್ಲಿರುವ ಸೇವಾ ವಿವರವನ್ನು ಹಾಗೂ ನಿಗದಿಪಡಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪರಿಶೀಲಿಸಿ ತಮಗೆ ಒದಗಿಸಿರುವ ಲಾಗ್-ಇನ್ನಲ್ಲಿ ಸಂಬಂಧಪಟ್ಟ ನೌಕರರ ಸೇವಾಪುಸ್ತಕದೊಂದಿಗೆ ಪರಿಶೀಲಿಸಿ ಗಣಕ ಯಂತ್ರದಲ್ಲಿ ಕಡ್ಡಾಯವಾಗಿ ದೃಢೀಕರಿಸುವುದು. ಘಟಕ ವ್ಯವಸ್ಥಾಪಕರು ನೌಕರರು ವರ್ಗಾವಣೆಗಾಗಿ ಸಲ್ಲಿಸಿರುವ ಆದ್ಯತಾ ಪಟ್ಟಿಯನ್ನು ಕೇಂದ್ರ ಕಚೇರಿಯ ಸಿಬ್ಬಂದಿ ಶಾಖೆಗೆ 21-06-2025ರೊಳಗಾಗಿ ಸಲ್ಲಿಸಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...