BMTC: ಮುಷ್ಕರ ವೇಳೆ ವಜಾಗೊಂಡ ಬಳಿಕ ಮರಳಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರಿಗೆ ವರ್ಗಾವಣೆ ಭಾಗ್ಯ

ಬೆಂಗಳೂರು: 2021ರ ಮುಷ್ಕರ ಅವಧಿಯಲ್ಲಿ ವಜಾಗೊಂಡು ನ್ಯಾಯಾಲಯದ ಆದೇಶದನ್ವಯ “ಮಧ್ಯಂತರ ಆದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರಿಗೆ ಒಂದು ಬಾರಿ ವರ್ಗಾವಣೆಗೊಳಿಸುವ ಅವಕಾಶ ನೀಡಿದ್ದು ಇದೇ ಜೂನ್ 9ರಿಂದ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 2021ರ ಮುಷ್ಕರ ಅವಧಿಯಲ್ಲಿ ವಜಾಗೊಂಡು ಮಾನ್ಯ ನ್ಯಾಯಾಲಯದ ಆದೇಶದಂತೆ “ಮಧ್ಯಂತರ ಆದೇಶ”ದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸಿಬ್ಬಂದಿಗಳಿಗೆ ಒಂದು ಬಾರಿ ಅವಕಾಶ ನೀಡಿ ವರ್ಗಾವಣೆಗೊಳಿಸುವ ಸಂಬಂಧ ಖಾಲಿ ಸ್ಥಾನಗಳ ಲಭ್ಯತೆ ಹಾಗೂ ಸಂಸ್ಥೆಯ ಅವಶ್ಯಕತೆಗನುಗುಣವಾಗಿ ಪಾರದರ್ಶಕವಾಗಿ ಆನ್-ಲೈನ್ ಮೂಲಕ ವರ್ಗಾವಣೆಗೊಳಿಸುವ ಸಂಬಂಧ ಈ ಕೆಳಕಂಡ ಮಾರ್ಗಸೂಚಿಗಳನ್ನು ನೀಡಲಾಗಿದೆ.
I. ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸಿಬ್ಬಂದಿಗಳು ಮಾತ್ರ. ವರ್ಗಾವಣೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 2. ಪ್ರಸ್ತುತ ಕಾರ್ಯ ಸ್ಥಳದಲ್ಲಿ ವರದಿ ಮಾಡಿಕೊಂಡ ದಿನಾಂಕದಿಂದ ಕನಿಷ್ಠ 01 ವರ್ಷ ಸೇವೆ ಸಲ್ಲಿಸಿರಬೇಕು. 3. ಒಂದು ವರ್ಷದ ಅವಧಿಯಲ್ಲಿ ಕನಿಷ್ಠ 200 ದಿನಗಳ ವಾಸ್ತವಿಕ ಹಾಜರಾತಿ ಹೊಂದಿರಬೇಕು.
4. ಒಂದು ವರ್ಷದ ಅವದಿಯಲ್ಲಿ ಆರ್.ಎಂ.ಸಿ(RMC)/ఓ.ಆರ್.ಎಂ.ಸಿ(ORMC)/ ಇತರೆ ಗಂಭೀರ. ಅಪರಾದ ಪ್ರಕರಕಣಗಳಲ್ಲಿ ಭಾಗಿಯಾಗಿರಬಾರದು 5. ಸದರಿ ಅವಧಿಯಲ್ಲಿ ಯಾವುದೇ ಮಾರಣಾಂತಿಕ ಅಪಘಾತಗಳನ್ನು ಎಸಗಿರಬಾರದು. 6. ನಿಯಮ-23ರಡಿ ಆರೋಪಣಾ ಪತ್ರ ಜಾರಿಯಾಗಿದ್ದಲ್ಲಿ/ಕ್ರಿಮಿನಲ್ ಪ್ರಕರಣ ಎದರಿಸುತ್ತಿರುವ/ ಭಾಗಿಯಾಗಿರುವ ನೌಕರರು ಅರ್ಹರಿರುವುದಿಲ್ಲ.
II. ಸಾಮಾನ್ಯ ಮಾರ್ಗಸೂಚಿಗಳು: 1. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು “https://ems.mybmtc.com/BMTC/login.php” ಲಿಂಕ್ನ್ನು ಬಳಿಸಿಕೊಂಡು ತಮ್ಮ ಇಎಂಎಸ್ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಮೂಲಕ ಲಾಗಿನ್ ಆಗುವುದು. 2. ವರ್ಗಾವಣೆ ಅರ್ಜಿ ಸಲ್ಲಿಸಲು 9-06-2025 ರಿಂದ 19-06-2025ರ 17 ಗಂಟೆಯವರೆಗೆ ತಂತ್ರಾಂಶವು ತೆರೆದಿದ್ದು, ತಂತ್ರಾಂಶದಲ್ಲಿ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
3. ಲಾಗಿನ್ ಆದ ನಂತರ “ಮಧ್ಯಂತರ ಆದೇಶದಲ್ಲಿನ ಸಿಬ್ಬಂದಿಗಳ ವರ್ಗಾವಣೆ ಅರ್ಜಿ” ಎಂಬ ಲಿಂಕ್ನ್ನು ಬಳಿಸಿಕೊಂಡು ಮಂಜೂರಾತಿಯಿರುವ ಎಲ್ಲ ಕಾರ್ಯಸ್ಥಳಗಳನ್ನು ಆದ್ಯತೆಯನ್ವಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 4. ಸಂಬಂಧಿಸಿದ ನೌಕರರು ವರ್ಗಾವಣೆ ಅರ್ಜಿ ಸಲ್ಲಿಸುವಾಗ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಘಟಕ ಹೊರತುಪಡಿಸಿ ಈ ಹಿಂದಿನ ವಲಯದಲ್ಲಿನ ಇಚ್ಚೆಯುಳ್ಳ ಮೂರು ಘಟಕಗಳ ಆದ್ಯತೆಗಳನ್ನು ನಮೂದಿಸುವುದು.
ಒಂದು ವೇಳೆ ನೌಕರರು ಒಂದೇ ಸ್ಥಳಕ್ಕೆ ವರ್ಗಾವಣೆ ಬಯಸಿದ್ದಲ್ಲಿ ಒಂದೇ ಸ್ಥಳವನ್ನು ಮೂರು ಆದ್ಯತೆಗಳ ಕಾಲಂಗಳಲ್ಲಿಯು ನಮೂದಿಸತಕ್ಕದ್ದು. (ವರ್ಗಾವಣೆ ಸ್ಥಳಗಳನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕ ನಿರ್ವಹಿಸುತ್ತಿರುವುದರಿಂದ ಉದ್ಧವಿಸಬಹುದಾದ ಖಾಲಿ ಸ್ಥಾನಗಳನ್ನು ಪರಿಗಣಿಸುವುದರಿಂದ ಮೂರು ಆದ್ಯತೆಗಳನ್ನು ಕಡ್ಡಾಯಗೊಳಿಸಿದೆ.)
5. ಒಮ್ಮೆ ವರ್ಗಾವಣೆ ಅರ್ಜಿಯಲ್ಲಿ ಆಧ್ಯತಾ ಕಾರ್ಯ ಸ್ಥಳಗಳನ್ನು ಆಯ್ಕೆ ಮಾಡಿಕೊಂಡ ನಂತರ ಯಾವುದೇ ಹಂತದಲ್ಲೂ ಬದಲಾವಣೆ ಅಥವಾ ಹಿಂಪಡೆಯಲು ಅವಕಾಶವಿರುವುದಿಲ್ಲ. 6. ಮಧ್ಯಂತರ ಆದೇಶದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ವರ್ಗಾವಣೆ ಅರ್ಜಿ ಸಲ್ಲಿಸಲು ವಿಫಲರಾದಲ್ಲಿ ವರ್ಗಾವಣೆಯ ಅವಕಾಶವನ್ನು ಕಳೆದುಕೊಳ್ಳುವರು. 7. ಮಧ್ಯಂತರ ಆದೇಶದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರ ಆಯಾ ಹುದ್ದೆಯ ಪರೀಕ್ಷಾಣಾರ್ಥಿ ದಿನಾಂಕ ಮತ್ತು ಪದೋನ್ನತಿ ಹೊಂದಿದ ದಿನಾಂಕದ ಆಧಾರದ ಮೇರೆಗೆ ಸೇವಾ ಜೇಷ್ಠತೆಯನ್ನು ಪರಿಗಣಿಸಲಾಗುವುದು.
8. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ನಂತರ ವರ್ಗಾವಣೆ ಅರ್ಜಿಯನ್ನು ಮುದ್ರಿಸಿಕೊಂಡು ಸಹಿ ಮಾಡಿ ಸಂಬಂಧಪಟ್ಟ ಘಟಕ/ಕಛೇರಿಯ ಆಡಳಿತ ಶಾಖೆಯಲ್ಲಿ 20-06-2025ರೊಳಗಾಗಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯುವುದು. 9. ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾನದಂಡಗಳನ್ನು ಹಾಗೂ ಅರ್ಜಿ
ಸಲ್ಲಿಸುವ ವಿಧಾನವನ್ನು ಮನವರಿಕೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ವರ್ಗಾವಣೆ ಅರ್ಜಿಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಲು ಅವಕಾಶವಿರುವುದಿಲ್ಲ.
III. ಕರ್ತವ್ಯ ಮತ್ತು ಜವಾಬ್ದಾರಿಗಳು: 1) ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು: ಹುದ್ದೆವಾರು ಸಮಾಲೋಚನೆಗೆ ಒಳಪಡುವ ಸಿಬ್ಬಂದಿಗಳ ಪಟ್ಟಿಯನ್ನು ಆಡಳಿತ ಇಲಾಖೆಯಿಂದ ಘಟಕಗಳಿಗೆ ನೀಡುವುದು.
ಸಿಬ್ಬಂದಿಗಳು ವರ್ಗಾವಣೆಗಾಗಿ ಅರ್ಜಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಿ, ಸ್ವೀಕೃತಿಯನ್ನು ನೀಡುವುದು. ಘಟಕ ವ್ಯವಸ್ಥಾಪಕರು ತಮ್ಮ ಅಧೀನದಲ್ಲಿ ಕಾರ್ಯ ನಿರ್ವಹಿಸತ್ತಿರುವ ಸಿಬ್ಬಂದಿ ಅಧೀಕ್ಷಕ/ ಮೇಲ್ವಿಚಾರಕರಿಂದ ಸದರಿ ಅರ್ಜಿಗಳಲ್ಲಿರುವ ಸೇವಾ ವಿವರವನ್ನು ಹಾಗೂ ನಿಗದಿಪಡಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪರಿಶೀಲಿಸಿ ತಮಗೆ ಒದಗಿಸಿರುವ ಲಾಗ್-ಇನ್ನಲ್ಲಿ ಸಂಬಂಧಪಟ್ಟ ನೌಕರರ ಸೇವಾಪುಸ್ತಕದೊಂದಿಗೆ ಪರಿಶೀಲಿಸಿ ಗಣಕ ಯಂತ್ರದಲ್ಲಿ ಕಡ್ಡಾಯವಾಗಿ ದೃಢೀಕರಿಸುವುದು. ಘಟಕ ವ್ಯವಸ್ಥಾಪಕರು ನೌಕರರು ವರ್ಗಾವಣೆಗಾಗಿ ಸಲ್ಲಿಸಿರುವ ಆದ್ಯತಾ ಪಟ್ಟಿಯನ್ನು ಕೇಂದ್ರ ಕಚೇರಿಯ ಸಿಬ್ಬಂದಿ ಶಾಖೆಗೆ 21-06-2025ರೊಳಗಾಗಿ ಸಲ್ಲಿಸಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...