NEWSನಮ್ಮಜಿಲ್ಲೆನಮ್ಮರಾಜ್ಯ

BMTC ಚಾಲಕನ ಪುತ್ರಿಯ ಚಿನ್ನದ ಸಾಧನೆ: ಹಾಡಿ ಹೊಗಳಿ ಸನ್ಮಾನಿಸಿದ ಸಂಸ್ಥೆಯ ಎಂಡಿ ಸತ್ಯವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕರೊಬ್ಬರ ಪುತ್ರಿ M.Scಯಲ್ಲಿ ಐದು ಚಿನ್ನದ ಪದಕವನ್ನು ತನ್ನ ಕೊರಳಿಗೆ ಏರಿಸಿಕೊಂಡಿದ್ದಾರೆ.

ಬಿಎಂಟಿಸಿ ದಕ್ಷಿಣ ವಲಯ ಘಟಕ -3ರ ಚಾಲಕ ಉಮೇಶ್‌ (ಬಿಲ್ಲೆ‌ ಸಂಖ್ಯೆ 12217) ಅವರ ಪುತ್ರಿ ರೋಹಿಣಿ ಎಂಬುವರೆ ಎಂ.ಎಸ್ಸಿ ಪರಿಸರ ವಿಜ್ಞಾನ ವಿಭಾಗದಲ್ಲಿ 5 ಚಿನ್ನದ ಪದಕಗಳನ್ನು ಪಡೆದವರು.

ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಅವರು ಶಾಂತಿನಗರದಲ್ಲಿರುವ ತಮ್ಮ ಕೇಂದ್ರ ಕಚೇರಿಗೆ ಕರೆಸಿಕೊಂಡು ಆಕೆಯನ್ನು ಸನ್ಮಾನಿಸಿದ್ದಾರೆ. ಅಲ್ಲದೆ ಅವರ ಸಾಧನೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಸಂಸ್ಥೆಯ ವತಿಯಿಂದ 5ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದ್ದಾರೆ.

ಈ ವೇಳೆ ಮಾತನಾಡಿರುವ ಸತ್ಯವತಿ ಅವರು, ಇಂದಿನ ಮಕ್ಕಳೆ‌ ನಮ್ಮ ಮುಂದಿನ ಉತ್ತಮ ಪ್ರಜೆಗಳು. ನಮ್ಮ ಸಂಸ್ಥೆಯ ಚಾಲಕ ಉಮೇಶ್‌ ಅವರ ಪುತ್ರಿ ರೋಹಿಣಿ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ತನ್ನ ಗಣನೀಯ ಸಾಧನೆ ಹಾಗೂ ಪರಿಶ್ರಮಕ್ಕೆ 5 ಚಿನ್ನದ ಪದಕಗಳನ್ನು ಪಡೆದು ಚಿನ್ನದ ಹುಡುಗಿ ಎನಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಇನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಓದುತ್ತಿದ್ದ ರೋಹಿಣಿ ತನ್ನ ಪರಿಶ್ರಮ ಹಾಗೂ ಪಾಲಕರು ನೀಡಿದ ಬೆಂಬಲ ಪ್ರೋತ್ಸಾಹದಿಂದಾಗಿ ಈ 5 ಚಿನ್ನದ ಪದಕ ಪಡೆಯಲು ಸಾಧ್ಯವಾಯಿತು. ಇವರಂತೆ ತಮ್ಮ ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವತ್ತ ಪ್ರತಿಯೊಬ್ಬ ನೌಕರರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ತಮಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಮಗಳ ಶೈಕ್ಷಣಿಕ ಭವಿಷ್ಯದ ಏಳ್ಗೆಗೆ ಶ್ರಮಿಸಿದ ನಮ್ಮೆಲ್ಲ ಕುಟುಂಬದವರ ತ್ಯಾಗದ ಫಲವಾಗಿ ಮಗಳು ಎಲ್ಲರೂ ಹೆಮ್ಮೆ ಪಡುವಂತ ಸಾಧನೆ ಮಾಡಿದ್ದಾಳೆ ಎಂದು ತಂದೆ ಉಮೇಶ್‌  ಖುಷಿಯನ್ನು ಹಂಚಿಕೊಂಡರು.

ಇನ್ನು ತಮ್ಮ ಮಗಳು ಮಾಡಿರುವ ಸಾಧನೆಯನ್ನು ನಮ್ಮೆದುರಲ್ಲೇ ಸಂಸ್ಥೆಯ ಉನ್ನತ ಅಧಿಕಾರಿಗಳು ಹಾಡಿ ಹೊಗಳಿದ್ದು, ಈ ಕ್ಷಣವನ್ನು ನಾನು ಮತ್ತು ನಮ್ಮ ಕುಟುಂಬ ಎಂದಿಗೂ ಮರೆಯುವುದಿಲ್ಲ ಎಂದ ಉಮೇಶ್‌ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸನ್ಮಾನಿಸಿ 5 ಸಾವಿರ ರೂ. ನಗದು ಬಹುಮಾನ ನೀಡಿರುವುದು ಮಗಳ ಸಾಧನೆಗೆ ಸಿಕ್ಕ ಸನ್ಮಾನ ಎಂದು ಆನಂದಭಾಷ್ಪ ಸುರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು