CrimeNEWSನಮ್ಮಜಿಲ್ಲೆ

BMTC ಚಾಲಕನ ಮೇಲೆ ಕುಮಾರಸ್ವಾಮಿ ಲೇಔಟ್‌ನಲ್ಲಿ ಮಚ್ಚಿನಿಂದ ಹಲ್ಲೆ: ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ ಅದರಲ್ಲೂ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ನೌಕರರು ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಬಂದಿದೆ.

ಹೌದು! ತಡರಾತ್ರಿ ಅಂದರೆ ಏ.5ರ ರಾತ್ರಿ 12.30ರ ಸುಮಾರಿಗೆ ಕುಮಾರಸ್ವಾಮಿ ಬಡಾವಣೆಯ ಇ ಬಸ್‌ ನಿಲ್ದಾಣಕ್ಕೆ ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳಲ್ಲಿ ಇಬ್ಬರು ನಿಗಮದ ಬಸ್‌ ಚಾಲಕನ ಮೇಲೆ ಮಚ್ಚಿನಿಂದ ಮತ್ತು ಕೈಯಿಂದ ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದ್ದಾರೆ.

ಬಿಎಂಟಿಸಿ ಬನಶಂಕರಿ ಘಟಕ – 20ರ ಚಾಲಕ ನಾಗೇಂದ್ರ ಎಂಬುವರೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೊಳಗಾದವರಾಗಿದ್ದಾರೆ. ಇನ್ನು ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಇಂದು (ಏ.5) ಮಧ್ಯಾಹ್ನ ದೂರು ನೀಡಿದ್ದು ಹಲ್ಲೆಕೋರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ದೂರಿನಲ್ಲೇನಿದೆ?: ನಾಗೇಂದ್ರ ಆದ ನಾನು ಸುಮಾರು 30 ವರ್ಷಗಳಿಂದ ಬಿಎಂಟಿಸಿಯಲ್ಲಿ ಚಾಲಕನಾಗಿದ್ದು, ಎಂದಿನಂತೆ ಏ.4ರ ಮಧ್ಯಾಹ್ನ 2ಗಂಟೆಯಿಂದ ಏ.5ರ ಮಧ್ಯಾಹ್ನ 2ಗಂಟೆಯವರೆಗೆ ಮಾರ್ಗ ಸಂಖ್ಯೆ 15E/2ರಲ್ಲಿ ವಾಹನ ಸಂಖ್ಯೆ ಕೆಎ-57- ಎಫ್-2683 ರಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೆ.

ನನ್ನ ಜತೆ ನಿರ್ವಾಹಕರಾಗಿ ಮಹೇಶ್‌ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಏ.5ರ ತಡರಾತ್ರಿ 12.30ರ ಸುಮಾರಿಗೆ 15 ಇ ಬಸ್ ನಿಲ್ದಾಣದಲ್ಲಿ ಅಂದಿನ ಕತ್ಯವ ಮುಗಿಸಿ ತಂಗಿದ್ದಾಗ, ಬಸ್‌ ನಿಲ್ದಾಣದಕ್ಕೆ ಬಂದ 4 ಜನ ಅಪರಿಚಿತರು ನಿಲ್ದಾಣದಲ್ಲಿ ಜೋರಾಗಿ ಕೂಗಾಡುತ್ತಿದ್ದರು. ಆ ವೇಳೆ ನಾನು ಬಸ್‌ನಲ್ಲಿಯೇ ಕುಳಿತುಕೊಂಡು ಅವರಿಗೆ ಇಲ್ಲಿ ಕೂಗಾಡಬೇಡಿ ಹೋಗಿ ಎಂದು ಹೇಳಿದೆ. ಆ ವೇಳೆ ಅವರಲ್ಲಿ ಒಬ್ಬ ಆಸಾಮಿ ನಾವು ಏನಾದರೂ ಮಾಡುತ್ತೇವೆ ನಿನಗೆ ಯಾಕಲೆ ಎಂದು ಅವಾಚ್ಯವಾಗಿ ನಿಂದಿಸಿದ.

ಆಗ ನಾನು ಹಾಗೂ ಮಹೇಶ್ ಅವರು ಬಸ್‌ನಿಂದ ಕೆಳಗಡೆ ಇಳಿದು ಯಾಕಪ್ಪ ಆ ರೀತಿ ಬೈಯುತ್ತೀಯ ಎಂದು ಕೇಳಿದು ಹೋದೆವು. ಆಗ ನಮಗೆ ಬೈಯುತ್ತಿದ್ದ ಆಸಾಮಿಯು ಕೈಗಳಿಂದ ನನ್ನ ಮುಖಕ್ಕೆ ಹಾಗೂ ಕುತ್ತಿಗೆಗೆ ಹೊಡೆದ. ನಂತರ ಆತನ ಪಕ್ಕದಲ್ಲಿದ್ದ ಇನ್ನೊಬ್ಬ ಆಸಾಮಿಯು ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಇವನನ್ನು ಸುಮ್ಮನೆ ಬಿಡಬಾರದು ಎಂದು ಬೈಯುತ್ತಾ ಬಂದು ಮಚ್ಚಿನಿಂದ ನನ್ನ ತಲೆಗೆ ಹೊಡೆದ.

ಆಗ ನಾನು ಅದನ್ನು ತಡೆಯಲು ಎಡಗೈಯನ್ನು ಅಡ್ಡ ಇಟ್ಟಾಗ ನನ್ನ ಎಡಗೈನ ಹೆಬ್ಬೆರಳಿಗೆ ಗಾಯವಾಯಿತು. ನಂತರ ಮತ್ತೆ ನನಗೆ ಮಚ್ಚಿನಿಂದ ಹೊಡೆದಾಗ ನನ್ನ ತಲೆಗೆ ಹಾಗೂ ಕಣ್ಣಿನ ಕೆಳಭಾಗದಲ್ಲಿ ತೀವ್ರತರವಾದ ರಕ್ತಗಾಯವಾಗಿದೆ. ಮತ್ತೇ ನನಗೆ ಮಚ್ಚಿನಿಂದ ಹೊಡೆಯಲು ಬಂದಿದ್ದು, ನಾವಿಬ್ಬರು ಅಲ್ಲಿಂದ ಓಡಿ ಹೋದೆವು. ಆ ಗಲಾಟೆಯಲ್ಲಿ ತನ್ನ ಕುತ್ತಿಗೆಯಲ್ಲಿದ್ದ ಸುಮಾರು 16 ಗ್ರಾಂ ಚಿನ್ನದ ಚೈನ್ ಸಹ ಕಳೆದು ಹೋಗಿದೆ.

ನಂತರ ನಾನು ಮಹೇಶ್ ಅವರ ಸಹಾಯದಿಂದ ವಾಸವಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ದೂರು ನೀಡಿದೇನೆ. ಹೀಗಾಗಿ ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿ ನನ್ನ ಮೇಲೆ ತೀವ್ರತರವಾದ ಹಲ್ಲೆ ಮಾಡಿರುವ ಈ ಅಪರಿಚಿತರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಠಾಣೆಯಲ್ಲಿ ಚಾಲಕ ನಾಗೇಂದ್ರ ದೂರು ನೀಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಬಿಎಂಟಿಸಿ ಬನಶಂಕರಿ 20ನೇ ಘಟಕದ ವ್ಯವಸ್ಥಾಪಕರು, ಇತರ ಅಧಿಕಾರಿಗಳು ಪೊಲೀಸ್‌ ಠಾಣಾಧಿಕಾರಿಗಳಿಗೆ ವಿವರಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೋರಿದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ಮಾಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ