CrimeNEWSನಮ್ಮಜಿಲ್ಲೆ

BMTC: ಬಿಡದಿ ಡಿಪೋನಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಬಸ್‌- ತಪ್ಪಿದ ಭಾರಿ ಆನಾಹುತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಿಡದಿ ಘಟಕದಲ್ಲಿ ಎಲೆಕ್ಟ್ರಿಕ್‌ ಬಸ್ಸೊಂದು ಆಕಸ್ಮಿಕ ಬೆಂಕಿಬಿದ್ದು ಹೊತ್ತಿ ಉರಿದ ಘಟನೆ ನಡೆದಿದೆ.

ಇಂದು (ಏ.5) ಮಧ್ಯಾಹ್ನ ಬಿಎಂಟಿಸಿ ಬಿಡದಿ 49ನೇ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಸದ್ಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಬಸ್‌ ಆಪಾರ ಹಾನಿಗೊಳಗಾಗದೆ ಬಚಾವ್‌ ಆಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಘಟಕದಲ್ಲಿದ್ದ ಸಿಬ್ಬಂದಿ ಕೂಡಲೇ ಕಾರ್ಬನ್‌ ಡೈಆಕ್ಸೈಡ್‌ ಅನಿಲ ಬಳಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇಲ್ಲದಿದ್ದರೆ ಈ ಬಸ್‌ನ ಜತೆಗೆ ಇತರ ಬಸ್‌ಗಳು ಮತ್ತು ಸ್ವಲ್ಪ ದೂರದಲ್ಲೇ ನಿಲ್ಲಿಸಿದ್ದ ಬೈಕ್‌ಗಳು ಕೂಡ ಬೆಂಕಿಗೆ ಆಹುತಿಯಾಗುತ್ತಿದ್ದವು ಎಂದು ಸ್ಥಳದಲ್ಲೇ ಇದ್ದ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನು ಘಟಕದಲ್ಲಿ ನಿಂತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದರೆ ಯಾರೋ ಸಿಗರೇಟ್‌ ಸೇದಿ ಅದರ ಅದರ ತುಂಡನ್ನು ಬಿಸಾಗಿಕ್ಕಿದ್ದರಿಂದ ಈ ಅವಘಡ ಸಂಭವಿಸರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೆ ತಿಳಿದು ಬರಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ