Crimeನಮ್ಮಜಿಲ್ಲೆಬೆಂಗಳೂರು

BMTC: ರಾತ್ರಿ ಏಕಾಏಕಿ ಕೆಂಪಾಪುರ ಸರ್ವೀಸ್ ರಸ್ತೆಯಲ್ಲಿ ಧಗಧಗಿಸಿದ ಎಲೆಕ್ಟ್ರಿಕ್‌ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೆಬ್ಬಾಳ ಬಳಿಯ ಕೆಂಪಾಪುರ ಸರ್ವೀಸ್ ರೋಡ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್‌ ಧಗಧಗಿಸಿ ಉರಿದು ಭಸ್ಮವಾದ ಘಟನೆ ನಿನ್ನೆ (ಸೋಮವಾರ) ರಾತ್ರಿ 11:30 ಸುಮಾರು ಸಮಯದಲ್ಲಿ ಸಂಭವಿಸಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಇತ್ತೀಚಿನ ದಿನಗಳಲ್ಲಿ ಸಂಸ್ಥೆಯ ಎಲೆಕ್ಷ್ರಾನಿಕ್‌ ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿಯುತ್ತಿರುವುದು ಸಾಮಾನ್ಯ ಎಂಬಂತಾಗಿದ್ದು ಬಿಡದ ಡಿಪೋನಲ್ಲಿ ಬಸ್‌ ಉರಿದ ಘಟನೆ ಮಾಸುವ ಮುನ್ನವೇ ಅದೇ ರೀತಿ ಸೋಮವಾರ ರಾತ್ರಿ ಕೆಂಪಾಪುರ ಸರ್ವಿಸ್ ರಸ್ತೆಯಲ್ಲಿ ಬಿಎಂಟಿಸಿ ಇ.ವಿ.ಬಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಭಸ್ಮವಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಸುತ್ತಲೂ ಮಂಜಿನಂತೆ ದಟ್ಟ ಹೊಗೆ ಆವರಿಸಿದೆ. ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲೇ ಇಳಿಸಿದ್ದರಿಂದ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ರಾತ್ರಿ 11.30ರವೇಳೆಗೆ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಬ್ಯಾಟರಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ತಕ್ಷಣ ಎಚ್ಚೆತ್ತುಕೊಂಡು ಬಸ್‌ನಿಂದ ಇಳಿದಿದ್ದಾರೆ.

ಇನ್ನು ಈ ದೃಶ್ಯ ಕಂಡು ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬೆಂಗಳೂರಿನ ಜೀನನಾಡಿ ಸಾರಿಗೆಯಲ್ಲೊಂದಾದ ಬಿಎಂಟಿಸಿ ಬಸ್‌ಗಳು ದಿನದ ಬೆಳ್ಳಗೆಯಿಂದಲೂ ಸಂಜೆವರೆಗೂ ಯಾವುದೇ ತಾಪವನ್ನು ಲೆಕ್ಕಿಸದೇ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಹೊತ್ತೊಯ್ಯುತ್ತಲೇ ಇರುತ್ತವೆ.

ಈ ಸಾರಿಗೆಗಳಲ್ಲಿ ಕೆಸಲ ಮಾಡುವ ಚಾಲಕ ಮತ್ತು ನಿರ್ವಾಹಕರ ಪಾಡಂತೂ ಹೇಳತೀರದಾಗಿದೆ. ಯಾವಾಗ ವಿಶ್ರಾಂತಿಗೆ ನೆಲ ಸಿಗುತ್ತದೆಯೋ ಎನ್ನುವ ಪರಿಸ್ಥಿತಿಯಲ್ಲಿರುತ್ತಾರೆ. ಈ ನಡುವೆ ಈರೀತಿ ಬಸ್‌ ಏಕಾಏಕಿ ಹೊತ್ತಿಉರಿದರೆ ಚಾಲನಾ ಸಿಬ್ಬಂದಿಯ ಪಾಡೇನು. ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳು ಇತ್ತೀಚೇಗೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಅದೇ ರೀತಿ ನಿನ್ನೆ ರಾತ್ರಿ 10.30ರ ಸುಮಾರಿಗೆ ಈ ಬಸ್‌ ಕೆಟ್ಟು ನಿಂತಿದೆ. ಹೀಗಾಗಿ ಬಸ್‌ ರಿಪೇರಿ ಮಾಡಲು ತಾಂತ್ರಿಕ ಸಿಬ್ಬಂದಿ ಬಂದಿರಬೇಕು. ಈ ವೇಳೆ ಈ ಅವಘಡ ಸಂಭವಿಸಿರಬಹುದು ಎಂದು ಕೂಡ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!