NEWSಆರೋಗ್ಯನಮ್ಮರಾಜ್ಯ

BMTC ಶೇ.50 ರಷ್ಟು ಚಾಲನಾ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ: ಡಾ.ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಚಾಲನಾ ಸಿಬ್ಬಂದಿಗಳಲ್ಲಿ 100ಕ್ಕೆ 40-50 ಮಂದಿ ಹೃದ್ರೋಗದಿಂದ ಬಳಲುತ್ತಿದ್ದಾರೆ, ಜತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ರಕ್ತನಾಳ ಸಂಬಂಧಿತ ಕಾಯಿಲೆಗಳಿಂದಲೂ ಬಳಲುತ್ತಿದ್ದಾರೆ.

ಈ ಬಗ್ಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಮಾಹಿತಿ ನೀಡಿದ್ದು, 12-13 ತಿಂಗಳಲ್ಲಿ ಆಸ್ಪತ್ರೆಯು 8,200 ಬಿಎಂಟಿಸಿ ಚಾಲನಾ ಸಿಬ್ಬಂದಿಗಳಿಗೆ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಾಯಿತು. ಈ ವೇಳೆ ಹೃದಯ ಸಂಬಂಧಿ ಸಮಸ್ಯೆಯಿಂದ ಶೇ.50 ರಷ್ಟು ಚಾಲನಾ ಸಿಬ್ಬಂದಿ ಬಳಲುತ್ತಿರುವುದಾಗಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ತಪಾಸಣೆ ವೇಳೆ 8,200 ಚಾಲನಾ ಸಿಬ್ಬಂದಿಗಳ ರಕ್ತ ಪರೀಕ್ಷೆ, ಹೃದಯ ಒತ್ತಡ ಪರೀಕ್ಷೆಗಳು, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ಗಳೊಂದಿಗೆ (ಇಕೋ) ಸಮಗ್ರ ಆರೋಗ್ಯ ತಪಾಸಣೆಗೆ ಒಳಪಡಿಲಾಗಿತ್ತು. ಪರೀಕ್ಷಿಸಿದ ವೇಳೆ 40 ಪ್ರತಿಶತದಷ್ಟು ಮಧುಮೇಹಿಗಳು, 40 ಪ್ರತಿಶತದಷ್ಟು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ಮತ್ತು 62 ಪ್ರತಿಶತದಷ್ಟು ಇತರ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿದೆ.

ಈಗಾಗಲೇ ಹೃದಯದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗದೆ ಅಡಚಣೆಯಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಶೇಕಡಾ 5 ರಷ್ಟು ಚಾಲಕರ ಬಗ್ಗೆಯೂ ಪರೀಕ್ಷೆ ನಡೆಸಿದ್ದು ವೈದ್ಯರು ಈ ಬಗ್ಗೆ ಎಚ್ಚರಿಕೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾರೆ. ಇನ್ನು ಸುಮಾರು 35 ಪ್ರತಿಶತ ಚಾಲನಾ ಸಿಬ್ಬಂದಿ ಧೂಮಪಾನ, ಮದ್ಯಪಾನಿಗಳಾಗಿರುವುದು ಕಂಡುಬಂದಿದೆ.

ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರವಾಗಿ ಕುಳಿತುಕೊಳ್ಳುವುದು ಸೇರಿದಂತೆ ಆಯಾಸದಿಂದ ಚಾಲಕರು ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಾರೆ ಎಂದು ಮಂಜುನಾಥ್ ವಿವರಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್‌: ಇ ದೇ ರೀತಿ ಸಮಗ್ರ ಆರೋಗ್ಯ ತಪಾಸಣೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಕಾರಣ ಅವರಲ್ಲೂ ಸಹ ಹೃದಯ ಸಂಬಂಧಿ ಸಮಸ್ಯೆಗಳ ಹೆಚ್ಚಿನ ಅಪಾಯವಿದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಹೃದ್ರೋಗದಿಂದ ಶೇ.30 ರಷ್ಟು ಮಂದಿ ಸಾಯುವುದು ಕಂಡು ಬಂದಿದೆ. ಹೀಗಾಗಿ ಆರಂಭಿಕ ಹಂತದಲ್ಲಿ ಜನರನ್ನು ಪರೀಕ್ಷಿಸುವುದು ಬಹಳ ಮುಖ್ಯ, ಇದು ಮರಣ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಎಂದು ಅವರು ಹೇಳಿದರು.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಒತ್ತಡದ ಕೆಲಸವನ್ನು ಹೊಂದಿರುವುದರಿಂದ ಮತ್ತು ಪ್ರತಿದಿನವೂ ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ಇವರಲ್ಲಿ ಹೆಚ್ಚಾಗಲು ಮತ್ತೊಂದು ಕಾರಣವಾಗಿದೆ.

ವಾಯು ಮಾಲಿನ್ಯವು ಕೇವಲ ಉಸಿರಾಟದ ಸಮಸ್ಯೆಗಳಿಗೆ ಮಾತ್ರ ಕಾರಣವಲ್ಲ, ಆದರೆ 2.5 ಮಿ.ಗ್ರಾಂ.ಗಿಂತ ಕಡಿಮೆ ಇರುವ ಕಣಗಳ ಇನ್ಹಲೇಷನ್ ಸುಲಭವಾಗಿ ಶ್ವಾಸಕೋಶದ ಮೂಲಕ ಹಾದುಹೋಗುತ್ತದೆ ಮತ್ತು ಅಪಧಮನಿಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ. ಆರೋಗ್ಯದಲ್ಲಿ ಏರುಪೇರಾಗುವುದು ಸಹಜವಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ