NEWSನಮ್ಮಜಿಲ್ಲೆನಮ್ಮರಾಜ್ಯ

BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಕೆಎಸ್‌ಆರ್‌ಟಿಸಿ (KSRTC) ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯ ಗಳಿಸುವ ಮೂಲಕ ಬಂಪರ್ ಆದಾಯ ಪಡೆದ ಹೆಗ್ಗಳಿಗೆ ಪಾತ್ರವಾಗಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ದೀಪಾವಳಿ ಹಬ್ಬದಿಂದ (Deepawali) ಸಾಲು ಸಾಲು ರಜೆಗಳಿದ್ದ ಕಾರಣ ರಾಜ್ಯದ ರಾಜಧಾನಿ ಸೇರಿದಂತೆ ಬೇರೆಡೆಯಿಂದ ಊರಿನತ್ತ ಜನರು ತೆರಳಿದ್ದವರು. ನ.3 ರಂದು ಭಾನುವಾರ ಮತ್ತೆ ಸಿಲಿಕಾನ್ ಸಿಟಿಗೆ ಮರಳಿದ್ದಾರೆ. ಇದರಿಂದಾಗಿ ಭಾನುವಾರ ಒಂದೇ ದಿನ ಆನ್‌ಲೈನ್‌ಲ್ಲಿ 85,462 ಸೀಟುಗಳನ್ನು ಬುಕಿಂಗ್ ಆಗಿದ್ದವು.

85,462 ಸೀಟುಗಳು ಬುಕ್ ಆಗಿದ್ದು, ಭಾನುವಾರ ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ. ಇದಕ್ಕೂ ಮೊದಲು ಅಕ್ಟೋಬರ್ ಅಂತ್ಯದ ದಿನವೊಂದರಲ್ಲಿ 67,033 ಟಿಕೆಟ್ ಮಾರಾಟವಾಗಿದ್ದವು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಹಬ್ಬದ ನಿಮಿತ್ತ ಕೆಎಸ್‌ಆರ್‌ಟಿಸಿ ಜತೆಗೆ ಬಿಎಂಟಿಸಿಯು ಕಾರ್ಯನಿರ್ವಹಿಸಿದ್ದು, ಗಳಿಸಿರುವ ಆದಾಯಕ್ಕೆ ಸಾಥ್ ನೀಡಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ತಿಳಿಸಿದ್ದಾರೆ.

ಇಷ್ಟೆಲ್ಲ ಆದಾಯ ಬರುತ್ತಿದ್ದರು ಕೂಡ ಸಾರಿಗೆ ನಿಗಮಗಳು ಭಾರಿ ನಷ್ಟದಲ್ಲಿವೆ ಎಂದು ಮಾತ್ರ ಸಂಘಟನೆಗಳು ಮತ್ತು ಅಧಿಕಾರಿಗಳು ಹೇಳುತ್ತಲೇ ಬರುತ್ತಿದ್ದಾರೆ. ಹೀಗಾಗಿ ಆದಾಯ ಎಲ್ಲಿ ಸೋರಿಕೆಯಾಗುತ್ತಿದೆ ಎಂಬುವುದು ಮಾತ್ರ ಗೊತ್ತಾಗುತ್ತಿಲ್ಲ.

ಚಾಲನಾ ಸಿಬ್ಬಂದಿಗಳು ಆದಾಯವನ್ನು ಕೋತ ಮಾಡಿದ್ದರೆ ಗಳಿಕೆಯ ಹಣ ಲೆಕ್ಕಕ್ಕೆ ಸಿಗುವುದಿಲ್ಲ, ಆದರೆ, ಲೆಕ್ಕಕ್ಕೆ ಸಿಗುವ ಹಣ ಲಾಭದಲ್ಲಿದ್ದರೂ ತಿಂಗಳ ಕೊನೆಯಲ್ಲಿ ನಷ್ಟದ ಲೆಕ್ಕದಲ್ಲಿ ಬಂದು ನಿಲ್ಲುತ್ತಿದೆ ಇದಕ್ಕೆ ಏನು ಕಾರಣ ಎಂದು ಮಾತ್ರ ಯಾರು ಕಂಡುಹಿಡಿಯುತ್ತಿಲ್ಲ ಎಂದು ಕೆಲ ಅಧಿಕಾರಿಗಳೆ ಬೇಸರ ಹೊರಹಾಕುತ್ತಿದ್ದಾರೆ.

ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ನೌಕರರಿಗೆ 38 ತಿಂಗಳ ವೇತನ ಅರಿಯರ್ಸ್‌ ಕೊಡಬೇಕು ಎಂದು ಹೇಳುತ್ತಾರೆ. ಜತೆಗೆ ಟಿಕೆಟ್‌ ಬೆಲೆ ಏರಿಕೆ ಮಾಡದಿರುವುದರಿಂದ ಸಂಸ್ಥೆಗಳು ಆರ್ಥಿಕ ನಷ್ಟ ಅನುಭವಿಸುತ್ತಿವೆ ಎಂದು ಹೇಳುತ್ತಾರೆ. ಆದರೆ ಲಾಭ ಬರುತ್ತಿದ್ದರು ಹೇಗೆ ನಷ್ಟವಾಗುತ್ತಿದೆ ಎಂಬುದಕ್ಕೆ ಅವರಲ್ಲೂ ಉತ್ತರವಿಲ್ಲ ಎಂಬುವುದು ಮಾತ್ರ ಸಂಶಯಕ್ಕೆ ಎಡೆಮಾಡಿಕೊಡುತ್ತಿದೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!