CrimeNEWS

ಹಿಂದಿನಿಂದ ಲಾರಿಗೆ ಬೊಲೆರೋ ಡಿಕ್ಕಿ : ಇಬ್ಬರು ಮೃತ, ಚಾಲಕನಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಶಿರಾ: ಲಾರಿಯ ಹಿಂಬದಿಗೆ ಬೊಲೆರೋ ವಾಹನ​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಚಾಲಕ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಎಂಬುವರು ಸಾವನ್ನಪ್ಪಿದ್ದಾರೆ.

ಮುಂದೆ ಸಾಗುತ್ತಿದ್ದ ಲಾರಿಗೆ, ಹಿಂಬದಿಯಿಂದ ಬೊಲೆರೋ​ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋದಲ್ಲಿದ್ದ ಇಬ್ಬರು ಅಸುನೀಗಿದ್ದಾರೆ. ಇನ್ನು ಚಾಲಕನಿಗೆ ಗಾಯವಾಗಿದ್ದು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಬರ ಪರಿಹಾರ ವಿತರಣೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ: ಕುರುಬೂರ್ ಶಾಂತಕುಮಾರ್ ಬೇಸರ KSRTC ನೌಕರರ ಮೇಲೆ ತಿಪಟೂರು ಘಟಕ ವ್ಯವಸ್ಥಾಪಕರ ದರ್ಪ, ಏಕ ವಚನ ಪ್ರಯೋಗ! ವಂಚಕರ ನಂಬಿ ಹಣ ದುಪ್ಪಟ್ಟು ಆಸೆಗೆ ಬಿದ್ದ ಮಹಿಳೆ ಕೋಟಿ ರೂ. ಕಳೆದುಕೊಂಡರು!! ಮೊಮ್ಮಗನ ಹಗರಣ ತಾತನಿಗೆ ಮುಳುವಾಯಿತೇ!! ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ ಬೆನ್ನೆಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಬಿಸಿಲ ಝಳಕ್ಕೆ ಬಿಎಂಟಿಸಿ ನಿರ್ವಾಹಕ ಸೇರಿ ಇಬ್ಬರು ಮೃತ ಬೇಸಿಗೆಯ ಬಿರು ಬಿಸಿಲು- ತಂಪೆರೆದ ಭರಣಿ ಮಳೆ: ರೈತರ ಮುಖದಲ್ಲಿ ಮಂದಹಾಸ ಬೇಟಿ ಬಚಾವೋ ಬೇಟಿ ಪಢಾವೋ ಎಂದರೆ ಅತ್ಯಾಚಾರಿಗಳಿಗೆ ಟಿಕೆಟ್‌ ನೀಡುವುದೇ?:  ಮುಖ್ಯಮಂತ್ರಿ ಚಂದ್ರು ಪ್ರಶ್ನೆ