NEWSಆರೋಗ್ಯದೇಶ-ವಿದೇಶಸಿನಿಪಥ

ಬಾಲಿವುಡ್‌ ನಟಿಗೆ ಸ್ತನ ಕ್ಯಾನ್ಸರ್: ಸ್ವತಃ ಬಹಿರಂಗ ಪಡಿಸಿದ ಹಿನಾ ಖಾನ್

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ ಸ್ತನದ ಕ್ಯಾನ್ಸರ್ ಪತ್ತೆ ಆಗಿದೆ. ನನಗೆ ಸ್ತನ ಕ್ಯಾನ್ಸರ್ 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಟಿ ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ ಧಾರಾವಾಹಿ ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’, ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

“ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಚೆನ್ನಾಗಿಯೇ ಇದ್ದೇನೆ. ನಾನು ಗಟ್ಟಿ ಇದ್ದೇನೆ. ಈ ರೋಗದಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ. ನನಗೆ ಚಿಕಿತ್ಸೆ ಕೊಡಿಸುವ ಕೆಲಸ ಶುರುವಾಗಿದೆ. ಮತ್ತಷ್ಟು ಗಟ್ಟಿಯಾಗಿ ಬರಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ ಹಿನಾ ಖಾನ್.

ನನಗೆ ಗೌರವ ಹಾಗೂ ಖಾಸಗಿತನವನ್ನು ನೀಡಿ, ನೀವು ನೀಡಿರುವ ಪ್ರೀತಿ ಹಾಗೂ ಆಶೀರ್ವಾದವನ್ನು ನಾನು ಪ್ರಶಂಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಹಿನಾಗೆ ಈಗ 36 ವರ್ಷ. ಹಿಂದಿಯಲ್ಲಿ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಅವರು ಪಾಸಿಟಿವ್ ಇದ್ದಾರೆ.

ಹಿನಾ ಅವರನ್ನು ಬೆಂಬಲಿಸಿ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಹಿನಾಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ದೇವರು ನೀಡಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ