ದೇಶ-ವಿದೇಶನಮ್ಮರಾಜ್ಯಸಿನಿಪಥ

ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ಹೊಕ್ಕಳಲ್ಲಿದೆ ₹2.70 ಕೋಟಿ ಮೌಲ್ಯದ ಡೈಮಂಡ್ ಪಿನ್

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ತನ್ನ ಹೊಕ್ಕಳಿನಲ್ಲಿ 2ಕೋಟಿ 70 ಲಕ್ಷ ರೂಪಾಯಿ ಮೌಲ್ಯದ ವಜ್ರದ ರಿಂಗ್‌ ಧರಿಸಿಕೊಂಡು ಸ್ಟೈಲೀಶ್ ಲುಕ್‌ನಲ್ಲಿ ಫ್ಯಾನ್ಸ್ ಗಮನ ಸೆಳೆದಿದ್ದಾರೆ.

ಮಹೇಶ್ ಬಾಬು ನಟನೆಯ ಸಿನಿಮಾಕ್ಕಾಗಿ  ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದ ಅವರ ಹೊಕ್ಕಳನ್ನು ಗಮನಿಸಿದ ಸಿನಿ ಪತ್ರಕರ್ತರಿಗೆ ಅದರಲ್ಲಿ ಧರಿಸಿದ ಡೈಮಂಡ್ ರಿಂಗ್ ಗಮನ ಸೆಳೆದಿದೆ. ಈ ವೇಳೆ ಒಬ್ಬರು ಅದರ ಮೌಲ್ಯ ತಿಳಿದುಕೊಳ್ಳುವ ಪ್ರಯತ್ನ ಮಾಡಿದಾಗ ಅವರು  2.7 ಕೋಟಿ ರೂ. ಮೌಲ್ಯದ ರಿಂಗ್‌ ಧರಿಸಿದ್ದಾರೆ ಎಂಬುವುದು ಗೊತ್ತಾಗಿದೆ. ಸದ್ಯ ಈ ವಿಚಾರ ಬಾಲಿವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಏರ್‌ಪೋರ್ಟ್‌ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್, ಅದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ.ಗಳ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.

ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದು, ಹಿಂದೆಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಮಿಂಚಲಿದ್ದಾರೆ ಎಂದು ಸಿನಿ ಬಳಗ ಹೇಳಿಕೊಂಡಿದೆ.

ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ.‌ ಸಿನಿಮಾದ ಹೆಚ್ಚಿನ ಅಪ್‌ಡೇಟ್‌ ಕೊಡುವುದಕ್ಕೆ ರಾಜಮೌಳಿ ಮತ್ತು ಮಹೇಶ್ ಬಾಬು ತಂಡ ಸಜ್ಜಾಗುತ್ತಿದ್ದು ಅತೀ ಶೀಘ್ರದಲ್ಲೇ ಅದೂ ಕೂಡ ಹೊರಬೀಳಲಿದೆ.

Deva
the authorDeva

Leave a Reply

error: Content is protected !!
Latest news
BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ ವಿಜಯಪಥ ವರದಿಗೆ ಎಚ್ಚೆತ್ತ NWKRTC: ನೌಕರರಿಗೆ 11ತಿಂಗಳ ಹಿಂಬಾಕಿ ಪಾವತಿಯಾಗಿದೆ- ಸ್ಪಷ್ಟನೆ ನೀಡಿ ಸಿಬ್ಬಂದಿ ಗೊಂದಲ ನ... ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳ ತೀವ್ರ ಖಂಡನೀಯ: ನೌಕರರ ಹಕ್ಕಿಗಾಗಿ ಹೋರಾಟಕ್ಕೆ ಸಿದ್ಧ: ಬೀದರ್‌ ಬಿಎಂ... ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ NWKRTC: ನೌಕರರಿಗೆ 11ತಿಂಗಳ ಬದಲಿಗೆ 8 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಕಿದ್ದಾರಾ? ಗೊಂದಲದಲ್ಲಿ ಸಿಬ್ಬಂದಿ! "ನಷ್ಟದ ನೆಪದಲ್ಲಿ ವೇತನ ತಡೆಹಿಡಿಯಲು" ಅವಕಾಶ ಇಲ್ಲ: ಭಾರತ ಸಂವಿಧಾನ ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..?