ದೇಶ-ವಿದೇಶನಮ್ಮರಾಜ್ಯಸಿನಿಪಥ

ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ಹೊಕ್ಕಳಲ್ಲಿದೆ ₹2.70 ಕೋಟಿ ಮೌಲ್ಯದ ಡೈಮಂಡ್ ಪಿನ್

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ತನ್ನ ಹೊಕ್ಕಳಿನಲ್ಲಿ 2ಕೋಟಿ 70 ಲಕ್ಷ ರೂಪಾಯಿ ಮೌಲ್ಯದ ವಜ್ರದ ರಿಂಗ್‌ ಧರಿಸಿಕೊಂಡು ಸ್ಟೈಲೀಶ್ ಲುಕ್‌ನಲ್ಲಿ ಫ್ಯಾನ್ಸ್ ಗಮನ ಸೆಳೆದಿದ್ದಾರೆ.

ಮಹೇಶ್ ಬಾಬು ನಟನೆಯ ಸಿನಿಮಾಕ್ಕಾಗಿ  ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದ ಅವರ ಹೊಕ್ಕಳನ್ನು ಗಮನಿಸಿದ ಸಿನಿ ಪತ್ರಕರ್ತರಿಗೆ ಅದರಲ್ಲಿ ಧರಿಸಿದ ಡೈಮಂಡ್ ರಿಂಗ್ ಗಮನ ಸೆಳೆದಿದೆ. ಈ ವೇಳೆ ಒಬ್ಬರು ಅದರ ಮೌಲ್ಯ ತಿಳಿದುಕೊಳ್ಳುವ ಪ್ರಯತ್ನ ಮಾಡಿದಾಗ ಅವರು  2.7 ಕೋಟಿ ರೂ. ಮೌಲ್ಯದ ರಿಂಗ್‌ ಧರಿಸಿದ್ದಾರೆ ಎಂಬುವುದು ಗೊತ್ತಾಗಿದೆ. ಸದ್ಯ ಈ ವಿಚಾರ ಬಾಲಿವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಏರ್‌ಪೋರ್ಟ್‌ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್, ಅದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ.ಗಳ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.

ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದು, ಹಿಂದೆಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಮಿಂಚಲಿದ್ದಾರೆ ಎಂದು ಸಿನಿ ಬಳಗ ಹೇಳಿಕೊಂಡಿದೆ.

ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ.‌ ಸಿನಿಮಾದ ಹೆಚ್ಚಿನ ಅಪ್‌ಡೇಟ್‌ ಕೊಡುವುದಕ್ಕೆ ರಾಜಮೌಳಿ ಮತ್ತು ಮಹೇಶ್ ಬಾಬು ತಂಡ ಸಜ್ಜಾಗುತ್ತಿದ್ದು ಅತೀ ಶೀಘ್ರದಲ್ಲೇ ಅದೂ ಕೂಡ ಹೊರಬೀಳಲಿದೆ.

Deva
the authorDeva

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ