NEWSನಮ್ಮರಾಜ್ಯ

KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- CPM ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ. ಹೀಗಾಗಿ ಇದನ್ನು ಬಿಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸೂಕ್ತಾಧಿಕಾರಿಗಳು 03.02.2025ರಂದು ಆದೇಶ ಹೊರಡಿರುವ ಹಿನ್ನೆಲೆಯಲ್ಲಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಪ್ರಾಂಶುಪಾಲರು, ಕಾರ್ಯ ವ್ಯವಸ್ಥಾಪಕರು/ ಮುದ್ರಣ ನಿಯಂತ್ರಣಾಧಿಕಾರಿಗಳಿಗೆ ಈ ಆದೇಶ ಹೊರಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ. ಕೇಂದ್ರ ಕಚೇರಿ ಹಾಗೂ ವಿಭಾಗಗಳಲ್ಲಿ ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ಅಧಿಕಾರಿ/ ನೌಕರರ ಜನವರಿ-25ರ ಮಾಹೆಯ ಹಾಜರಾತಿಯನ್ನು ಸೂಕ್ತಾಧಿಕಾರಿಗಳು ಗಮನಿಸಿದ್ದಾರೆ.

ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿಯನ್ನು ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ ಹಾಗೂ ವಿಭಾಗ/ಘಟಕಗಳಲ್ಲಿ ನೌಕರರ ಹಾಜರಾತಿಯಲ್ಲಿ A ಮತ್ತು L ಎಂದು ನಮೂದಿಸಿ ತದನಂತರ ಅದನ್ನು ರಜೆ ಎಂದು ಬದಲಾಯಿಸುತ್ತಿರುವುದು ಕಂಡುಬಂದಿದೆ.

ಹೀಗಾಗಿ ತುರ್ತು ಮತ್ತು ಅತಿ ಜರೂರು ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳಲ್ಲಿ A ಮತ್ತು L ಎಂದು ಹಾಜರಾತಿಯಲ್ಲಿ ನಮೂದಿಸಿರುವುದನ್ನು Backend updation ನಲ್ಲಿ ರಜೆ ಎಂದು ಮಾಡಬಾರದು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇನ್ನು Android ಮೊಬೈಲ್ ಹೊಂದಿಲ್ಲದವರು ಹಾಗೂ ಅನ್ಯ ಕರ್ತವ್ಯ ನಿಯೋಜನೆ ಮೇಲೆ ಕಚೇರಿಯಿಂದ ಹೊರಗೆ ಉಳಿಯುವ ಸಂದರ್ಭ ಹೊರತುಪಡಿಸಿ, ಇನ್ನುಳಿದ ಸಮಯದಲ್ಲಿ Web check-in ಮಾಡತಕ್ಕದ್ದಲ್ಲ. ಕಡ್ಡಾಯವಾಗಿ ಕಚೇರಿಗೆ ಬಂದ ನಂತರವೇ “ಸಾರಿಗೆ ಮಿತ್ರ” ಮೊಬೈಲ್ APP ಮುಖಾಂತರ ಹಾಜರಾತಿ ನಮೂದಿಸಬೇಕು ಎಂದು ತಿಳಿಸಿದ್ದಾರೆ.

Web check-in ವ್ಯವಸ್ಥೆ ದುರುಪಯೋಗ ಮಾಡಿಕೊಂಡಿರುವುದು ಗಮನಕ್ಕೆ ಬಂದಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿತನಾಗಿದ್ದೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ... ಏ.29ರ ಒಳಗೆ ರೈತರ ಖಾತೆಗೆ ಬಾಕಿ ಹಣ ಜಮಾ ಡಿಸಿ ಭರವಸೆ ಹಿನ್ನೆಲೆ ಧರಣಿ ತಾತ್ಕಾಲಿಕ ಮುಂದೂಡಿಕೆ: ಕುರುಬೂರು ಶಾಂತಕುಮಾರ್... ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ...