KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್ಆರ್ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ. ಹೀಗಾಗಿ ಇದನ್ನು ಬಿಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಸೂಕ್ತಾಧಿಕಾರಿಗಳು 03.02.2025ರಂದು ಆದೇಶ ಹೊರಡಿರುವ ಹಿನ್ನೆಲೆಯಲ್ಲಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಪ್ರಾಂಶುಪಾಲರು, ಕಾರ್ಯ ವ್ಯವಸ್ಥಾಪಕರು/ ಮುದ್ರಣ ನಿಯಂತ್ರಣಾಧಿಕಾರಿಗಳಿಗೆ ಈ ಆದೇಶ ಹೊರಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ. ಕೇಂದ್ರ ಕಚೇರಿ ಹಾಗೂ ವಿಭಾಗಗಳಲ್ಲಿ ಎಚ್ಆರ್ಎಂಎಸ್ ತಂತ್ರಾಂಶದ ಮೂಲಕ ಅಧಿಕಾರಿ/ ನೌಕರರ ಜನವರಿ-25ರ ಮಾಹೆಯ ಹಾಜರಾತಿಯನ್ನು ಸೂಕ್ತಾಧಿಕಾರಿಗಳು ಗಮನಿಸಿದ್ದಾರೆ.
ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್ಆರ್ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿಯನ್ನು ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ ಹಾಗೂ ವಿಭಾಗ/ಘಟಕಗಳಲ್ಲಿ ನೌಕರರ ಹಾಜರಾತಿಯಲ್ಲಿ A ಮತ್ತು L ಎಂದು ನಮೂದಿಸಿ ತದನಂತರ ಅದನ್ನು ರಜೆ ಎಂದು ಬದಲಾಯಿಸುತ್ತಿರುವುದು ಕಂಡುಬಂದಿದೆ.
ಹೀಗಾಗಿ ತುರ್ತು ಮತ್ತು ಅತಿ ಜರೂರು ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳಲ್ಲಿ A ಮತ್ತು L ಎಂದು ಹಾಜರಾತಿಯಲ್ಲಿ ನಮೂದಿಸಿರುವುದನ್ನು Backend updation ನಲ್ಲಿ ರಜೆ ಎಂದು ಮಾಡಬಾರದು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಇನ್ನು Android ಮೊಬೈಲ್ ಹೊಂದಿಲ್ಲದವರು ಹಾಗೂ ಅನ್ಯ ಕರ್ತವ್ಯ ನಿಯೋಜನೆ ಮೇಲೆ ಕಚೇರಿಯಿಂದ ಹೊರಗೆ ಉಳಿಯುವ ಸಂದರ್ಭ ಹೊರತುಪಡಿಸಿ, ಇನ್ನುಳಿದ ಸಮಯದಲ್ಲಿ Web check-in ಮಾಡತಕ್ಕದ್ದಲ್ಲ. ಕಡ್ಡಾಯವಾಗಿ ಕಚೇರಿಗೆ ಬಂದ ನಂತರವೇ “ಸಾರಿಗೆ ಮಿತ್ರ” ಮೊಬೈಲ್ APP ಮುಖಾಂತರ ಹಾಜರಾತಿ ನಮೂದಿಸಬೇಕು ಎಂದು ತಿಳಿಸಿದ್ದಾರೆ.
Web check-in ವ್ಯವಸ್ಥೆ ದುರುಪಯೋಗ ಮಾಡಿಕೊಂಡಿರುವುದು ಗಮನಕ್ಕೆ ಬಂದಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿತನಾಗಿದ್ದೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...