CrimeNEWSನಮ್ಮಜಿಲ್ಲೆ

ಪಂಪ್‍ಸೆಟ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್‌

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ ಸಹಾಯಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹರಿಹರ ನಗರ ಬೆಸ್ಕಾಂ ಕಚೇರಿಯ ಸಹಾಯಕ ಅಭಿಯಂತರ ಬಿ.ಎಂ. ಕರಿಬಸಯ್ಯ ಹಣದ ಸಮೇತ ಬೆಸ್ಕಾಂ ಕಚೇರಿಯಲ್ಲಿ  ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಐಪಿ ಪಂಪ್‍ಸೆಟ್‍ಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ ನೀಡಲು ಪ್ರತಿ ಸಂಪರ್ಕಕ್ಕೆ 5 ಸಾವಿರ ರೂಪಾಯಿಯಂತೆ ಬೇಡಿಕೆ ಇಟ್ಟು, ಅಂತಿಮವಾಗಿ 1 ಸಾವಿರ ರೂ.ಗೆ ಒಪ್ಪಿ 6 ಸಾವಿರ ರೂಪಾಯಿಯನ್ನು ಮಹೇಶ್ವರಪ್ಪ ಬೇವಿನಹಳ್ಳಿ ಅವರಿಂದ ಪಡೆಯುತ್ತಿದ್ದಾರೆ ಸಿಕ್ಕಿ ಬಿದ್ದಿದ್ದಾರೆ.

ಐಪಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ ನೀಡುವ ಮುಂಚೆಯೇ ಪ್ರತಿ ಸಂಪರ್ಕಕ್ಕೆ 5 ಸಾವಿರ ರೂ.ಗಳಿಗೆ ಆರೋಪಿ ಎಇ ಕರಿಬಸಯ್ಯ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಹೇಶ್ವರಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ನಂತರ ಹರಿಹರ ನಗರ ಬೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಬಿ.ಎಂ. ಕರಿಬಸಯ್ಯ ಮಹೇಶ್ವರಪ್ಪನಿಂದ 6 ಸಾವಿರ ರೂ. ಲಂಚ ಪಡೆಯುವಾಗ ಹಣದ ಸಮೇತ ಲೋಕಾಯುಕ್ತ ಅಧಿಕಾರಿಗಳು ಖೆಡ್ಡಕ್ಕೆ ಕೆಡವಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಕೆ.ಜಿ.ರಾಮಕೃಷ್ಣ, ಇನ್ಸ್‌ಪೆಕ್ಟರ್‌ಗಳಾದ ಎಚ್.ಎಸ್. ರಾಷ್ಟ್ರಪತಿ, ಆಂಜನೇಯ, ಪ್ರಭು ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು, ಆರೋಪಿ ಕರಿಬಸಯ್ಯನನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದೆ.

ಕಷ್ಟಪಟ್ಟು ನಾಡಿನ ದೇಶದ ಜನರಿಗೆ ಅನ್ನ ನೀಡುವ ಅನ್ನದಾತನಿಗೆ ಆತನ ದುಡಿಮೆಯಿಂದಲೇ ಹಣ ಬರಬೇಕು. ಅದು ಕೂಡ ಸಾಲಸೋಲಮಾಡಿ ಬಡ್ಡಿಗೆ ಹಣ ತಂದು ವರ್ಷ, 6 ತಿಂಗಳ ಬಳಿಕ ಫಸಲು ಚೆನ್ನಾಗಿ ಬಂದರೆ ಒಂದಷ್ಟು ಲಾಭ ನೋಡಲು ಸಾಧ್ಯ. ಇಲ್ಲದಿದ್ದರೆ ಸಾಲವನ್ನು ತೀರಸಲಾಗಷ್ಟು ನಷ್ಟಹೊಂದುತ್ತಾನೆ.

ಇಂಥ ಅನ್ನದಾತರನ್ನು ತಿಂಗಳ ಮೊದಲ ವಾರದಲ್ಲಿ ವೇತನ ಪಡೆಯುವ ಈ ಕೆಲ ನೀಚ ಅಧಿಕಾರಿಗಳು ಲಂಚದ ರೂಪದಲ್ಲಿ ಕಿತ್ತು ತಿನ್ನುವುದು ಈ ದೇಶದ ನಾಡಿನ ಜನರ ದುರಾದೃಷ್ಟಕರ ಸಂಗತಿ. ಇಂಥ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೊಂದ ಲಕ್ಷಾಂತರ ರೈತರು ಶಪಿಸುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ