NEWSನಮ್ಮಜಿಲ್ಲೆಸಂಸ್ಕೃತಿ

ಬೂಕನಕೆರೆ: ಸಾಯಿಬಾಬಾ ಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ಶ್ರೀ ವೀರೇಂದ್ರ ಹೆಗ್ಗಡೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದೇವಾಲಯಗಳು ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪ್ರತಿಬಿಂಬವಾಗಿವೆ. ಶರಣ ಶ್ರದ್ಧಾ ಆಧ್ಯಾತ್ಮಿಕ ಕೇಂದ್ರವಾಗಿರುವ ದೇಗುಲಗಳನ್ನು ಉಳಿಸಿ ಸಂರಕ್ಷಣೆ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಹೇಳಿದರು.

ಜಿಲ್ಲೆಯ ಬೂಕನಕೆರೆಯಲ್ಲಿ ಶ್ರೀ ಸಾಯಿ ಸೇವಾ ಟ್ರಸ್ಟ್ ನಿರ್ಮಿಸುತ್ತಿರುವ ಸಾಯಿಬಾಬಾ ಮಂದಿರ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಖಾವಂದರಾದ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಗೊಳಿಸಿರುವ 1 ಲಕ್ಷ ರೂ.ಗಳ ಡಿಡಿಯನ್ನು, ಟ್ರಸ್ಟ್ ಅಧ್ಯಕ್ಷ ಬಿ.ಜಿ ಪ್ರಕಾಶ್ ಮತ್ತು ಕಾರ್ಯದರ್ಶಿ ಮಂಜುನಾಥ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ಖಾವಂದರು ಸಾಯಿಬಾಬಾರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಒಂದು ಲಕ್ಷ ರೂ. ಚೆಕ್ ನೀಡಿದ್ದಾರೆ. ಹೊಯ್ಸಳ ವಾಸ್ತುವೈಭವದ ಶಿಲ್ಪಕಲೆಯ ಬೀಡಾದ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಹತ್ತಾರು ಸುಂದರವಾದ ದೇವಾಲಯಗಳ ಪುನರುಜ್ಜೀವನ ಮಾಡಿಸಿರುವ ಹೆಗ್ಗಡೆಯವರು ರಾಜ್ಯದಲ್ಲಿ ಯಾವುದೇ ದೇವಾಲಯದ ನಿರ್ಮಾಣಕ್ಕೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ ಎಂದರು.

ಬೂಕನಕೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಿಂಹರಾಜು, ಗ್ರಾಪಂ ಮಾಜಿ ಸದಸ್ಯ ಶ್ಯಾಮಪ್ರಸಾದ್, ರೈತ ಮುಖಂಡ ನಾಗರಾಜ್, ಮುಖಂಡರಾದ ಮಂಜು, ಲಕ್ಷ್ಮೀಕಾಂತ್ ಒಕ್ಕೂಟದ ಅಧ್ಯಕ್ಷರಾದ ಬಿ.ಎಸ್. ಶುಭಾ, ಪದ್ಮಮ್ಮ, ಮೇಲ್ವಿಚಾರಕರಾದ ರಾಜಪ್ಪ, ಸೇವಾ ಪ್ರತಿನಿಧಿ ರೇಖಾ ಕುಮಾರ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ