CrimeNEWSನಮ್ಮರಾಜ್ಯ

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಟೈರ್​ ಬ್ಲಾಸ್ಟ್‌: ಕ್ಷಣಾರ್ಧದಲ್ಲೇ ಬಸ್‌ ಭಸ್ಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ನ ಟೈರ್​ ಬ್ಲಾಸ್ಟ್‌ಆದ ಪರಿಣಾಮ ಬಸ್‌ಗೆ ಬೆಂಕಿಹೊತ್ತಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾದ ಘಟನೆ ನಡೆದಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರು – ವಿಜಯಪುರ ಮಾರ್ಗವಾಗ ಕಾರ್ಯಾಚರಣೆ ಮಾಡುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ ಹಿಟ್ಟನಹಳ್ಳಿ ಬಳಿ ಬರುತ್ತಿದ್ದಂತೆ ಟೈರ್​ ಬ್ಲಾಸ್ಟ್​ ಆಗಿದೆ. ಆ ಕ್ಷಣದಲ್ಲೇ ಬಸ್‌ಗೆ ಬೆಂಕಿಹೊತ್ತುಕೊಂಡು ಧಗ ಧಗ ಹೊತ್ತಿ ಉರಿದಿದೆ. ಆದರೆ ಟೈರ್​ ಬ್ಲಾಸ್ಟ್​ ಆದ ಶಬ್ಧ ಕೇಳಿದ ಬಸ್​​ನಲ್ಲಿದ್ದ ಎಲ್ಲರೂ ತಕ್ಷಣ ಕೆಳಕ್ಕೆ ಇಳಿದಿದ್ದಾರೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಆತಂಕದಿಂದಲೇ ಹೇಳಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ನಡು ರಸ್ತೆಯಲ್ಲೇ ಬಸ್​ ಸಂಪೂರ್ಣ ಸುಟ್ಟು ಕರಕಾಲಾಗಿದ್ದು ಭಾರೀ ಪ್ರಮಾಣದಲ್ಲಿ ಸುತ್ತಂಉತ್ತ ಹೊಗೆ ಆವರಿಸಿಕೊಂಡಿತ್ತು. ಜತೆ ಬಸ್‌ನಲ್ಲಿದ್ದ ಪ್ರಯಾಣಿಕರ ಬ್ಯಾಗ್​​ಗಳೆಲ್ಲ ಸುಟ್ಟು ಭಸ್ಮವಾಗಿವೆ.

ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದು, ಬ್ಯಾಗ್​ಗಳು ಬೆಂಕಿಗಾಹುತಿ ಆಗಿದ್ದರಿಂದ ಬ್ಯಾಗ್​ನಲ್ಲಿದ್ದ ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಎಲ್ಲ ಸುಟ್ಟು ಕರಕಲಾಗಿವೆ ಎಂದು ಕಣ್ಣೀರು ಹಾಕುತ್ತ ಗೋಳಾಡುತ್ತಿದ್ದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಅಗ್ನಿ ಶಾಮಕ‌ದಳ ಕೂಡ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ