NEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿಯಲ್ಲಿ ಸಂಚಾರ ನಿಲ್ಲಿಸಿದ ಬಸ್‌ಗಳು: ಡಿಪೋದಿಂದ ಹೊರ ಬಾರದ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರದ ಬಿಸಿ ಬೆಳಗಾವಿಯಲ್ಲಿ ತಟ್ಟಿದ್ದು, ಅಧಿಕಾರಿಗಳು ಸಿಬ್ಬಂದಿಗಳಿಗೆ ಫೋನ್‌ ಮಾಡಿ ಡ್ಯೂಟಿಗೆ ಬರುವಂತೆ ಒತ್ತಡ ಹೇರುತ್ತಿದ್ದಾರೆ.

ಇನ್ನು ಇಂದು ಬೆಳಗ್ಗೆ 4 ಗಂಟೆಯಿಂದಲೇ ನಗರದಲ್ಲಿ ಬಸ್‌ ಸಂಚಾರ ಸ್ತಬ್ಧವಾಗಿವೆ. ಹೀಗಾಗಿ ಬಸ್‌ಗಳನ್ನು ಯಥಾಸ್ಥಿತಿಯಲ್ಲಿ ಓಡಾಡುತ್ತವೆ ಇಲ್ಲವೇ ಎಂದು ಬಸ್‌ ನಿಲ್ದಾಣದಲ್ಲಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಒಂದು ಕಡೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗಗಲೇ ಬೇಕು ಎಂದು ಕೆಲ ನೌಕರರು ಬಸ್‌ ಓಡಿಸುವುದಕ್ಕೆ ಮುಂದಾಗಿದ್ದಾರೆ. ಮತ್ತೊಂದೆಡೆ ಇಲ್ಲ ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ ಬಂದ್‌ ನಿಲ್ಲುವುದಿಲ್ಲ ಎಂದು ಶಾಂತಿಯುತವಾಗಿ ಮುಷ್ಕರ ಮಾಡುತ್ತೇವೆ ಎಂದು ಅನಂತ ಸುಬ್ಬರಾವ್‌ ಹೇಳಿದ್ದಾರೆ.

ಒಟ್ಟಾರೆ ಈವರೆಗೂ ಸಾರ್ವಜನಿಕರಿಗೆ ಬೆಂಗಳೂರಿನಲ್ಲಿ ಯಾವುದೇ ಬಸ್‌ ಬಂದ್‌ಬಿಸಿ ತಟ್ಟಿಲ್ಲ. ಆದರೆ ಬೆಳಗಾವಿ ಇತರ ಭಾಗಗಳಲ್ಲಿ ಬಂದ್‌ ಆಗುತ್ತಿದೆ. ಇದು 6 ಗಂಟೆ ನಂತರ ಯಾವ ಸ್ಥಿತಿಗೆ ತಲುಪುತ್ತದೋ ನೋಡಬೇಕಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ