NEWSಕೃಷಿನಮ್ಮಜಿಲ್ಲೆ

ಬಗರಹುಕುಂ ಸಾಗುವಳಿ ಹೆಸರಿನಲ್ಲಿ ಸರ್ಕಾರಿ ಜಮೀನು ಬಂಡವಾಳಶಾಹಿಗ ಪಾಲು: ತಪ್ಪಿಸಲು ಸಚಿವರಿಗೆ ರೈತ ಮುಖಂಡರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಂದಾಯ ಇಲಾಖೆಯ ದಾಖಲಾತಿಗಳನ್ನು ಗಣಕೀಕರಣ ಮಾಡುವ ವೇಳೆ ಬಹಳಷ್ಟು ಕಂದಾಯ ನೌಕರರು ಸಂಬಂಧಿಕರ ಹೆಸರಿನಲ್ಲಿ ಸರ್ಕಾರಿ ಭೂಮಿಗಳ ದಾಖಲಾತಿ ಆರ್‌ಟಿಸಿ ಸೃಷ್ಟಿಸಿ. ಹಾಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲಿಬ್ಬಿಸಲು ವಾಮ ಮಾರ್ಗ ಬಳಸಿದ್ದಾರೆ ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ತನಿಖೆ ನಡೆಸಿ ನೈಜ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುೂರ್ ಶಾಂತಕುಮಾರ್ ಆಗ್ರಹಿಸಿದ್ದಾರೆ.

ಈ ಸಂಬಂಧ ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ನೀಡಿರುವ ಆದೇಶದಂತೆ ಬಗರಹುಕುಂ ಸಾಗುವಳಿ ಪತ್ರ ನೀಡಿದರೆ ನಿಜವಾಗಿ ಸಾಗುವಳಿ ಮಾಡುತ್ತಿರುವ ಲಕ್ಷಾಂತರ ರೈತರಿಗೆ ದ್ರೋಹವಾಗುತ್ತದೆ. ಈ ಬಗ್ಗೆ 18 ರಂದು ಕಂದಾಯ ಸಚಿವರನ್ನು ಭೇಟಿ ಮಾಡಿ ಒತ್ತಹಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನದಿ ಭಾಗದ ರಾಜ್ಯಗಳು ತಮಿಳುನಾಡು, ಪಾಂಡಿಚೇರಿ, ಕೇರಳ, ಕರ್ನಾಟಕ ರೈತ ಮುಖಂಡರ ಸಭೆ ಇದೇ ಅ.22 ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಕಾವೇರಿ ನೀರು ಸದ್ಬಳಕೆ. ಮೇಕೆದಾಟು ಜಲಾಶಯ ನಿರ್ಮಾಣ. ಕಾವೇರಿ ನದಿ ಕಲ್ಮಶ ತಡೆಗಟ್ಟುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇನ್ನು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಿಂಟಾಲ್ 2280 ರೂ.ಗೆ ಹೆಚ್ಚುವರಿ ರಾಜ್ಯ ಸರ್ಕಾರ 500 ಪ್ರೋತ್ಸಾಹ ಧನ ನೀಡಿ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಪಿಎಂಸಿಗಳಲ್ಲಿ ರಾಜ್ಯಾದ್ಯಂತ ರೈತರ ಸುಲಿಗೆ ನಡೆಯುತ್ತಿದೆ. ಕಾನೂನು ಬಾಹಿರವಾಗಿ ಶೇ.10 ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ರಾಜ್ಯಮಟ್ಟದ ನಿರ್ದೇಶಕರಿಗೆ ದೂರು ಸಲ್ಲಿಸಲಾಗಿದೆ. ನಿರ್ಲಕ್ಷ್ಯ ಮಾಡಿದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಇನ್ನು ಜಿಎಂ ಸೀಡ್ಸ್ ವಿರೋಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯ ಸರ್ಕಾರದ ವತಿಯಿಂದ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಗುಜರಾತ್‌ನಲ್ಲಿ ಟನ್ನ ಕಬ್ಬಿಗೆ 4,500 ನೀಡುತ್ತಿದ್ದಾರೆ. ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚು ಬೆಲೆ ನೀಡದೆ ರೈತರನ್ನ ವಂಚಿಸುತ್ತಿದೆ. ಸರ್ಕಾರ ಯಾವುದೇ ಮುಲಾಜಿಗೂ ಒಳಗಾಗದೆ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಪಿ.ಸೋಮಶೇಖರ್, ನೀಲಕಂಠಪ್ಪ, ಕಿರಗಸೂರು ಶಂಕರ, ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಪರಶಿವಮೂರ್ತಿ, ಕೆಂಡಗಣ್ಣ ಸ್ವಾಮಿ, ಕಮಲಮ್ಮ, ಕೋಟೆ ರಾಜೇಶ್, ರಂಗರಾಜು, ಅಂಬಳೆ ಮಂಜುನಾಥ್, ಪ್ರಸಾದ್ ನಾಯಕ್, ಮಹಾಲಿಂಗ ನಾಯಕ, ಕುಳ್ಳೆಗೌಡ, ಶಿವಸ್ವಾಮಿ, ಸಿದ್ದರಾಮು, ಮಹಾದೇವ ಸ್ವಾಮಿ, ಸುನೀಲ್, ಪಿ.ರಾಜು ಮುಂತಾದವರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್