CRIMENEWSನಮ್ಮರಾಜ್ಯ

ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ನವ ವಿವಾಹಿತೆ ಸೇರಿ ಇಬ್ಬರು ಮೃತ ಓರ್ವನ ಸ್ಥಿತಿ ಗಂಭೀರ

ನೊಂದವರಿಗೆ ಹೆಗಲು

ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ.

ಇಂದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ರಕ್ಷಿತಾ ರೆಡ್ಡಿ (23), ಪವನ್ ರೆಡ್ಡಿ (30) ಮೃತಪಟ್ಟಿದ್ದು, ರಾಜಶೇಖರ್ ರೆಡ್ಡಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

5 ತಿಂಗಳ ಹಿಂದೆಯಷ್ಟೇ ಮದುವೆ: ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಾಜಶೇಖರ್ ರೆಡ್ಡಿ ಮತ್ತು ರಕ್ಷಿತಾ ರೆಡ್ಡಿ (23) ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಅಪಘಾತದಲ್ಲಿ ಪತ್ನಿ ಕೊನೆಯುಸಿರೆಳೆದಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ರಾಜಶೇಖರ್ ರೆಡ್ಡಿ, ನವೆಂಬರ್ ತಿಂಗಳಲ್ಲಿ ರಕ್ಷಿತಾ ರೆಡ್ಡಿಯನ್ನು ಮದುವೆಯಾಗಿದ್ದರು. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸ್ನೇಹಿತ ಪವನ್ ರೆಡ್ಡಿ ಜತೆ ದಂಪತಿ ಹಿಂದೂಪುರದ ಅವಳಗಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾತ್ರೆ ಸಂಭ್ರಮದಲ್ಲಿ ಭಾಗವಹಿಸಬೇಕೆಂದು ಊರಿಗೆ ಹೋಗುತ್ತಿದ್ದ ನವಜೋಡಿಗೆ ಅಪಘಾತವಾದ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುವಂತಿತ್ತು. ಜೋಳದ ರಾಶಿ ಗ್ರಾಮಕ್ಕೆ ಮೃತದೇಹ ತರುತ್ತಿದ್ದಂತೆ ಕುಟುಂಬಸ್ಥರು, ಸಂಬಂಧಿಕರ ರೋದನ ನಿಂತಿದ್ದ ಜನರಲ್ಲೂ ದುಃಖ ತರಿಸುತ್ತಿತ್ತು.

Megha
the authorMegha

Leave a Reply

error: Content is protected !!
Latest news
ಅಭ್ಯರ್ಥಿಗಳಿಗೆ ನಿರಾಳ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ಜು.8ರ ವರೆಗೆ ವಿಸ್ತರಣೆ! ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ 5ಮಂದಿ ಸಾವು, ನಲುಗಿದ ಜನತೆ, ಸಮುದ್ರದಂತೆ ಕಂಡುಬಂದ ರಸ್ತೆಗಳು BMTC: ಜುಲೈ 6ರಂದು ನೌಕರರ Pay fixation ಸಂಬಂಧ ಕೇಂದ್ರ ಕಚೇರಿಯಲ್ಲಿ ಸಭೆ ನಿಗದಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ