CRIMENEWSನಮ್ಮಜಿಲ್ಲೆ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

ವಿಜಯಪಥ ಸಮಗ್ರ ಸುದ್ದಿ

ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಯ ಕಾಮಸಮುದ್ರದ ಬಳಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಕಾಮಸಮುದ್ರದ ಹತ್ತಿರ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಅತೀ ವೇಗದಲ್ಲಿದ್ದ ಕಾರಣ ಕಾರು ರಸ್ತೆ ಮಧ್ಯದ ಡಿವೈಡರ್‌ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಚಾಲಕ ಒಬ್ಬರೇ ಇದ್ದಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಬಂದ ಸ್ಥಳೀಯರು ಚಾಲಕನ ನೆರವಿಗೆ ಧಾವಿಸಿದರು. ಅಪಘಾತದಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತಕ್ಕೆ ಕಾರಣ ಏನು ಎಂಬುವುದು ತನಿಖೆಯಿಂದ ತಿಳಿಯಬೇಕಿದೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?