NEWSನಮ್ಮಜಿಲ್ಲೆನಮ್ಮರಾಜ್ಯ

ಮುಷ್ಕರವೇಳೆ ದಾಖಲಾಗಿದ್ದ ಪ್ರಕರಣ: BMTC 13 ನೌಕರರು ನಿರ್ದೋಷಿಗಳು – ಬೆಂಗಳೂರು ಎಸಿಎಂಎಂ ಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರದ ವೇಳೆ ಪೊಲೀಸ್‌ ಪ್ರಕರಣ ದಾಖಲಿಸಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ಕೋರ್ಟ್‌ನಲ್ಲಿ ಮತ್ತೊಮ್ಮೆ ಸೋಲಾಗಿದೆ.

ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ 2021ರ ಮುಷ್ಕರದ ವೇಳೆ ಬಿಎಂಟಿಸಿ ನೌಕರ ಮುಲ್ತಾನಿ ಸೇರಿದಂತೆ ಇತರ 13 ಮಂದಿ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮಂಗಳವಾರ (ಡಿ.12) ಕೈಗೆತ್ತಿಕೊಂಡ 46ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಧೀಶರು ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಈ 13 ಮಂದಿ ನೌಕರರನ್ನು ನಿರ್ದೋಷಿಗಳು ಎಂದು ತೀರ್ಪು ನೀಡುವ ಮೂಲಕ ಪ್ರಕರಣವನ್ನು ಕುಲಾಸೆಗೊಳಿಸಿದರು.

ಈ ಮೂಲಕ ನೌಕರರ ವಿರುದ್ಧ ಸುಖಾಸುಮ್ಮನೇ ಪೊಲೀಸ್‌ ಕೇಸ್‌ ದಾಖಲಿಸಿ ಕಿರುಕುಳ ನೀಡುತ್ತಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ನ್ಯಾಯಾಲಯದಲ್ಲಿ ಮೊಗದೊಮ್ಮೆ ಸೋಲಾದಂತಾಗಿದೆ.

ಬಿಎಂಟಿಸಿ ನೌಕರರ ಪರವಾಗಿ ವಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ನೌಕರರು ಏನು ತಪ್ಪು ಮಾಡಿಲ್ಲ, ಆದರೂ ಅವರನ್ನು ಸೇವೆಯಿಂದ ವಜಾಗೊಳಿಸಿದ್ದು ಅಲ್ಲದೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿದ್ದಾರೆ ಹೀಗಾಗಿ ಅವರ ವಿರುದ್ಧ ಮಾಡಲಾಗಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇದೇ ವೇಳೆ ಸರ್ಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಿದರು. ಈ ಎರಡೂ ಕಡೆ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ನೌಕರರು ಯಾವುದೇ ತಪ್ಪು ಮಾಡಿಲ್ಲ ಅವರು ನಿರಪರಾಧಿಗಳು ಎಂದು ತೀರ್ಪು ನೀಡಿದ್ದಾರೆ.

ಶುಲ್ಕ ಪಡೆಯದೆ ವಕಾಲತು ವಹಿಸಿದ್ದ ವಕೀಲ ಎಚ್‌.ಬಿ.ಶಿವರಾಜು: ಈ 13 ಮಂದಿ ಸಾರಿಗೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳ ಪರ ಕೀಲ ಎಚ್‌.ಬಿ.ಶಿವರಾಜು ಅವರು ವಕಾಲತ್ತು ವಹಿಸಿದ್ದು, ಈ ಪ್ರಕರಣಗಳ ಸಂಬಂಧ ನೌಕರರಿಂದ ಯಾವುದೇ ಶುಲ್ಕ ಪಡೆಯದೆ ಮಾನವೀಯತೆ ಮೆರೆದಿದ್ದಾರೆ.

ಇನ್ನು ವಕೀಲರು ಒಂದೇಒಂದು ರೂಪಾಯಿಯನ್ನು ಪಡೆಯದೆ ಉಚಿತವಾಗಿ ಮತ್ತು ಮಾನವೀಯ ದೃಷ್ಟಿಯಿಂದ ಕೋರ್ಟ್‌ನಲ್ಲಿ ತಮ್ಮಪರ ವಾದ ಮಂಡಿಸಿ ಪ್ರಕರಣದಲ್ಲಿ ನಮ್ಮನ್ನು ನಿರ್ದೋಷಿಗಳು ಎಂದು ಸಾಬೀತುಪಡಿಸುವಲ್ಲಿ ಸಫಲರಾಗಿದ್ದಕ್ಕೆ ಪ್ರತಿಯಾಗಿ ಹೂವಿನ ಹಾರ ತುರಾಯಿ ಹಾಕಿ ಕೋರ್ಟ್‌ ಆವರಣದಲ್ಲೇ ಗೌರವಿಸಲು ಮುಂದಾದರು.

ಈ ವೇಳೆ ಈ 13 ಮಂದಿಯ ಸನ್ಮಾನವನ್ನು ಸ್ವೀಕರಲು ಒಪ್ಪದ ವಕೀಲ ಶಿವರಾಜು ಅವರು ನಿಮ್ಮ ಸಾರಿಗೆ ನೌಕರರ ಸಹವಾಸ ನಮಗೆ ಸಾಕು. ಇನ್ನು ಮುಂದೆ ನಾನು ಸಾರಿಗೆ ನೌಕರರ ಪರ ಯಾವುದೇ ವಕಾಲತ್ತು ವಹಿಸುವುದಿಲ್ಲ ಎಂದು ಹೇಳಿ ಸನ್ಮಾನವನ್ನು ಸ್ವೀಕರಿಸಲಿಲ್ಲ.

ಇದಕ್ಕೆ ಬಲವಾದ ಕಾರಣ ಎಂದರೆ ಕೆಲ ದಿನಗಳ ಹಿಂದಷ್ಟೆ ವಕೀಲರ ವಿರುದ್ಧ ಕೆಲ ಸಾರಿಗೆ ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿಯಾಗಿ ಬರೆದುಕೊಂಡಿದ್ದರು. ಇದರಿಂದ ಬೇಸರಗೊಂಡು ಇನ್ನು ಮುಂದೆ ಸಾರಿಗೆ ನೌಕರರಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ತೆಗೆದುಕೊಳ್ಳುವುದಿಲ್ಲ ಎಂದು ಅಸಮಾಧಾನದಿಂದಲೇ ಸನ್ಮಾನಿಸಲು ಮುಂದಾದ ನೌಕರರಿಗೆ ಹೇಳಿ ಸನ್ಮಾನವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ