CrimeNEWSನಮ್ಮಜಿಲ್ಲೆ

ಮುಷ್ಕರದ ವೇಳೆ ದಾಖಲಾಗಿದ್ದ ಪ್ರಕರಣ: ಇಂದು BMTCಯ 6 ಮಂದಿ ನೌಕರರ ಪರ ಕೋರ್ಟ್‌ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರದ ವೇಳೆ ಪೊಲೀಸ್‌ ಪ್ರಕರಣ ದಾಖಲಿಸಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ಕೋರ್ಟ್‌ನಲ್ಲಿ ಸೋಲಾಗಿದೆ.

ಕೆ.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಮುಷ್ಕರದ ವೇಳೆ ಬಿಎಂಟಿಸಿ ನೌಕರ ಬಸವರಾಜು ಸೇರಿದಂತೆ ಇತರ 6 ಮಂದಿ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇಂದು ಕೈಗೆತ್ತಿಕೊಂಡ ಮೆಯೋಹಾಲ್‌ನ 10ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಧೀಶರು ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಈ 6ಮಂದಿ ನೌಕರರನ್ನು ನಿರ್ದೋಷಿಗಳು ಎಂದು ತೀರ್ಪು ನೀಡಿದ್ದಾರೆ.

ಈ ಮೂಲಕ ನೌಕರರ ವಿರುದ್ಧ ಸುಖಾಸುಮ್ಮನೇ ಪೊಲೀಸ್‌ ಕೇಸ್‌ ದಾಖಲಿಸಿ ಕಿರುಕುಳ ನೀಡುತ್ತಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ನ್ಯಾಯಾಲಯದಲ್ಲಿ ಸೋಲಾಗಿದೆ.

ಬಿಎಂಟಿಸಿ ನೌಕರರ ಪರವಾಗಿ ವಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ನೌಕರರು ಏನು ತಪ್ಪು ಮಾಡಿಲ್ಲ, ಆದರೂ ಅವರನ್ನು ಸೇವೆಯಿಂದ ವಜಾಗೊಳಿಸಿದ್ದು ಅಲ್ಲದೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿದ್ದಾರೆ ಹೀಗಾಗಿ ಅವರ ವಿರುದ್ಧ ಮಾಡಲಾಗಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇದೇ ವೇಳೆ ಸರ್ಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಿದರು. ಈ ಎರಡೂ ಕಡೆಯ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ನೌಕರರು ಯಾವುದೇ ತಪ್ಪು ಮಾಡಿಲ್ಲ ಅವರು ನಿರಪರಾಧಿಗಳು ಎಂದು ತೀರ್ಪು ನೀಡಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ