CRIMENEWSನಮ್ಮಜಿಲ್ಲೆ

ಹೊಸಪೇಟೆ: ಕಸದ ಹೆಸರಿನಲ್ಲಿ ಗುಜರಿ ಸಾಮಗ್ರಿ ಸಾಗಣೆ ಪ್ರಕರಣ- ಡಿಎಂ ಸೇರಿ ನಾಲ್ವರ ಅಮಾನತು ಮಾಡಿ ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹೊಸಪೇಟೆ: ಕಸದ ಹೆಸರಿನಲ್ಲಿ ಗುಜರಿ ಸಾಮಗ್ರಿಗಳ ಸಾಗಿಸಿದ್ದ ಸಂಬಂಧ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಘಕಟ ವ್ಯವಸ್ಥಾಪಕರು ಸೇರಿದಂತೆ ನಾಲ್ವರನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಅಮಾನತುಗೊಳಿಸಿ ಅದೇಶ ಹೊರಡಿಸಿದ್ದಾರೆ.

ಹೊಸಪೇಟೆ ಸಾರಿಗೆ ಘಟಕದ ಘಟಕ ವ್ಯವಸ್ಥಾಪಕ ಮರಿಲಿಂಗಪ್ಪ, ಸಾರಿಗೆ ನಿಗಮದ ಹವಾಲ್ದಾರ್ ಇಬ್ರಾಹಿಂ, ವಿಭಾಗೀಯ ಭದ್ರತಾ ನಿರೀಕ್ಷಕ (ಪ್ರಸ್ತುತ ರಾಯಚೂರಿನ ಅಂಕಿ ಸಂಖ್ಯೆ – ಮೇಲ್ವಿಚಾರಕ) ಜಿ.ರವಿ, ಸಹಾಯಕ ಉಗ್ರಾಣಾಧಿಕಾರಿ (ಪ್ರಸ್ತುತ ಪ್ರಾದೇಶಿಕ ಕಾರ್ಯಾಗಾರ ಯಾದಗಿರಿಗೆ ನಿಯೋಜನೆ ಯಲ್ಲಿರುವವರು) ತಂಬ್ರಹಳ್ಳಿ ಲಿಂಗರಾಜು ಅಮಾನತುಗೊಂಡವರು.

ಘಟನೆ ವಿವರ: ಘಟಕದಲ್ಲಿ ಜೂ.4 ಹಾಗೂ ಜೂ.5ರಂದು ಅರು ಲಾರಿಗಳಲ್ಲಿ ಟೆಂಡ‌ರ್ ಕರೆಯದೆ ಕಸ ವಿಲೇವಾರಿ ಮಾಡಿದ್ದು ಹಾಗೂ ಈ ಕುರಿತು ಮೇಲಧಿಕಾರಿಗಳು ಸೇರಿದಂತೆ ಯಾರಿಗೂ ಮಾಹಿತಿ ನೀಡದಿರುವುದು ಸಂಶಯಕ್ಕೆ ಆಸ್ಪದವಾಗಿತ್ತು.

ಅಲ್ಲದೆ ನಿಯಮ ಉಲ್ಲಂಘನೆ ಮಾಡಿ ಕಸ ವಿಲೇವಾರಿ ಮಾಡುವ ಸಮಯದಲ್ಲಿ ಅನುಪಯುಕ್ತ ಸಾಮಗ್ರಿಗಳನ್ನು ಸಹ ಸಾಗಣೆ ಮಾಡಿರುವುದು ದಾಖಲಾತಿಗಳಿಂದ ಧೃಡಪಟ್ಟಿದೆ.

ಹೀಗೆ ಸಂಸ್ಥೆಯ ಘನತೆಗೆ ಕುಂದುಂಟಾಗುವ ರೀತಿಯಲ್ಲಿ ನಡೆದುಕೊಳ್ಳಲಾಗಿದೆ. ಜತೆಗೆ ಸಂಸ್ಥೆಯ ನೌಕರರ ನಿಯಮಾವಳಿ ಪ್ರಕಾರ ಶಿಕ್ಷೆ ವಿಧಿಸಲು ಅರ್ಹವಾದಂತಹ ಗಂಭೀರ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರುಆದೇಶ ಹೊರಡಿಸಿದ್ದು, ಮುಂದಿನ ವಿಚಾರಣೆಗೆ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು