NEWSನಮ್ಮಜಿಲ್ಲೆಮೈಸೂರುವಿಶೇಷಸಂಸ್ಕೃತಿ

ಮೈಸೂರು ಪಾಕ್ ಹಾಗೂ ಗುಲಾಬಿ ಹೂ ನೀಡಿ ಮೈಸೂರಿನಲ್ಲಿ ವಿಭಿನ್ನವಾಗಿ ಪ್ರವಾಸೋದ್ಯಮ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ನಗರದ ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರಿಗೆ ಮೈಸೂರು ಪಾಕ್ ಹಾಗೂ ಗುಲಾಬಿ ಹೂ ನೀಡುವ ಮೂಲಕ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶುಶ್ರೂತ್ ಗೌಡ, ಯುವ ಜನತೆಗೆ ಪರಿಸರ ಕುರಿತು ಅರಿವು ಮೂಡಿಸುವಲ್ಲಿ ಪರಿಸರ ಪ್ರವಾಸೋದ್ಯಮದ ಕೂಡುಗೆ ಮಹತ್ವವಾಗಿದೆ. ಪ್ರವಾಸ ಮಾಡುವುದರಿಂದ ದೇಹ ಮತ್ತು ಮನಸ್ಸಿಗೆ ಚೈತನ್ಯ ಹೆಚ್ಚಿ ಜೀವನೋತ್ಸವ ಹೆಚ್ಚುತ್ತದೆ. ಪ್ರವಾಸೋದ್ಯಮ ಇಂದು ಬೃಹತ್ ಉದ್ಯಮವಾಗಿ ಬೆಳೆದಿದ್ದು, ಪ್ರವಾಸಿ ತಾಣಗಳಲ್ಲಿ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದರು.

ಇನ್ನು ಪ್ರವಾಸ ಬದುಕಿನ ಜಂಜಾಟಗಳ ನಡುವೆ ತುಸು ಅರಾಮವಾಗಿಸಲು ಮನಸು ಮಾನಸಿಕವಾಗಿ ಸಜ್ಜಾಗುತ್ತದೆ. ದೇಶಸುತ್ತು ಕೋಶ ಓದು ಎಂಬ ಮಾತಿನಂತೆ ಪ್ರವಾಸ ಮಾಡುವುದರಿಂದ ಜ್ಞಾನ ವೃದ್ಧಿಯಾಗುವುದರಿಂದ ವಿಶಾಲವಾಗಿ ಯೋಚಿಸುವ ದೃಷ್ಟಿಕೋನ ಬೆಳೆಯುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜಿ.ರಾಘವೇಂದ್ರ, ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ, ಮಹದೇವ, ವರುಣಮಹದೇವು, ರವಿಚಂದ್ರ, ಲೋಕೇಶ್ ಮುಂತಾದವರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ