CRIMENEWSನಮ್ಮಜಿಲ್ಲೆ

ಸಾರಿಗೆ ಇಲಾಖೆಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟಿದ ಹಬ್ಬ ಆಚರಣೆ: ಸಿಬ್ಬಂದಿ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟಿದ ಹಬ್ಬ ಆಚರಿಸಿದ ಸಿಬ್ಬಂದಿಗಳ ಅಮಾನತಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಆಯುಕ್ತರು ಹುಟ್ಟಿದ ಹಬ್ಬ ಆಚರಿಸಿದ ಅಧಿಕಾರಿಗಳನ್ನ ಅಮಾನತು ಮಾಡಿದ್ದಾರೆ.

ಇನ್ನು ಈ ಮೂಲಕ ಸಾರಿಗೆ ಇಲಾಖೆಯಲ್ಲಿ ಯಾವುದೇ ನಿಯಮ ಬಾಹಿರ ಚಟುವಟಕೆಗಳನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಎಲ್ಲ ಅಧಿಕಾರಿಗಳು/ ಸಿಬ್ಬಂದಿಗಳಿಗೆ ರವಾನಿಸಿದ್ದಾರೆ.

ಇದೇ ಜುಲೈ 11 ರಂದು ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ARTO) ಕಚೇರಿಯಲ್ಲಿ ಸಿಬ್ಬಂದಿಗಳು ಖಾಸಗಿ ವ್ಯಕ್ತಿಯ ಹುಟ್ಟು ಹಬ್ಬದ ಆಚರಣೆ ಮಾಡಿದ್ದರು. ಆ ವಿಡಿಯೋ ಯೂಟ್ಯೂಬ್‌ನಲ್ಲಿ ಪ್ರಸಾರವಾಗಿತ್ತು.

ಈ ಬಗ್ಗೆ ಮಾಹಿತಿ ಪಡೆದ ಸಾರಿಗೆ ಹಾಗೂ ಮುಜರಾಯಿ ಸಚಿವರು, ಕೂಡಲೇ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಶಿಸ್ತು ಕ್ರಮ ತೆಗೆದು ಕೊಳ್ಳಲು ಸಾರಿಗೆ ಆಯುಕ್ತರಿಗೆ ಸೂಚಿಸಿದ್ದರು. ಅದರಂತೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆಡಳಿತ) ಎಸ್.ಎನ್. ಮಧುರ, ಅಧೀಕ್ಷಕರಾದ ಎಂ.ಕೆ. ಗಿರೀಶ್ ಮತ್ತು ಎನ್.ಆರ್.ಆಶಾ ಹಾಗೂ ಮೋಟಾರು ವಾಹನ ನಿರೀಕ್ಷಕಕರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದರು.

ಬಳಿಕ ಅಧಿಕಾರಿಗಳು ವಿವರಣೆ ನೀಡಿದ್ದರು ಆದರೆ ಅವರ ವಿವರಣೆ ಸಮರ್ಪಕವಾಗಿಲ್ಲದ ಕಾರಣ ಹಾಗೂ ಕಚೇರಿ ವೇಳೆಯಲ್ಲಿಯೇ ಒಬ್ಬ ಖಾಸಗಿ ವ್ಯಕ್ತಿಯ ಹುಟ್ಟು ಹಬ್ಬವನ್ನು ಅದೂಕೂಡ ಕಚೇರಿಯಲ್ಲಿಯೇ ಆಚರಣೆ ಮಾಡಿರುವುದಲ್ಲದೇ, ತಾವೇ ಖುದ್ದು ಹಾಜರಾಗಿ ಶಾಲು ಹೊದಿಸಿ ಶುಭ ಹಾರೈಸಿರುವುದು ಕಂಡುಬಂದಿದೆ.

ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿದ್ದು, ಈ ರೀತಿ ನಡೆದುಕೊಂಡಿರುವುದು ಕಾನೂನು/ ನಿಯಮ ಬಾಹಿರವಾಗಿದೆ ಎಂದು ಮನಗಂಡು ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ